ಕಾಫಿಬೆಳೆ ಹಾನಿ ಸಮೀಕ್ಷೆಗೆ ತಂಡ ರಚನೆ
ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಹೇಳಿಕೆ
Team Udayavani, Jan 12, 2021, 5:11 PM IST
ಕೊಟ್ಟಿಗೆಹಾರ: ಅಕಾಲಿಕ ಮಳೆಯಿಂದ ಬೆಳೆಹಾನಿಯಾದ ಮೂಡಿಗೆರೆ ತಾಲೂಕಿನ ಪ್ರದೇಶಗಳಿಗೆ ಜಿಲ್ಲಾ ಧಿಕಾರಿ ಡಾ| ನಬಗಾದಿ ಗೌತಮ್ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದರು. ಮೂಡಿಗೆರೆ ತಾಲೂಕಿನ ಲೋಕವಳ್ಳಿ, ಮುಗ್ರಹಳ್ಳಿ, ಬೆಟ್ಟಗೆರೆ, ಫಲ್ಗುಣಿ, ಅತ್ತಿಗೆರೆ ಗ್ರಾಮಗಳಿಗೆ ಭೇಟಿ ನೀಡಿ ಅಕಾಲಿಕ ಮಳೆಯಿಂದ ಹಾನಿಯಾದ ಭತ್ತದ ಗದ್ದೆಗಳು ಹಾಗೂ ಕಾಫಿತೋಟಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಫಿ ಮಂಡಳಿಯಿಂದ ಮೂಡಿಗೆರೆ ತಾಲೂಕಿನಲ್ಲಿ ಕಾಫಿ ಬೆಳೆಹಾನಿಯ ಸಮೀಕ್ಷೆ ಮಾಡಲು 5 ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಆ ತಂಡಗಳು ಸಮೀಕ್ಷೆಯಲ್ಲಿ ತೊಡಗಿದ್ದಾರೆ. ತೋಟಗಾರಿಕಾ ಇಲಾಖೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಅಡಕೆ, ಭತ್ತ ಹಾಗೂ ಇತರೆ ಬೆಳೆಗಳ ಹಾನಿಯ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದಾರೆ. ಒಂದು ವಾರದೊಳಗೆ ಸಮೀಕ್ಷೆ ಪೂರ್ಣಗೊಳ್ಳಲಿದ್ದು ಬೆಳೆಹಾನಿಯ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಅಕಾಲಿಕ ಮಳೆಯಿಂದ ಕಾಫಿ ಗಿಡಗಳಲ್ಲಿ ಹೂ ಅರಳಿದೆ. ಕಾಫಿ ಹಣ್ಣುಗಳು ಉದುರಿವೆ. ಅತಿಯಾದ ಮಳೆಯಿಂದ ರಾಶಿ ಕಾಫಿ ಹಣ್ಣುಗಳು ಬೂಸಲು ಬಂದಿವೆ. ಕಾರ್ಮಿಕರ ಕೊರತೆಯಿಂದ ಗಿಡದಿಂದ ಉದುರಿದ ಕಾಫಿ ಯನ್ನು ಹೆಕ್ಕಲು ಕೂಡ ಸಮಸ್ಯೆಯಾಗಿದೆ. ಈ ಎಲ್ಲಾ ಅಂಶಗಳನ್ನು ಉಲ್ಲೇಖೀಸಿ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಇದನ್ನೂ ಓದಿ:ಕ್ಯೂಆರ್ ಕೋಡ್ನಿಂದ ತೊಗರಿ ಖರೀದಿ ವಿಳಂಬ! ಮುಕ್ತ ಮಾರುಕಟ್ಟೆಯತ್ತ ಮುಖ
ಅತ್ತಿಗೆರೆಯ ಹಿರಿಯ ಕಾಫಿ ಬೆಳೆಗಾರರಾದ ಎ.ಬಿ. ಕೃಷ್ಣೇಗೌಡ ಅವರು ಜಿಲ್ಲಾ ಧಿಕಾರಿಗಳ ಬಳಿ ಕಾಫಿ ಬೆಳೆ ಹಾನಿಯಾದ ಬಗ್ಗೆ ಅಳಲು ತೋಡಿಕೊಂಡರು. ವರ್ಷದಿಂದ ಕಾಫಿ ತೋಟದಲ್ಲಿ ಶ್ರಮ ವಹಿಸಿ ದುಡಿದಿದ್ದು ವರ್ಷದ ಫಸಲು ಕೈ ಸೇರುವ ಹೊತ್ತಿಗೆ ಅಕಾಲಿಕ ಮಳೆ ಸುರಿದು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಸರ್ಕಾರ ಕಾಫಿ ಬೆಳೆಗಾರರು ಹಾಗೂ ರೈತರ ನೆರವಿಗೆ ಬರಬೇಕು ಎಂದರು. ಮೂಡಿಗೆರೆ ತಹಶೀಲ್ದಾರ್ ರಮೇಶ್, ಕೃಷಿ ಇಲಾಖೆಯ ಕೃಷಿ ಅಧಿ ಕಾರಿ ವೆಂಕಟೇಶ್, ಕಾಫಿ ಮಂಡಳಿಯ ಹಿರಿಯ ಸಂಪರ್ಕ ಅಧಿಕಾರಿ ಶ್ರೀದೇವಿ, ಗ್ರಾಮ ಲೆಕ್ಕಾ ಧಿಕಾರಿ ಹಾಗೂ ರಾಜಸ್ವ ನಿರೀಕ್ಷಕ ಮಂಜುನಾಥ್, ಗ್ರಾಮ ಲೆಕ್ಕಾ ಧಿಕಾರಿಗಳಾದ ಆನಂದ್, ನಿತ್ಯಾ, ನಮಿತಾ, ರಮ್ಯ, ಉಮೇಶ್, ಗ್ರಾಮ ಸಹಾಯಕ ಅಣ್ಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ