ಆಲ್ದೂರು ಸುತ್ತಮುತ್ತ ತಂಪೆರೆದ ಭರಣಿ ಮಳೆ


Team Udayavani, Apr 30, 2019, 5:11 PM IST

chikk

ಆಲ್ದೂರು: ಆಲ್ದೂರು ಸುತ್ತಮುತ್ತ ಸೋಮವಾರ ಸಂಜೆ ಸುರಿದ ಮಳೆ ಬಿಸಿಲ ಧಗೆಯಿಂದ ತತ್ತರಿಸಿದ್ದ ಜನತೆಗೆ ತಂಪೆರೆದಿದೆ.

ಮಧ್ಯಾಹ್ನ 4 ಗಂಟೆಗೆ ಗುಡುಗು ಮಿಂಚಿನೊಂದಿಗೆ ಆರಂಭಗೊಂಡ ಮಳೆ ಅರ್ಧಗಂಟೆಗೂ ಹೆಚ್ಚು ಕಾಲ ಸುರಿಯಿತು. ಗಾಳಿಯ ಆರ್ಭಟ ಅಷ್ಟಾಗಿ ಕಂಡುಬಂದಿಲ್ಲ.

ಈ ಬಾರಿ ಬಿಸಿಲ ಝಳಕ್ಕೆ ಜನತೆ ತತ್ತರಿಸಿ ಹೋಗಿದ್ದರು. ಹೀಗಾಗಿ ಇಂದು ಸುರಿದ ಮಳೆಯಿಂದ ಜನ ಹರ್ಷಚಿತ್ತರಾಗಿದ್ದಾರೆ. ತೋಟಗಾರಿಕಾ ಬೆಳೆಗಳಿಗೂ ಈ ಮಳೆ ಅನುಕೂಲಕರವಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ಯಾವುದೇ ಹಾನಿ ಆದ ವರದಿಯಾಗಿಲ್ಲ.

ಸಾಧಾರಣ ಮಳೆ

ತರೀಕೆರೆ: ತಾಲೂಕಿನ ಕೆಲವು ಭಾಗಗಳಲ್ಲಿ ಸೋಮವಾರ ಸಂಜೆ ವೇಳೆಗೆ ಭರಣಿ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಕಗೆಂಟ್ಟಿದ್ದ ಜನರಿಗೆ ಗಾಳಿ ಮಳೆಯಿಂದಾಗಿ ಜನರಲ್ಲಿ ಮಂದಹಾಸ ಮೂಡಿದೆ. ತಾಲೂಕಿನ ಕುಡ್ಲೂರು, ಕೊರಟಿಕೆರೆ ಗ್ರಾಮದಲ್ಲಿ ಜೋರಾದ ಮಳೆಯಾಗಿದೆ. ಸಿದ್ದರಹಳ್ಳಿ, ಸೀತಾಪುರ, ದುಗ್ಲಾಪುರ, ಎಲುಗೆರೆ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗಿದೆ. ಪಿರುಮೇನಹಳ್ಳಿ, ಇಟ್ಟಿಗೆ, ಬೇಲೇನಹಳ್ಳಿ ಮತ್ತು ಎಂ.ಸಿ.ಹಳ್ಳಿ ಗ್ರಾಮಗಳಲ್ಲಿ ಜೋರಾಗಿ ಮಳೆ ಸುರಿದಿದೆ. ತಾಲೂಕಿನಲ್ಲಿ ಮಳೆಯಿಂದ ಯಾವುದೇ ಹಾನಿ ಆದ ಬಗ್ಗೆ ವರದಿಯಾಗಿಲ್ಲ.
ಮೂಡಿಗೆರೆಯಲ್ಲಿ ಮಳೆ: ಜನರಲ್ಲಿ ಸಂತಸ
ಮೂಡಿಗೆರೆ: ಪಟ್ಟಣ ಮತ್ತು ಸುತ್ತಮುತ್ತ ಸೋಮವಾರ ಮಧ್ಯಾಹ್ನ ಉತ್ತಮ ಮಳೆಯಾಗಿದೆ.

ಮಲೆನಾಡಿನಲ್ಲಿ ಹಿಂದೆಂದೂ ಕಾಣದ ಬೇಸಿಗೆಯ ಬಿಸಿಲಿನ ತಾಪಕ್ಕೆ ಜನರು ಹೈರಾಣಾರಾಗಿದ್ದರು. ಈಗ ಒಂದು ವಾರದಿಂದೀಚೆಗೆ ಪ್ರತಿದಿನವೂ ಮೋಡ ಕವಿದ ವಾತಾವರಣ ಇರುತ್ತಿತ್ತು. ಜನರು ಸಹ ಮಳೆ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಬಂದಿರಲಿಲ್ಲ. ಸೋಮವಾರ ಸುರಿದ ಮಳೆಯಿಂದಾಗಿ ವಾತಾವರಣ ತಂಪಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರಂಭವಾದ ಮಳೆ ಒಂದು ಗಂಟೆಗೂ ಅಧಿಕ ಕಾಲ ಸುರಿಯಿತು. ಮಳೆಯ ನಿರೀಕ್ಷೆಯಿಲ್ಲದಿರುವುದರಿಂದ ಪಟ್ಟಣಕ್ಕೆ ಆಗಮಿಸಿದ್ದ ಜನರು ಛತ್ರಿಯನ್ನು ತರದೇ ಬಂದಿದ್ದರಿಂದ ಕೆಲಕಾಲ ಪರದಾಡಬೇಕಾಯಿತು.

ಪಟ್ಟಣ ಸೇರಿದಂತೆ ತಾಲೂಕಿನ ಸುತ್ತಮುತ್ತ ಬಣಕಲ್, ಗೋಣೀಬೀಡು, ಮಾಕೋನಹಳ್ಳಿ ಮೊದಲಾದ ಭಾಗಗಳಲ್ಲೂ ಮಳೆ ಸುರಿದಿದ್ದು, ರೈತಾಪಿ ಜನರಿಗೂ ಮಳೆ ಸಂತಸ ತಂದಿದೆ. ತಮ್ಮ ತೋಟಗಳಿಗೆ ನೀರುಹಾಯಿಸುವ ಕೆಲಸವನ್ನು ಕಡಿಮೆ ಮಾಡಿದೆ.


ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.