ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ಬೆಂ’ಬಲ’
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
Team Udayavani, Mar 29, 2022, 3:47 PM IST
ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಧೋರಣೆ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳ ಒಕ್ಕೂಟ ಕರೆ ನೀಡಿದ ಮುಷ್ಕರಕ್ಕೆ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದು, ಸಾರ್ವಜನಿಕ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿತ್ತು. ಸೋಮವಾರ ಗ್ರಾಮೀಣ, ತಾಲೂಕು ಹಾಗೂ ನಗರಗಳಲ್ಲಿ ಸಂಘಟನೆಗಳು ಕಾರ್ಮಿಕರೊಂದಿಗೆ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಂಕ್, ವಿಮೆ, ಆದಾಯ ತೆರಿಗೆ, ಅಂಚೆ ಸೇರಿದಂತೆ ಹಲವು ಸೇವೆಗಳಲ್ಲಿ ಸೋಮವಾರ ವ್ಯತ್ಯಯವಾಗಿದ್ದು, ಮಂಗಳವಾರವೂ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ. ಬ್ಯಾಂಕ್ ಸೇವೆ ಸ್ಥಗಿತಗೊಳಿಸಲಾಯಿತು. ಕೇಂದ್ರ ಸರ್ಕಾರ ಹಲವು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಸಜ್ಜಾಗಿದ್ದು, ಈ ನಿರ್ಧಾರ ಸಮರ್ಥನೀಯವಲ್ಲ. ದೇಶದ ಆರ್ಥಿಕತೆ ಮತ್ತು ಜನತೆಗೆ ಅನುಕೂಲಕರವಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಸೇವಾ ವಲಯದಲ್ಲಿರುವ ಬ್ಯಾಂಕುಗಳನ್ನು ಬಲವರ್ಧನೆಗೊಳಿಸಬೇಕು. ಬ್ಯಾಂಕುಗಳ ಖಾಸಗೀಕರಣ ನಿಲ್ಲಿಸಬೇಕು. ಬ್ಯಾಂಕುಗಳ ಠೇವಣಿ ಮೇಲಿನ ಬಡ್ಡಿಯನ್ನು ಹೆಚ್ಚಿಸಬೇಕು. ಹೆಚ್ಚಿನ ಸೇವಾ ಶುಲ್ಕವನ್ನು ಗ್ರಾಹಕರ ಮೇಲೆ ವಿಧಿಸಬಾರದು. ಬ್ಯಾಂಕು ನೌಕರರಿಗೆ ಪಿಂಚಣಿ ನೀಡುವುದು, ಎನ್ಪಿಎಸ್ ನಿಲ್ಲಿಸಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
ಬ್ಯಾಂಕ್ ನೌಕರರ ಪ್ರತಿಭಟನೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಬ್ಯಾಂಕ್ ನೌಕರರ ಸಂಘಟನೆ ಪ್ರಧಾನ ಕಾರ್ಯದರ್ಶಿ ಕೆ.ಆರ್. ಬಸವರಾಜ್, ಪದಾಧಿಕಾರಿಗಳಾದ ಉಜ್ವಲ್ ಪಡುಬಿದ್ರೆ, ಎಸ್ಪಿ ನಂದನ್, ಶ್ರೀನಿವಾಸ್, ಕೆ.ಜಿ. ರೇವಣ್ಣ ಹಾಗೂ ಅಂಚೆ ನೌಕರರ ಪ್ರತಿಭಟನೆಯಲ್ಲಿ ಅಂಚೆ ನೌಕರರ ಜಂಟಿಕ್ರಿಯಾ ಸಮಿತಿಯ ಅಧ್ಯಕ್ಷ ಮಹೇಂದ್ರಮೌರ್ಯ, ಜೆಸಿಎ ಕಾರ್ಯದರ್ಶಿ ಎಂ. ಡಿ. ಲೋಹಿತ್ ಕುಮಾರ್, ಖಜಾಂಚಿ ಸಿ.ಬಿ.ವಿಕ್ರಮ್ ಇದ್ದರು.
ಅಖೀಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಜಿಲ್ಲಾ ವಿಭಾಗದಿಂದಲೂ ಪ್ರತಿಭಟನೆ ನಡೆಯಿತು. ಸಂಘದ ಅಧ್ಯಕ್ಷ ಜೋಸೆಫ್ ಬರೋಟೊ, ಕಾರ್ಯದರ್ಶಿ ಅಸ್ಲಂ ಅಹ್ಮದ್, ಖಜಾಂಚಿ ಆರ್. ಮಂಜುನಾಥ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ