ಮರ ಕಡಿದವರ ವಿರುದ್ದ ಕ್ರಮಕ್ಕೆ ಆಗ್ರಹ

ನಗರಸಭೆ- ಅರಣ್ಯ ಅಧಿಕಾರಿಗಳಿಂದಲೇ ಕಾನೂನು ಉಲ್ಲಂಘನೆ

Team Udayavani, Apr 5, 2022, 3:47 PM IST

tree

ಚಿಕ್ಕಮಗಳೂರು: ರಾಮನಹಳ್ಳಿ ಬಡಾವಣೆಯಲ್ಲಿರುವ ನೀರು ಶುದ್ಧೀಕರಣದ ಘಟಕದ ಆವರಣದಲ್ಲಿದ್ದ ನೂರಾರು ವರ್ಷಗಳ ಹಳೆಯ ಬೆಲೆ ಬಾಳುವ ಮರಗಳನ್ನು ಅರಣ್ಯ ಇಲಾಖೆ ಅನುಮತಿ ಇಲ್ಲದೆ ಹಾಡಹಗಲೇ ಕಡಿದಿರುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸೋಮವಾರ ನಗರದ ರಾಮನಹಳ್ಳಿ ಬಡಾವಣೆಯಲ್ಲಿರುವ ನೀರು ಶುದ್ಧೀಕರಣದ ಘಟಕದ ಆವರಣದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಅಧ್ಯಕ್ಷರು, ಪೌರಾಯುಕ್ತರು ಅರಣ್ಯ ಕಾನೂನುಗಳಿಗೆ ಗೌರವ ನೀಡದೆ ಸರ್ವಾಧಿ ಕಾರಿಗಳಂತೆ ಅಧಿಕಾರ ಚಲಾಯಿಸುತ್ತಿದ್ದಾರೆ. ಅರಣ್ಯ ಇಲಾಖೆ ಅನುಮತಿ ಪಡೆಯದೆ ನೂರಾರು ವರ್ಷಗಳ ಹಳೆಯ ಮರಗಳನ್ನು ಹಾಡಹಗಲೇ ಕಡಿಸುವ ಮೂಲಕ ನಗರಸಭೆ ಅಧಿಕಾರಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅಕ್ರಮವಾಗಿ ಮರಗಳನ್ನು ಕಡಿದಿರುವವರು ಹಾಗೂ ಕಡಿಯಲು ಕಾರಣರಾದವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕಾನೂನು ಕ್ರಮ ವಹಿಸದೇ ಮೌನಕ್ಕೆ ಶರಣಾಗಿದ್ದಾರೆಂದು ಆರೋಪಿಸಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ| ಕೆ.ಪಿ.ಅಂಶುಮಂತ್‌ ಮಾತನಾಡಿ, ಹಾಡಹಗಲೇ ಮರಗಳ್ಳತನ ಆಗಿದ್ದರೂ ನಗರಸಭೆ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ಈ ಮೂಲಕ ನಗರಸಭೆ ಆಯುಕ್ತರು ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ. ಇಲ್ಲಿನ ಶಾಸಕರು ರಕ್ಷಕರಾಗದೇ ಶೋಷಕರಾಗಿದ್ದಾರೆ. ಹೀಗಾಗಿ ಸರ್ಕಾರಿ ಆಸ್ತಿ ಲೂಟಿಯಾಗುತ್ತಿದೆ. ಈ ಪ್ರಕರಣದ ತಪ್ಪಿತಸ್ಥರಿಗೆ ಕಾನೂನು ಕ್ರಮವಾಗದಿದ್ದರೆ ನಿರಂತರ ಹೋರಾಟ ನಡೆಸುವುದಾಗಿ ತಿಳಿಸಿದರು.

ನಗರದ ಹೃದಯ ಭಾಗದಲ್ಲಿರುವ ಫಿಲ್ಟರ್‌ಬೆಡ್‌ ಆವರಣದಲ್ಲಿ ನೂರಾರು ಮರಗಳಿದ್ದು, ಈ ಮರಗಳು ನಗರದ ಜನರಿಗೆ ಶುದ್ಧ ಗಾಳಿ ನೀಡುವುದರೊಂದಿಗೆ ಹಸಿರಿನ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದ್ದವು. ಮರಗಳನ್ನು ಕಡಿಯುವಾಗ ಅರಣ್ಯ ಇಲಾಖೆ ಅನುಮತಿ ಕಡ್ಡಾಯ. ಆದರೆ ಅನುಮತಿ ಇಲ್ಲದೆ ಮರಗಳನ್ನು ಕಡಿದಿದ್ದು, ಇದು ಅರಣ್ಯ ಇಲಾಖೆ ಗಮನಕ್ಕೆ ಬಂದಿದ್ದರೂ ಯಾವುದೇ ದೂರು ದಾಖಲಾಗಿಲ್ಲ. ಈ ಸಂಬಂಧ ಡಿಎಫ್‌ಒ ಸ್ಥಳಕ್ಕಾಗಮಿಸಬೇಕು ಎಂದು ಪಟ್ಟುಹಿಡಿದರು.

ಕೆಪಿಸಿಸಿ ವಕ್ತಾರ ಎಚ್‌.ಎಚ್‌. ದೇವರಾಜ್‌ ಮಾತನಾಡಿ, ಒಬ್ಬ ರೈತ ಮರದ ಕೊಂಬೆಯೊಂದನ್ನು ಕಡಿದರೆ ಅವರನ್ನು ಜೈಲಿಗೆ ಹಾಕಿಸುವ ಪರಿಸರವಾದಿಗಳು ಸದ್ಯ ನಾಪತ್ತೆಯಾಗಿದ್ದಾರೆ. 60-70 ಮರಗಳನ್ನು ಅಕ್ರಮವಾಗಿ ಕಡಿದಿದ್ದು, ನಕಲಿ ಪರಿಸರವಾದಿಗಳು ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಇಲ್ಲಿನ ನಗರಸಭೆ ಆಯುಕ್ತರು ಕಾನೂನು ಕೈಗೆತ್ತಿಕೊಂಡು ಯಾವ ಇಲಾಖೆಯ ಅನುಮತಿಯನ್ನೂ ಪಡೆ ಯದೆ ಮರಗಳನ್ನು ಕಡಿಸಿದ್ದಾರೆ. ಕೂಡಲೇ ನಗರಸಭೆ ಪೌರಾಯುಕ್ತ, ಅಧ್ಯಕ್ಷರು ಹಾಗೂ ಮರ ಕಡಿದವರ ವಿರುದ್ಧ ಅರಣ್ಯ ಇಲಾಖೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದರು.

ಮಹಿಳಾ ಕಾಂಗ್ರೆಸ್‌ ರಾಜ್ಯ ಉಪಾಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ ಮಾತನಾಡಿ, ನಗರವನ್ನು ಹಸಿರು, ಸುಂದರ ಮಾಡುತ್ತೇವೆ ಎಂದು ಹೇಳುವ ನಗರಸಭೆಯೇ ಮರಗಳನ್ನು ಕಡಿದಿದೆ. ನೀವು ಮಾಡಿದ್ದೇ ಕಾನೂನು ಆಡಿದ್ದೇ ಆಟವಾ ಎಂದು ಟೀಕಿಸಿ, ಸಿ.ಟಿ.ರವಿ ಹಾಗೂ ರಾಜ್ಯ ಸರ್ಕಾರ ಸರ್ವಾಧಿಕಾರಿ ಆಡಳಿತ ನೀಡುತ್ತಿದ್ದು, ಇವರ ಆಳ್ವಿಕೆಯಲ್ಲಿ ಪ್ರಭಾವಿಗಳಿಗೊಂದು ಕಾನೂನು, ಜನಸಾಮಾನ್ಯರಿಗೊಂದು ಕಾನೂನು ಎಂಬಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಪಂ ಮಾಜಿ ಅಧ್ಯಕ್ಷ ಎ.ಎನ್‌. ಮಹೇಶ್‌, ಎಂ.ಸಿ. ಶಿವಾನಂದಸ್ವಾಮಿ, ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಎಂ.ಎಲ್‌. ಮೂರ್ತಿ, ಮಂಜೇಗೌಡ, ರಸೂಲ್‌ ಖಾನ್‌, ನಗರಸಭೆ ಕಾಂಗ್ರೆಸ್‌ ಸದಸ್ಯರು ಇದ್ದರು.

ಟಾಪ್ ನ್ಯೂಸ್

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.