ಅವಧಿ ಮುಗಿದು 2 ವರ್ಷದ ನಂತರ ತರೀಕೆರೆ ಪುರಸಭೆಗೆ ಚುನಾವಣೆ


Team Udayavani, Aug 17, 2021, 6:09 PM IST

ಅವಧಿ ಮುಗಿದು 2 ವರ್ಷದ ನಂತರ ತರೀಕೆರೆ ಪುರಸಭೆಗೆ ಚುನಾವಣೆ

ಸಾಂದರ್ಭಿಕ ಚಿತ್ರ..

ತರೀಕೆರೆ: ಪಟ್ಟಣದ ಪುರಸಭೆಯ ಚುನಾವಣೆ ಘೋಷಣೆಯಾಗಿದೆ. ಕ್ಷೇತ್ರಗಳ ಮೀಸಲಾತಿಯನ್ನು ಸರಕಾರ ಪ್ರಕಟ ಮಾಡಿದೆ. ಅವಧಿ ಮುಗಿದು 2 ವರ್ಷದ ನಂತರ ಚುನಾವಣೆ ನಡೆಯಲಿದೆ. ಇದರ ನಡುವೆ ಚುನಾವಣೆಯ ಮೀಸಲಾತಿ ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದರ ನಡುವೆ ಚುನಾವಣೆ ನಡೆಯಲಿದೆ. ಪುರಸಭೆಯ ಚುನಾವಣೆ ನಡೆದಿದ್ದು ಮಾರ್ಚ್‌ 2013ರಲ್ಲಿ.

ಒಂದು ವರ್ಷ ಕಾಲ ಅಧ್ಯಕ್ಷ- ಉಪಾದ್ಯಕ್ಷರ ಚುನಾವಣೆ ನಡೆಯಲಿಲ್ಲ. ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ಪ್ರಶ್ನಿಸಿ ಆಯ್ಕೆಗೊಂಡ ಪ್ರತಿನಿಧಿಗಳು ನ್ಯಾಯಾಲಯದ ಮೊರೆ ಹೋಗಿದ್ದ ಕಾರಣ ಮಾ. 14, 2014ರಲ್ಲಿ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ ನಡೆದಿತ್ತು. ಇದರ ಅವಧಿ ಮುಗಿದಿದ್ದು 2019ರಲ್ಲಿ. 2019ರಲ್ಲಿ ನಡೆಯಬೇಕಾಗಿದ್ದ ಚುನಾವಣೆ 2 ವರ್ಷಗಳ ನಂತರ ನಡೆಯುತ್ತಿದೆ. ಸರಕಾರ ಹೊರಡಿಸಿದ ಮೀಸಲಾತಿ ಸರಿಯಿಲ್ಲ. ಅವೈಜ್ಞಾನಿಕವಾಗಿದೆ ಎಂದು ಪುನಃ ಕೋರ್ಟ್‌ ಮೆಟ್ಟಿಲು ಹತ್ತಿದ ಹಿನ್ನೆಲೆಯಲ್ಲಿ ಚುನಾವಣೆ ಪ್ರಕ್ರಿಯೆ ಮುಂದೂಡುತ್ತ ಬರಲಾಗಿತ್ತು.

ಪುರಸಭೆಯ 23 ವಾರ್ಡ್‌ಗಳ ಚುನಾವಣೆಯ ಅಖಾಡವೇನೋ ಸಿದ್ಧವಾಗಿದೆ. ಚುನಾವಣೆಗೆ ಸ್ಪರ್ಧಿಸುವ ಬಯಕೆ ಇಟ್ಟುಕೊಂಡ ಹುರಿಯಾಳುಗಳು ಪಕ್ಷದ ಮುಖಂಡರ ಮನೆ ಬಾಗಿಲಿಗೆಗೆ ಎಡ ತಾಕುತ್ತಿದ್ದಾರೆ. ರಾಜಕೀಯ ಪಕ್ಷಗಳು ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಂಡಿವೆ. ಸಮರ್ಪಕವಾದ ಅಭ್ಯರ್ಥಿಯನ್ನು ಆಯ್ಕೆ ಮಾಡಿದಲ್ಲಿ ಅಧಿ ಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗುತ್ತದೆ ಎನ್ನುತ್ತಾನೆ ಮತದಾರ.

ಪುರಸಭೆ ವಾರ್ಡ್‌ಮೀಸಲಾತಿ ವಿವರ : 1ನೇ ವಾರ್ಡ್‌: ಹಿಂದುಳಿದ ವರ್ಗ”ಎ’ ಮಹಿಳೆ, 2ನೇ ವಾರ್ಡ್‌: ಸಾಮಾನ್ಯ, 3ನೇ ವಾರ್ಡ್‌: ಪರಿಶಿಷ್ಟ ಜಾತಿ 4ನೇ ವಾರ್ಡ್‌: ಸಾಮಾನ್ಯ, 5ನೇ ವಾರ್ಡ್‌: ಹಿಂದುಳಿದ ವರ್ಗ ಎ, 6ನೇ ವಾರ್ಡ್‌: ಸಾಮಾನ್ಯ ಮಹಿಳೆ, 7ನೇ ವಾರ್ಡ್‌: ಹಿಂದುಳಿದ ವರ್ಗ “ಬಿ’ 8ನೇ ವಾರ್ಡ್‌: ಹಿಂದುಳಿದ ವರ್ಗ “ಎ’ ಮಹಿಳೆ, 9ನೇ ವಾರ್ಡ್‌: ಸಾಮಾನ್ಯ ಮಹಿಳೆ, 10 ನೇ ವಾರ್ಡ್‌: ಸಾಮಾನ್ಯ, 11ನೇ ವಾರ್ಡ್‌: ಹಿಂದುಳಿದ ವರ್ಗ-ಎ, 12ನೇ ವಾರ್ಡ್‌: ಪರಿಶಿಷ್ಟ ಜಾತಿ ಮಹಿಳೆ, 13ನೇ ವಾರ್ಡ್‌: ಪರಿಶಿಷ್ಟ ಜಾತಿ, 14ನೇ ವಾರ್ಡ್‌: ಸಾಮಾನ್ಯ ಮಹಿಳೆ, 15ನೇ ವಾರ್ಡ್‌: ಪರಿಶಿಷ್ಟ ಪಂಗಡ, 16ನೇ ವಾರ್ಡ್‌: ಹಿಂದುಳಿದ ವರ್ಗ ಮಹಿಳೆ. 17ನೇ ವಾರ್ಡ್‌: ಸಾಮಾನ್ಯ, 18ನೇ ವಾರ್ಡ್‌: ಸಾಮಾನ್ಯ. 19ನೇ ವಾರ್ಡ್‌: ಹಿಂದುಳಿದ ವರ್ಗ-ಎ, 20ನೇ ವಾರ್ಡ್‌: ಸಾಮಾನ್ಯ ಮಹಿಳೆ, 21ನೇ ವಾರ್ಡ್‌ಸಾಮಾನ್ಯ ಮಹಿಳೆ, 22ನೇ ವಾರ್ಡ್‌ ಸಾಮಾನ್ಯ ಮತ್ತು 23ನೇ ವಾರ್ಡ್‌ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರ ಹಿಡಿಯುತ್ತದೆ ಎಂಬ ಲೆಕ್ಕಾಚಾರ ಆರಂಭವಾಗಿದೆ. ಬಿಜೆಪಿ ಸರಕಾರ ಅಸ್ತಿತ್ವದಲ್ಲಿದ್ದು ಶಾಸಕರು ಬಿಜೆಪಿಯವರೇ ಆಗಿದ್ದಾರೆ. ಪುರಸಭೆ ಇತಿಹಾಸದಲ್ಲಿ ಇಲ್ಲಿಯ ತನಕ ಬಿಜೆಪಿ ಅಧಿಕಾರ ಹಿಡಿಯುವಲ್ಲಿ
ಸಫಲವಾಗಿಲ್ಲ. ಈ ಬಾರಿಯಾದರೂ ಅಧಿಕಾರದ ಚುಕ್ಕಾಣಿ ಹಿಡಿದೀತೇ ಎಂಬುದನ್ನು ಕಾಯ್ದು ನೋಡಬೇಕಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.