ಅನುಮಾನಾಸ್ಪದವಾಗಿ ಜಾನುವಾರುಗಳಸಾವು: ದೂರು ದಾಖಲು


Team Udayavani, Mar 31, 2019, 5:25 PM IST

Udayavani Kannada Newspaper

ಕೊಪ್ಪ: ತಾಲೂಕಿನ ಭುವನಕೋಟೆಯಲ್ಲಿ ಕಳೆದ 15 ದಿನಗಳಿಂದ ಏಳು ಜಾನುವಾರುಗಳು ಅನುಮಾನಸ್ಪದವಾಗಿ ಮೃತಪಟ್ಟಿದ್ದು, ಒಂದು ದನ ಕಾಣೆಯಾಗಿದೆ. ಜಾನುವಾರುಗಳ ಸಾವಿಗೆ ವಿಷಾಹಾರ ಸೇವನೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

ಘಟನೆಯ ಕುರಿತು ಕಿಶೋರ್‌ ಎಂಬವರು ಜಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಭುವನಕೋಟೆಯ ಕಿಶೋರ್‌ರವರ ಒಂದು ಆಕಳು ಸಾವನ್ನಪ್ಪಿದ್ದರೆ, ಒಂದು ಆಕಳು ಕಾಣೆಯಾಗಿದೆ. ಜಯಲಕ್ಷ್ಮೀ ಎನ್ನುವವರ ಎರಡು ದನಗಳು ಸಾವಿಗೀಡಾಗಿವೆ.

ರತ್ನಾಕರ ಅವರ 3 ದನಗಳು ಶನಿವಾರ ಮೃತಪಟ್ಟಿದ್ದು, ಒಟ್ಟು 4 ದನಗಳು ಸಾವನ್ನಪ್ಪಿವೆ. ಈ ಪೈಕಿ 2 ದನಗಳು 20 ದಿನದ ಹಿಂದೆ ಕರು ಹಾಕಿದ್ದು ಇನ್ನೆರಡು ದನಗಳು 1 ತಿಂಗಳ ಹಿಂದೆ ಕರುಹಾಕಿವೆ. ಈಗ ನಾಲ್ಕೂ ಕರುಗಳು ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿವೆ. ಇವರ ಮನೆ ಪಕ್ಕದಲ್ಲಿ ಸುಬ್ರಹ್ಮಣ್ಯ ಎಂಬವರ ತೋಟವಿದ್ದು, 2 ದನಗಳು ತೋಟದೊಳಗೆ ಸಾವನ್ನಪ್ಪಿದ್ದರೆ ಇನ್ನುಳಿದವು ತೋಟದ ಹೊರಭಾಗದಲ್ಲಿ ಮೃತಪಟ್ಟಿವೆ.

ಜಾನುವಾರುಗಳು ಮೃತಪಟ್ಟಿದ್ದ ಜಾಗದಲ್ಲಿ ಗದ್ದೆಗೆ ಬಳಕೆ ಮಾಡುವ ಕೀಟನಾಶಕ ಟೀಮೇಟ್‌ನ ವಾಸನೆ ಬರುತ್ತಿದ್ದು, ದುಷ್ಕರ್ಮಿಗಳು ಜಾನುವಾರುಗಳನ್ನು ಸಾಯಿಸಲು ಟೀಮೇಟ್‌ ಬೆರೆಸಿದ ಆಹಾರ ಇಟ್ಟಿದ್ದು ಇದರ ಸೇವನೆಯಿಂದ ಜಾನುವಾರುಗಳು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.

ಕಳೆದ ಹತ್ತು ಹದಿನೈದು ದಿನಗಳಿಂದ ನಮ್ಮ ಮನೆ ಹಾಗೂ ಅಕ್ಕಪಕ್ಕದ ಮನೆಯ ದನಗಳು ಅನುಮಾನಸ್ಪದವಾಗಿ ಸಾವನ್ನಪ್ಪುತ್ತಿವೆ. ಈವರೆಗೆ 7 ದನಗಳು ಮೃತಪಟ್ಟಿದ್ದು ಒಂದು ದನ ಕಾಣೆಯಾಗಿದೆ. ವಿಷಾಹಾರ ಸೇವನೆಯಿಂದ ಜಾನುವಾರುಗಳು ಮೃತಪಟ್ಟಿರುವ ಶಂಕೆಯಿದ್ದು ಪಕ್ಕದ ತೋಟದ ಮಾಲೀಕರು ಟೀಮೇಟ್‌ ಮಿಶ್ರಿತ ವಿಷಾಹಾರ ಇಟ್ಟು ಜಾನುವಾರುಗಳನ್ನು ಸಾಯಿಸಿರಬಹುದು.ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಿ ನಮಗೆ ನ್ಯಾಯ ಕೊಡಿಸಬೇಕು ಕಿಶೋರ್‌ ಕುಮಾರ್‌, ಭುವನಕೋಟೆ, ದೂರುದಾರ

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.