ಕಳಸ ಭಾಗದಲ್ಲಿ ಮೂರು ಮಂಗಗಳ ಸಾವು


Team Udayavani, Feb 8, 2019, 11:31 AM IST

chikk-3.jpg

ಮೂಡಿಗೆರೆ: ಕಳೆದ ಎರಡು ದಿನಗಳಲ್ಲಿ ಕಳಸ ಪಟ್ಟಣದ ಹೃದಯ ಭಾಗದಲ್ಲಿ ಮೂರು ಮಂಗಗಳು ಮೃತಪಟ್ಟಿವೆ. ಬುಧವಾರ ಪಟ್ಟಣದ ಹೃದಯ ಭಾಗದಲ್ಲಿರುವ ಧನಲಕ್ಷ್ಮೀ ನಿಲಯದ ಹಿಂಭಾಗ ಅನಂತ ಕಾಮತ್‌ ಅವರ ತೋಟದಲ್ಲಿ ಎರಡು ಮಂಗಗಳು ಮೃತಪಟ್ಟಿದ್ದರೆ, ಗುರುವಾರ ಕಳಸ ದೇವಸ್ಥಾನ ಸಮೀಪ ಒಂದು ಮಂಗ ಸತ್ತಿದೆ.

ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಪಶು ಆಸ್ಪತ್ರೆ ವೈದ್ಯರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ. ವೈದ್ಯರು ಮಂಗಗಳ ಕಳೆಬರಹದ ಮರಣೋತ್ತರ ಪರೀಕ್ಷೆ ನಡೆಸಿ ರಕ್ತದ ಮಾದರಿಯನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಿ ಕೊಟ್ಟಿದ್ದಾರೆ. ಬಳಿಕ ಆ ಪ್ರದೇಶಕ್ಕೆ ಔಷಧ ಸಿಂಪಡಿಸಿ ಮಂಗಗಳ ಕಳೆಬರಹ ಸುಟ್ಟು ಹಾಕಲಾಗಿದೆ. ಮಂಗಗಳು ಯಾವ ಕಾರಣದಿಂದ ಮೃತಪಟ್ಟಿವೆ ಎಂಬ ಖಚಿತ ಮಾಹಿತಿ ಪ್ರಯೋಗಾಲಯದಿಂದ ವರದಿ ಬಂದ ಬಳಿಕವೇ ತಿಳಿಯಲಿದೆ.

ಮಂಗನ ಕಾಯಿಲೆ ಈಗಾಗಲೇ ಮಲೆನಾಡಿನಲ್ಲಿ ಹಲವರ ಜೀವ ಬಲಿ ಪಡೆದ ಬೆನ್ನಲ್ಲೇ ಪಟ್ಟಣದಲ್ಲಿ ಮಂಗಗಳು ಸತ್ತು ಹೋಗಿರುವುದರಿಂದ ಹೋಬಳಿಗೂ ಮಂಗನ ಕಾಯಿಲೆ ಕಾಲಿಟ್ಟಿರಬಹುದೇ ಎಂಬ ಆತಂಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ. ಶಿವಮೊಗ್ಗದಲ್ಲಿ ತನ್ನ ಅಟ್ಟಹಾಸ ತೋರಿದ್ದ ಮಂಗನಕಾಯಿಲೆ ಇದೀಗ ಕಳಸ ಹೋಬಳಿಗೂ ಕಾಲಿಟ್ಟಿರಬಹುದೆಂಬ ಆತಂಕ ಎದುರಾಗಿದೆ.

ಕಳಸ ಹೋಬಳಿ ಭಾಗದಲ್ಲಿ ಹಿಂಡುಗಟ್ಟಲೇ ಮಂಗಗಳಿದ್ದು, ಪ್ರತಿ ನಿತ್ಯ ಪಟ್ಟಣ, ಹಳ್ಳಿಗಳಿಗೆ ಲಗ್ಗೆ ಇಡುತ್ತಿವೆ. ಮೂರು ವರ್ಷಗಳ ಹಿಂದೊಮ್ಮೆ ಪಟ್ಟಣದಲ್ಲಿ ಮಂಗಗಳು ಭಾರೀ ತೊಂದರೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮಂಗಗಳನ್ನು ಹಿಡಿದು ಕುದುರೆಮುಖ ಅಭಯಾರಣ್ಯಕ್ಕೆ ಬಿಡಲಾಗಿತ್ತು. ಈಗ ಮತ್ತೆ ಮಂಗಗಳ ಉಟಪಳ ಆರಂಭವಾಗಿದೆ. ಆದರೆ, ಕಳೆದೆರೆಡು ದಿನಗಳಿಂದ ಮಂಗಗಳ ಸರಣಿ ಸಾವು ಸಂಭವಿಸುತ್ತಿದ್ದು, ಮಂಗಗಳು ವೈರಾಣುವಿನಿಂದ ಮೃತಪಟ್ಟಿವೆಯೇ ಅಥವಾ ಮಂಗಗಳ ಉಪಟಳಕ್ಕೆ ಯಾರಾದರೂ ವಿಷವಿಕ್ಕಿದ್ದಾರೆಯೇ ಎನ್ನುವ ಅನುಮಾನ ಎಲ್ಲರಲ್ಲೂ ಮೂಡಿದೆ.

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.