ಮಲೆನಾಡಿನ ಜೀವನಾಡಿಗೆ ಮತ್ತೆ ಮರು ಜೀವ

ವಿಜಯದಶಮಿಗೆ ಸಹಕಾರ ಸಾರಿಗೆ ಬಸ್‌ ಸಂಚಾರ ಆರಂಭ

Team Udayavani, Sep 28, 2020, 7:38 PM IST

cm-tdy-1

ಚಿಕ್ಕಮಗಳೂರು: ಇಡೀ ಮಲೆನಾಡಿನ ಜೀವನಾಡಿ, ಸಂಪರ್ಕದ ಕೊಂಡಿಯಾಗಿದ್ದ ಸಹಕಾರ ಸಾರಿಗೆ ಸಂಸ್ಥೆಯ ಬಸ್‌ ಮತ್ತೆ ರಸ್ತೆಗಿಳಿಯುತ್ತಿದ್ದು ಮಲೆನಾಡಿನ ಜನತೆಯಲ್ಲಿ ಸಂತಸ ಮೂಡಿಸಿದೆ.

ಮಲೆನಾಡು ಎಂದರೆ ಹೇಳಬೇಕೆ? ಗುಡ್ಡಬೆಟ್ಟಗಳ ನಡುವೆ ಅಂಕುಡೊಂಕಿನ ರಸ್ತೆ. ಸುತ್ತಲೂ ಹಚ್ಚಹಸಿರು. ಅಲ್ಲೊಂದು ಇಲ್ಲೊಂದು ಮನೆ. ಇಂತಹ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ರೈಟ್‌ ರೈಟ್‌ ಎಂದು ಸೇವೆ ಸಲ್ಲಿಸುತ್ತಿದ್ದ ಸಹಕಾರಿ ಸಾರಿಗೆ ಬಸ್‌ ಈ ನಡುವೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ತನ್ನ ಸೇವೆಯನ್ನು ನಿಲ್ಲಿಸಿದ್ದರಿಂದ ಮಲೆನಾಡು ಜನರ ಬದುಕಿನ ಅಂಗವಾಗಿದ್ದ ಸಹಕಾರ ಸಾರಿಗೆ ಕೊಂಡಿಯೇ ಕಳಚಿದಂತಾಗಿತ್ತು. ಸಂಸ್ಥೆಯಲ್ಲಿ 300 ಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದು. ಬಸ್‌ ಸಂಚಾರ ಸ್ಥಗಿತವಾಗಿದ್ದರಿಂದ ಸಂಸ್ಥೆಯನ್ನೇ ನಂಬಿ ಜೀವನ ನಡೆಸುತ್ತಿದ್ದ ಕಾರ್ಮಿಕರ ಬದುಕು ಬೀದಿಗೆ ಬಂದಿತ್ತು. ಕಾರ್ಮಿಕರ ಮತ್ತು ಸಂಸ್ಥೆಯ ಶ್ರೇಯೋಭಿವೃದ್ಧಿಯೊಂದಿಗೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಮೂಲದ ಬೆಂಗಳೂರು ಉದ್ಯಮಿ ಮಹೇಂದ್ರ ಸಂಸ್ಥೆಯೊಂದಿಗೆ ಕೈಜೋಡಿಸಿದ್ದು ಸಂಸ್ಥೆ ಮತ್ತೆ ಮರುಜೀವ ಪಡೆದುಕೊಂಡಿದೆ. ಅ.26ರ ವಿಜಯದಶಮಿ ದಿನದಂದು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲಾದ್ಯಂತ 76 ಬಸ್‌ಗಳ ಪೈಕಿ 60 ಬಸ್‌ಗಳು ಮತ್ತೆ ರಸ್ತೆಗಿಳಿಯಲಿವೆ.

ಉಳಿದ ಬಸ್‌ ಗಳು ಹಂತ ಹಂತವಾಗಿ ಸೇವೆಗೆ ಸಿದ್ಧವಾಗಲಿವೆ. 60 ಬಸ್‌ ಗಳು ಸಂಸ್ಥೆಯ ಹೆಸರಿನಲ್ಲೇ ಸೇವೆ ಮುಂದುವರಿಸಲಿದ್ದು, ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 300 ಕಾರ್ಮಿಕರನ್ನು ಸೇವೆಗೆ ಬಳಸಿಕೊಳ್ಳಲಾಗುತ್ತಿದೆ. ಉದ್ಯಮಿ ಮಹೇಂದ್ರ ಅವರು ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಮಲೆನಾಡಿನ ಮನೆ ಮಾತಾಗಿರುವ ಕಾರ್ಮಿಕರೇ ಕಟ್ಟಿ ಬೆಳೆಸಿದ ಸಹಕಾರಿ ಸಾರಿಗೆ ಬಸ್‌ ಮತ್ತೆ ರಸ್ತೆಗಿಳಿಯುತ್ತಿರುವುದು ಮಲೆನಾಡಿನ ಜನತೆಯಲ್ಲಿ ಸಂತಸ ಮೂಡಿಸಿದೆ. 1991ರಲ್ಲಿ ಶಂಕರ್‌ ಟ್ರಾನ್ಸ್‌ಪ್ರೋರ್ಟ್‌ ಮುಚ್ಚಿದ ಬಳಿಕ ಅಲ್ಲಿದ್ದ ಕಾರ್ಮಿಕರು ತಮಗೆ ಬಂದ ಪರಿಹಾರದ ಹಣದಿಂದಲೇ ಕಟ್ಟಿಕೊಂಡ ಸಂಸ್ಥೆಯೇ ಸಹಕಾರ ಸಾರಿಗೆ ಸಂಸ್ಥೆ. ಕಾರ್ಮಿಕರೇ ಮಾಲೀಕರಾಗಿ ಮೊದಲ ಬಾರಿಗೆ 6 ಬಸ್‌ಗಳೊಂದಿಗೆ ಮಲೆನಾಡಿನಲ್ಲಿ ಸೇವೆ ಆರಂಭಿಸಿದ ಸಹಕಾರ ಸಾರಿಗೆ ಸಂಸ್ಥೆ, ಮುಂದಿನ ದಿನಗಳಲ್ಲಿ ಸಂಸ್ಥೆ ಬೆಳೆಯುತ್ತಾ ಸದ್ಯ 76 ಬಸ್‌ಗಳನ್ನು ಹೊಂದಿದೆ. 300 ಕಾರ್ಮಿಕರಿಗೆ ಬದುಕು ಕಟ್ಟಿಕೊಟ್ಟಿದೆ. ಮಲೆನಾಡು ಗುಡ್ಡಗಾಡು ಪ್ರದೇಶದ ಮನೆ- ಮನ ಬೆಸೆದ ಸಹಕಾರಿ ಸಾರಿಗೆ ಸಂಸ್ಥೆ ಏಷ್ಯಾದಲ್ಲೇ ಬೆಸ್ಟ್‌ ಸಹಕಾರ ಸಂಸ್ಥೆ ಎಂಬ ಹೆಗ್ಗಳಿಕೆ ಗಳಿಸಿತ್ತು.

ರಾಜ್ಯಕ್ಕೆ ಕೆ.ಎಸ್‌.ಆರ್‌.ಟಿ.ಸಿ., ಮಲೆನಾಡಿಗೆ ಸಹಕಾರ ಸಾರಿಗೆ ಎಂಬಂತೆ ಈ ಸಂಸ್ಥೆ ಕೆಲಸ ಮಾಡಿದೆ.  ಸ್ವಾತಂತ್ರ್ಯ ಹೋರಾಟಗಾರರು, ಕರ್ನಾಟಕ ಏಕೀಕರಣಕ್ಕೆ ಹೋರಾಡಿದವರು, ಸಂಸ್ಥೆಯ ಕಾರ್ಮಿಕ ಮಕ್ಕಳು, ವಿಕಲಚೇತನರು, ಹಿರಿಯ ನಾಗರಿಕರಿಗೆ ಶೇ.50 ರಿಯಾಯಿತಿಯೊಂದಿಗೆ ಸೇವೆ ಸಲ್ಲಿಸಿದ ಸಂಸ್ಥೆ ಮಲೆನಾಡು ಗುಡ್ಡಗಾಡು ಪ್ರದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದೆ.

ಸಹಕಾರ ಸಾರಿಗೆ ಸೇವೆಗೆ ಜಪಾನ್‌ ಸಹ ಮೆಚ್ಚುಗೆ ವ್ಯಕ್ತಪಡಿಸಿತ್ತು. ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಈ ವಿಷಯದ ಕುರಿತು ಸಂಶೋಧನೆ ನಡೆಸಿ ಡಾಕ್ಟರೇಟ್‌ ಪಡೆದುಕೊಂಡಿದ್ದರು. ಮಣಿಪಾಲ ಸ್ನಾತಕೋತ್ತರ ಪದವಿಗೆ ಸಂಸ್ಥೆಯ ಸಾಧನೆ ಪಠ್ಯವಾಗಿತ್ತು. ಇಷ್ಟೆಲ್ಲ ಸಾಧನೆ ಉತ್ತುಂಗದಲ್ಲಿ ಸಹಕಾರ ಸಾರಿಗೆ ಸಂಸ್ಥೆ ಸರ್ಕಾರದ ನೀತಿ ನಿರ್ಧಾರಗಳು, ಡೀಸೆಲ್‌ ಬೆಲೆ ಏರಿಕೆ, ವಿಮೆ, ತೆರಿಗೆ ಇದರಿಂದ ಸಂಸ್ಥೆ ಆರ್ಥಿಕ ಸಂಕಷ್ಟ ಎದುರಾಗಿ ಸಂಸ್ಥೆ ಮುಚ್ಚುವ ಹಂತಕ್ಕೆ ತಲುಪಿತ್ತು.

ಸಂಸ್ಥೆಯ ನೆರವಿಗೆ ಬಾರದ ಸರ್ಕಾರ: ಕಾರ್ಮಿಕರೇ ಕಟ್ಟಿ ಬೆಳೆಸಿದ ಸಂಸ್ಥೆ ಇತ್ತೀಚಿನ ದಿನಗಳಲ್ಲಿ ಡೀಸೆಲ್‌ ಬೆಲೆ ಏರಿಕೆಯಿಂದ ತಿಂಗಳಿಗೆ 24ಲಕ್ಷ ನಷ್ಟ ಅನುಭವಿಸುತ್ತಿತ್ತು. ವರ್ಷಕ್ಕೆ ಒಂದೂವರೆ ಕೋಟಿ ಟ್ಯಾಕ್ಸ್‌, ಜೊತೆಗೆ, ರಿಯಾಯಿತಿ ಪಾಸ್‌ ಸೇರಿ ಒಟ್ಟು ವರ್ಷಕ್ಕೆ 6 ಕೋಟಿ ಹೊರೆ ಸಂಸ್ಥೆಯ ಮೇಲೆ ಬಿದ್ದಿತ್ತು. ಸಂಸ್ಥೆ ಡೀಸೆಲ್‌ ಸಬ್ಸಿಡಿ, ಟ್ಯಾಕ್ಸ್‌ ಕಡಿತ ಹಾಗೂ ಪಾಸ್‌ ಉಳಿಕೆ ಹಣವನ್ನು ನೀಡುವಂತೆ ಸರ್ಕಾರದ ಸಹಾಯ ಹಸ್ತವನ್ನು ಚಾಚಿತು.

ಸಿದ್ದರಾಮಯ್ಯ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮನವಿ ಸಲ್ಲಿಲಾಗಿತ್ತು. ಆರ್ಥಿಕ ನೆರವು ನೀಡುವ ಭರವಸೆಯನ್ನು ನೀಡಲಾಗಿತ್ತು. ಆದರೆ, ಅದೇ ಸಮಯಕ್ಕೆ ಸಿದ್ಧರಾಮಯ್ಯ ಅವರ ಸರ್ಕಾರದ ಅವಧಿ ಮುಗಿದಿತ್ತು. ಮತ್ತೆ ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ, ಅಷ್ಟರಲ್ಲಿ ಸಮ್ಮಿಶ್ರ ಸರ್ಕಾರ ಬಿದ್ದ ಪರಿಣಾಮ

ಮತ್ತೆ ಭರವಸೆಯಾಗೇ ಉಳಿಯಿತು. ಮುಂದೆ ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ನಂತರ ಮತ್ತೆ ಸಂಸ್ಥೆ ತನ್ನ ಪ್ರಯತ್ನವನ್ನು ಮುಂದುವರಿಸಿತು. ಸರ್ಕಾರ ನೆರವು ನೀಡುವಂತೆ ಪ್ರತಿಭಟನೆಯ ಹಾದಿ ಹಿಡಿಯಬೇಕಾಯಿತು. ಸಂಸ್ಥೆಯ ಮನವಿಗೆ ಸ್ಪಂದಿ ಸಿದ ಸರ್ಕಾರ ಆರ್ಥಿಕ ನೆರವು ನೀಡಲು ಮುಂದಾಯಿತು. ಹಣಕಾಸು ಇಲಾಖೆಯಲ್ಲಿ ತಡೆಯೊಡ್ಡಿದ್ದರಿಂದ ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತಾಯಿತು ಸಂಸ್ಥೆಯ ಸ್ಥಿತಿ. ಇದರ ಬೆನ್ನಲ್ಲೇ ಕೋವಿಡ್‌-19 ಮಹಾಮಾರಿಯಿಂದ ಮುಚ್ಚುವ ನಿರ್ಧಾರಕ್ಕೆ ಸಂಸ್ಥೆ ಬಂದಿತ್ತು. ಸದ್ಯ ಉದ್ಯಮಿ ಮಹೇಂದ್ರ ಅವರು ಆರ್ಥಿಕ ನೆರವಿಗೆ ಮುಂದಾಗಿದ್ದು ವಿಜಯ ದಶಮಿಯಂದು ಸಹಕಾರ ಸಾರಿಗೆ ಬಸ್‌ ಮರಳಿ ರಸ್ತೆಗಿಳಿಯಲಿದ್ದು ಸಂಸ್ಥೆ ಎತ್ತರಕ್ಕೆ ಬೆಳೆಯಲಿ ಎಂಬುದು ಮಲೆನಾಡಿಗರ ಹಾರೈಕೆಯಾಗಿದೆ.

ಉದ್ಯಮಿ ಮಹೇಂದ್ರ ಅವರು ಸಂಸ್ಥೆಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದು, ಸಹಕಾರಿ ಸಾರಿಗೆ ಬಸ್‌ ಮತ್ತೆ ಪುನಾರಂಭಗೊಳ್ಳಲಿದೆ.– ಧರ್ಮಪ್ಪ, ಸಹಕಾರ ಸಾರಿಗೆ ಸಂಸ್ಥೆ ಅಧ್ಯಕ್ಷ

 

-ಸಂದೀಪ ಜಿ.ಎನ್‌. ಶೇಡ್ಗಾರ್‌

ಟಾಪ್ ನ್ಯೂಸ್

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.