ರೈತರ ಸಾಲಮನ್ನಾಕ್ಕೆ ಸರ್ಕಾರ ಬದ್ಧ
Team Udayavani, Dec 7, 2018, 5:30 PM IST
ಶೃಂಗೇರಿ: ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ರಾಜ್ಯದ ರೈತರ ಸಾಲ ಮನ್ನಾ ಮಾಡಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪಟ್ಟಣದ ಗೌರಿಶಂಕರ್ ಸಭಾಂಗಣದಲ್ಲಿ ಗುರುವಾರ ವಿವಿಧ ಕಾಮಾಗಾರಿ ಉದ್ಘಾಟನೆ ಹಾಗೂ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಬೆಂಗಳೂರಿನಲ್ಲಿ ರೈತರೊಂದಿಗೆ ಸುದೀರ್ಘ ಸಭೆ ನಡೆಸಿದ್ದು, ಸಾಲಮನ್ನಾ ಮಾಡುವ ಯೋಜನೆಗೆ ಹಂತ ಹಂತವಾಗಿ ಯೋಜನೆ ಜಾರಿಗೊಳಿಸಲಾಗುತ್ತದೆ. ಡಿ. 8ರಂದು ಮೊದಲ ದೊಡ್ಡಬಳ್ಳಾಪುರ ಹಾಗೂ ಸೇಡಂ ತಾಲೂಕಿನಲ್ಲಿ ಜಾರಿಗೊಳ್ಳಲಿದೆ. ವಾಣಿಜ್ಯ ಬ್ಯಾಂಕ್ ನಲ್ಲಿ ಇರುವ ಸಾಲದ ದಾಖಲೆ ಸಂಗ್ರಹಿಸಲಾಗಿದ್ದು, ಮೊದಲ ಕಂತಾಗಿ ರೈತರಿಗೆ 50 ಸಾವಿರ ರೂ. ಅವರ ಖಾತೆಗೆ ಜಮಾ ಮಾಡಿ ಸಾಲ ಮನ್ನಾದ ದಾಖಲೆ ಪತ್ರ ರೈತರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ ಎಂದರು.
ಮುಂದಿನ ಬಜೆಟ್ನಲ್ಲಿ ಉಳಿದ ಸಾಲದ ಕಂತನ್ನು ಜಮಾ ಮಾಡಲಾಗುತ್ತದೆ. ಇದರಿಂದ 45 ಸಾವಿರ ಕೋಟಿ ರೂ.ಗಳ ಸಾಲಮನ್ನಾ ಯೋಜನೆಗೆ 21 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಪಿಕಾರ್ಡ್ ಬ್ಯಾಂಕಿನಲ್ಲಿರುವ ರೈತರ ಸಾಲದ ಬಡ್ಡಿ ಮನ್ನಾ ಮಾಡಲಾಗುತ್ತದೆ. ಕಷ್ಟಪಟ್ಟು ಜೀವನ ನಡೆಸುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಬಡವರ ಬಂಧು ಯೋಜನೆಯಡಿ ಹತ್ತು ಸಾವಿರ ರೂ. ಬಡ್ಡಿ ರಹಿತ ಸಾಲ, ಸ್ವಸಹಾಯ ಸಂಘ, ಸ್ತ್ರೀಶಕ್ತಿ ಸಂಘಕ್ಕೆ ಸಬಲೀಕರಣಕ್ಕಾಗಿ ಸುಲಭ ಸಾಲ ನೀಡಲಾಗುವುದು.
ಶಾಲೆ ಕಟ್ಟಡ ದುರಸ್ತಿಗಾಗಿ 1200 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಮಲೆನಾಡಿನಲ್ಲಿ ಕಾಲು ಸಂಕದಿಂದ ಉಂಟಾಗುತ್ತಿರುವ ಅವಘಡ ತಪ್ಪಿಸಲು ಶಾಶ್ವತ ಯೋಜನೆಗೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ