ಕೋವಿಡ್ ಹರಡದಂತೆ ಎಚರ ವಹಿಸಿ: ಸುರೇಶ್
Team Udayavani, Apr 11, 2020, 4:24 PM IST
ತರೀಕೆರೆ: ಅಜ್ಜಂಪುರ ತಾಲೂಕಿನ ಪಿಡಿಒಗಳಿಗೆ ಶಾಸಕ ಡಿ.ಎಸ್.ಸುರೇಶ್ ಮಾಸ್ಕ್ ವಿತರಣೆ ಮಾಡಿದರು.
ತರೀಕೆರೆ: ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕೋವಿಡ್-19 ವಿರುದ್ಧ ಸೇವೆ ಸಲ್ಲಿಸುತ್ತಿರುವ ಗ್ರಾ.ಪಂ. ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಮಾಸ್ಕ್ ನೀಡಲಾಗುತ್ತಿದೆ. ಅವಶ್ಯಕತೆ ಬಿದ್ದಲ್ಲಿ ಇನ್ನಷ್ಟು ಮಾಸ್ಕ್ಗಳನ್ನು ಒದಗಿಸಲಾಗುವುದು ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.
ಅವರು ತಾ.ಪಂ. ಸಭಾಂಗಣದಲ್ಲಿ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆಮಾಸ್ಕ್ ವಿತರಸಿ ಮಾತನಾಡಿದರು. ಮೊದಲ ಹಂತದಲ್ಲಿ ಪ್ರತಿ ಗಾ.ಪಂಗೆ 500, ವ್ಯಾಪ್ತಿ ದೊಡ್ಡದಾಗಿರುವ ಪಂಚಾಯಿತಿಗಳಿಗೆ 1000 ಮಾಸ್ಕ್ ವಿತರಣೆ ಮಾಡಲಾಗುತ್ತಿದೆ. ಇವುಗಳನ್ನು ಗಾ.ಪಂಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗೆ ನೀಡಬೇಕು. ಈಗಾಗಲೇ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಇನ್ನಿತರ ಸಿಬ್ಬಂದಿಗೆ ಮಾಸ್ಕ್ಗಳನ್ನು ಒದಗಿಸಲಾಗಿದೆ. ಕೊರೊನಾ ಸೋಂಕು ತಡೆಗೆ ಇವರೆಲ್ಲ ನಿರ್ವಹಿಸುತ್ತಿರುವ ಕೆಲಸ ಶ್ಲಾಘನೀಯ ಎಂದರು.
ಪಡಿತರ ವಿತರಣೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಪಡಿತರ ಚೀಟಿ ಹೊಂದಿರದ ಕುಟುಂಬಗಳಿಗೂ ಆಹಾರ ಧಾನ್ಯ ವಿತರಣೆ ಮಾಡಲು ಈಗಾಗಲೇ ಸರಕಾರ ನಿರ್ಧರಿಸಿದೆ. ಪಡಿತರ ಚೀಟಿ ಹೊಂದಿರುವ ವ್ಯಕ್ತಿಗಳಿಂದ ಹಣ ವಸೂಲಿ ಮಾಡಬಾರದು ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಯಾವುದೇ ವಾಹನ ಸೌಲಭ್ಯವಿರದ ಕಾರಣ ಕೆಮ್ಮಣ್ಣು ಗುಂಡಿಯಲ್ಲಿರುವ ಕೆಲವು ಕುಟುಂಬಗಳು ಪಡಿತರ ಪಡೆಯಲು ಸಾಧ್ಯವಾಗಿಲ್ಲ. ಅವರಿಗೆ ಸ್ಥಳದಲ್ಲಿಯೇ ಪಡಿತರ ನೀಡುವಂತೆ ಆಹಾರ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದರು. ತಾಲೂಕುಗಳಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರ ಮನೆ ಬಾಗಿಲಿಗೆ ಪಡಿತರವನ್ನು ಶಾಸಕರು ಮತ್ತು ಬಿಜೆಪಿಯಿಂದ ವಿತರಣೆ ಮಾಡಲಾಗುತ್ತಿದೆ ಮತ್ತು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದರು. ತಾ.ಪಂ ಅದ್ಯಕ್ಷೆ ಪದ್ಮಾವತಿ, ಇಓ ವಿಶಾಲಾಕ್ಷಮ್ಮ ವಿವಿಧ ಗ್ರಾಪಂ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ