ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬಿತ್ತು ಅರಣ್ಯ ಇಲಾಖೆ ಬೋನಿಗೆ
Team Udayavani, May 29, 2020, 3:52 PM IST
ತರೀಕೆರೆ: ಅರಣ್ಯ ಇಲಾಖೆ ಇಟ್ಟ ಬೋನಿಗೆ ಬಿದ್ದ ಚಿರತೆ
ತರೀಕೆರೆ: ಅಮೃತಾಪುರ ಬಳಿಯ ವಿಠಲಾಪುರ ಸುತ್ತಮುತ್ತಲಿನ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ.
ಹಲವಾರು ದಿನಗಳಿಂದ ಈ ಭಾಗದಲ್ಲಿ ಬೀಡುಬಿಟ್ಟಿದ್ದ ಚಿರತೆ ಜನ-ಜಾನುವಾರುಗಳಿಗೆ ತೊಂದರೆ ಉಂಟು ಮಾಡಿರಲಿಲ್ಲ. ಆದರೆ ನಾಯಿಗಳನ್ನು ಬೇಟೆಯಾಡುತ್ತಿತ್ತು. ಇದನ್ನರಿತ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಠಲಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬೋನು ಇರಿಸಲಾಗಿತ್ತು. ಇದೀಗ ಬೋನಿಗೆ ಚಿರತೆ ಬಿದ್ದಿರುವುದರಿಂದ ಅಮೃತಾಪುರ ಹೋಬಳಿ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.
ಕತ್ತಲಾಗುತ್ತಿದ್ದಂತೆ ಗ್ರಾಮಗಳತ್ತ ಮುಖ ಮಾಡುತ್ತಿದ್ದ ಚಿರತೆ ಸಾಕು ಪ್ರಾಣಿಗಳನ್ನು ಹೊತ್ತೂಯುತ್ತಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಸಮತಳ, ಕುಂಟಿನಮಡು, ನೇರಲಕೆರೆ, ಅಮೃತಾಪುರ, ನಾಗೇನಹಳ್ಳಿ ಭಾಗದಲ್ಲಿ ಚಿರತೆ ಸಂಚರಿಸುತ್ತಿತ್ತೆಂದು ಗ್ರಾಮಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ