ಗ್ರಾಮಠಾಣಾ ಜಾಗ ಗುರುತಿಸಲು ಒತ್ತಾಯ


Team Udayavani, Oct 31, 2020, 7:07 PM IST

cm-tdy-1

ಚಿಕ್ಕಮಗಳೂರು: ಗ್ರಾಮಠಾಣಾ ಜಾಗವನ್ನು 15 ದಿನದೊಳಗೆ ಗುರುತಿಸದಿದ್ದರೆ ಮುಂದಿನ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ತಾಪಂ ಮಾಜಿ ಅಧ್ಯಕ್ಷ ಡಿ.ಜೆ. ಸುರೇಶ್‌ ಎಚ್ಚರಿಸಿದರು.

ಗುರುವಾರ ನಗರದ ತಾಪಂ ಅಂಬೇಡ್ಕರ್‌ ಸಭಾಂಗಣದಲ್ಲಿ ತಾಪಂ ಅಧ್ಯಕ್ಷೆ ಶಾರದಾ ಶಶಿಧರರ್‌ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ತಾಪಂ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಂದಾಗಿನಿಂದಲೇ ಈ ಸಮಸ್ಯೆ ಪರಿಹರಿಸುವಂತೆ ಹೇಳಲಾಗುತ್ತಿದೆ. ಆದರೆ ಸಮಸ್ಯೆ ಬಗೆಹರಿದಿಲ್ಲ, ಕೂದುವಳ್ಳಿ, ವಸ್ತಾರೆ, ಬಸ್ಕಲ್‌ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಗ್ರಾಮಠಾಣಾ ಜಾಗವನ್ನು ಕೂಡಲೇ ಗುರುತಿಸಬೇಕು. ಕುಮಾರಗಿರಿಯಲ್ಲಿ ಸ್ಮಶಾನಕ್ಕೆ ಜಾಗವಿಲ್ಲ ಆದಷ್ಟು ಬೇಗ ಜಾಗ ಗುರುತಿಸುವಂತೆ ಇಲಾಖೆ ಅಧಿಕಾರಿಗಳಿಗೆ ಹೇಳಿದರು. ತಾಪಂ ಅಧ್ಯಕ್ಷೆ ಶಾರದಾ ಶಶಿಧರ್‌ ಮಾತನಾಡಿ, ಪರದೇಶಪ್ಪನ ಮಠದವರಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶ ನೀಡುವಂತೆ ನೀಡಬೇಕು. ಹಿಂದಿನ ಜಿಲ್ಲಾಧಿಕಾರಿಗಳು ಕೆಲವರಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶ ನೀಡಿದ್ದರೂ ಈಗ ಅಲ್ಲಿ ವಾಸವಾಗಿರುವ ಎಲ್ಲರೂ ಶೌಚಾಲಯ ನಿರ್ಮಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.

ತಾಪಂ ಸದಸ್ಯ ಸಿದ್ದಾಪುರ ರಮೇಶ್‌ ಮಾತನಾಡಿ, ವಿದ್ಯಾರ್ಥಿ ನಿಲಯಗಳಿಗೆ ಆಹಾರಧಾನ್ಯ ಬಿಡುಗಡೆಗೊಂಡಿದ್ದು, ಸಿರಿವಾಸೆ ಮತ್ತು ಮಲ್ಲಂದೂರು ಸೇರಿದಂತೆ ಇತರೆಡೆ ಸಂಗ್ರಹಿಸಲಾಗಿದೆ. ಆಹಾರಧಾನ್ಯಗಳನ್ನು ಉಪಯೋಗಿಸದೆ ಸ್ವಲ್ಪದಿನ ಹಾಗೇ ಬಿಟ್ಟರೇ ಹಾಳಾಗಲಿದೆ. ಆದ್ದರಿಂದ ಕೂಡಲೇ ಸರ್ಕಾರಕ್ಕೆ ಹಿಂದಿರುಗಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

ಸುಗಡವಾನಿ ಶಾಲೆಗೆ ಸೇರಿದ ಜಾಗ ಒತ್ತುವರಿಯಾಗಿದೆ. ದಾಖಲೆ ಇಲ್ಲದೆ ಮನೆ, ಕಣ, ಶೆಡ್‌ ನಿರ್ಮಿಸಿದ್ದರೆ ವಾರದೊಳಗೆ ಸ್ಥಳಕ್ಕೆ ತೆರಳಿ ದಾಖಲಾತಿ ಪರಿಶೀಲಿಸಿ ತೆರವುಗೊಳಿಸದಿದ್ದರೆ ತಾಲೂಕು ಕಚೇರಿ ಎದುರು ಧರಣಿ ನಡೆಸಬೇಕಾಗುತ್ತದೆ ಎಂದು ಸಿದ್ದಾಪುರ ರಮೇಶ್‌ ಎಚ್ಚರಿಸಿದರು.

ಕೆ.ಯು. ಮಹೇಶ್‌ ಮಾತನಾಡಿ, ಕಂಚೇನಹಳ್ಳಿ ಗ್ರಾಮದ ಕ್ಯಾತನಕಟ್ಟೆಗೆ ಹೋಗುವುದಕ್ಕೆ ದಾರಿಯಿಲ್ಲದೆ ದಲಿತರು ಜೀವನ ನಿರ್ವಹಣೆಗೆಂದು ಅರ್ಧ, ಒಂದು ಎಕರೆ ಗದ್ದೆಯನ್ನು ಪಾಳುಬಿಡುವಂತಾಗಿದೆ. ಶಾಸಕರು ದಾರಿ ಬಿಡಿಸಿಕೊಡಲು ಸೂಚಿಸಿದರೂ ಅಧಿಕಾರಿಗಳು ಮಾತು ಕೇಳುತ್ತಿಲ್ಲವೆಂದು ಸಭೆಗೆ ತಿಳಿಸಿದರು.

ಗಿರಿಜನರಿಗೆ ನೀಡುವ ಪೌಷ್ಟಿಕ ಆಹಾರವನ್ನು ಕಡಿತಗೊಳಿಸಲಾಗುತ್ತಿದೆ ಎಂದು ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಸಭೆಯ ಗಮನ ಸೆಳೆದಾಗ, ಇದಕ್ಕೆ ಉತ್ತರಿಸಿದ ತಾಪಂ ಕಾರ್ಯ ನಿರ್ವಹಣಾಧಿಕಾರಿ ರೇವಣ್ಣ, ಈ ಕುರಿತು ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿಗಳ ಗಮನ ಸೆಳೆಯುವುದಾಗಿ ತಿಳಿಸಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಇದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.