ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತೆ: ದೇಶಪಾಂಡೆ
Team Udayavani, Jun 28, 2018, 6:25 AM IST
ಚಿಕ್ಕಮಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ 5 ವರ್ಷಗಳ ಅವಧಿ ಪೂರ್ಣಗೊಳಿಸಲಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಸ್ಥಿರ ಹಾಗೂ
ಪ್ರಬಲವಾಗಿದ್ದು, ಐದು ವರ್ಷ ಉಳಿಯುತ್ತದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಾರಿಯ ಬಜೆಟ್ನಲ್ಲಿ ಹೊಸ ವಿಚಾರಗಳನ್ನು ಪ್ರಸ್ತಾಪಿಸಲು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವುದಕ್ಕಾಗಿ ಐವರ ಸಮಿತಿ ರಚಿಸಲಾಗಿದೆ. ಈಗಾಗಲೇ ಈ ಸಮಿತಿ ಎರಡು ಸಭೆಗಳನ್ನು ನಡೆಸಿದ್ದು, ಇನ್ನೊಂದು ಸಭೆ ಜೂ.29 ರಂದು ನಡೆಯಲಿದೆ.
ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ವರದಿಯನ್ನು ಸರ್ಕಾರದ ಮುಂದಿಡಲಾಗುವುದು. ಸಮ್ಮಿಶ್ರ ಸರ್ಕಾರಕ್ಕೆ ಅದೇ ಭಗವದ್ಗೀತೆ, ಬೈಬಲ್ ಮಾರ್ಗದರ್ಶಿ ಎಂದು ಹೇಳಿದರು. ಬಜೆಟ್ ರೂಪಿಸುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ
ನೀಡಿರುವ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಹೊಸದಾಗಿ ಬಜೆಟ್ ಮಂಡಿಸುವ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ದಿನಾಂಕ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರು ಹಿಂದೆ ಮಂಡಿಸಿರುವ ಬಜೆಟ್ನಲ್ಲಿನ ಕಾರ್ಯಕ್ರಮಗಳಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಮುಖ್ಯಮಂತ್ರಿಗಳೇ ತಿಳಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?