ಸಹಿಷ್ಣುತಾ ಭಾವನೆ ಅಗತ್ಯ: ಡಾ| ಘಂಟಿ


Team Udayavani, Aug 17, 2017, 2:26 PM IST

17-CHI-1.jpg

ರಿಪ್ಪನ್‌ಪೇಟೆ: ಪ್ರಾಚೀನ ಧರ್ಮಗಳ ಅಧ್ಯಯನದಿಂದ ಇಂದಿನ ಜನರಲ್ಲಿ ಸಾಮರಸ್ಯದ ಕಲ್ಪನೆ ಮೂಡಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ| ಮಲ್ಲಿಕಾ ಎಸ್‌. ಘಂಟಿ ಅಭಿಪ್ರಾಯಪಟ್ಟರು.

ಸಮೀಪದ ಹುಂಚ ಜೈನಮಠದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿ, ಶ್ರೀ ಅಬೇರಾಜ್‌ ಬಲ್ಡೋಟಾ ಜೈನ ಸಂಸ್ಕೃತಿ ಅಧ್ಯಯನ ಪೀಠ ಮತ್ತು ಹೊಂಬುಜ ಜೈನ ಮಠದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರಾಚೀನ ಕರ್ನಾಟಕದ ಜೈನ ನೆಲೆಗಳು, ವೈಶಿಷ್ಟ ಮತ್ತು ಅನನ್ಯತೆ ವಿಷಯದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನುಕುಲವೆಂಬುದು ಸಹಜವಾಗಿ ಮಾತಿಗೆ ಮಾತ್ರ ಬಳಸುವ ಪದವಾಗಿದೆ. ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯ. ಹಿಂದಿನ ರಾಜರ ಆಳ್ವಿಕೆಯಲ್ಲಿ ಎಲ್ಲಾ ಧರ್ಮದವರನ್ನು ಸಮನಾಗಿ ಕಾಣುವ ಸಹಿಷ್ಣುತಾ ಭಾವ ಇತ್ತು. ಈಗಿನ ಆಡಳಿತ ವ್ಯವಸ್ಥೆಯವರಲ್ಲಿ ಇದು ಕಾಣಿಸುತ್ತಿಲ್ಲ ಎಂಬುದು ಆತಂಕದ ಸಂಗತಿ. ಹೊಸ ಮತ್ತು ಹಳೆ ತಲೆಮಾರಿನ ಸಮ್ಮಿಲನದ ಅಧ್ಯಯನದಿಂದ ಪ್ರಾಚೀನ ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲುತ್ತದೆ. ಕನ್ನಡ ವಿಶ್ವವಿದ್ಯಾನಿಲಯದಲ್ಲಿ 12 ಅಧ್ಯಯನ ಶಾಖೆಗಳಿದ್ದು ಇತರರೊಂದಿಗೆ ಸೇರಿ ಪ್ರಚುರ ಪಡಿಸುವ ಉದೇಶದಿಂದ ಇಂತಹ ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿದೆ ಎಂದರು.

ವಿಚಾರ ಸಂಕಿರಣ ಉದ್ಘಾಟಿಸಿದ ಡಾ| ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಮಾತನಾಡಿ, ಹುಂಚ ಕ್ಷೇತ್ರದಲ್ಲಿ ಪ್ರಾಚೀನ ಕಾಲದಲ್ಲಿ ನಡೆದ ಜೈನದರ್ಶನ ಗ್ರಂಥಗಳ ರಚನೆ ಇಲ್ಲಿನ ಅರಸೊತ್ತಿಗೆಯ ಸಾಹಿತ್ಯ ರಚನೆಗೆ ನೀಡಿದ ಪ್ರೋತ್ಸಾಹಗಳನ್ನು ನೆನಪಿಸಿಕೊಂಡು ಪ್ರಾಚೀನ ಕರ್ನಾಟಕದ ಜೈನ ನೆಲೆಗಳ ಬಗ್ಗೆ ವಿಷಯವನ್ನು ಮಂಡಿಸುವ ವಿಶಿಷ್ಟ ವಿಚಾರ ಸಂಕಿರಣಕ್ಕೆ ಸಂತಸ ವ್ಯಕ್ತಪಡಿಸಿದರು. ಶಿಖರೋಪನ್ಯಾಸ ನೀಡಿದ ಡಾ| ನಾಡೋಜ ಹಂಪ ನಾಗರಾಜಯ್ಯ, ಕರ್ನಾಟಕದ ಭೂವಿಸ್ತಾರದಲ್ಲಿ 5ನೇ ಶತಮಾನದಲ್ಲಿಯೇ ಜೈನ ಸಂಸ್ಕೃತಿ ನೆಲೆಗೊಂಡಿತ್ತು. ಕದಂಬರ ಕಾಲದಲ್ಲಿ ಜೈನಧರ್ಮವು ರಾಜ್ಯ ಧರ್ಮವಾಗಿ ಗೌರವಿಸಲ್ಪಟ್ಟಿತ್ತು. ಅಂದಿನ ಕಾಲದಲ್ಲಿ ಬಸದಿ ನಿರ್ಮಾಣ ಕಾರ್ಯದಲ್ಲಿ ವಿಶೇಷವಾಗಿ ಮುತುವರ್ಜಿಯನ್ನು ವಹಿಸಿದವರಲ್ಲಿ ಮಹಿಳೆಯರು ಎಂಬುದನ್ನು ಮನಗಾಣಬೇಕಿದೆ ಎಂದರು. 

 ಹಂಪಿ ವಿವಿಯ ಯೋಜನಾ ನಿರ್ದೇಶಕ ಡಾ| ಎಸ್‌.ಪಿ. ಪದ್ಮಪ್ರಸಾದ್‌, ಡಾ| ತಾರೇಹಳ್ಳಿ ಹನುಮಂತಪ್ಪ, ಡಾ|ಬಿ. ಪಾಂಡುರಂಗಬಾಬು, ಡಾ| ಉಪೇಂದ್ರಕುಮಾರ ಸುಬೇದಾರ್‌ ಇನ್ನಿತರರಿದ್ದರು.

ಗೋಷ್ಠಿ: ಮಧ್ಯಾಹ್ನ ನಡೆದ ಮೊದಲ ಗೋಷ್ಠಿಯ ಅಧ್ಯಕ್ಷತೆಯನ್ನು ಮೈಸೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ| ಎನ್‌.ಎಸ್‌. ರಂಗರಾಜು ವಹಿಸಿದ್ದರು. ಪೂರ್ಣಿಮಾ ಡಿ., ಡಾ| ಉಮಾನಾಥ ಶೆಣೈ, ಡಾ| ಎಂ.ಎಂ. ಕೊಟ್ರಸ್ವಾಮಿ, ಡಾ| ಕೆ.ಜಿ. ಭಟ್‌ಸೂರಿ ಅವರು ಪ್ರಾಚೀನ ಕರ್ನಾಟಕದ
ಜೈನನೆಲೆಗಳು ವೈಶಿಷ್ಟ ಮತ್ತು ಅನನ್ಯತೆ ವಿಷಯದ ಬಗ್ಗೆ ಪ್ರಬಂಧ ಮಂಡಿಸಿದರು.  ನಂತರ 4 ಗಂಟೆಗೆ ನಡೆದ ಎರಡನೇ ಗೋಷ್ಠಿಯ ಅಧ್ಯಕ್ಷತೆಯನ್ನು ಬೆಂಗಳೂರಿನ ನಿವೃತ್ತ ಪ್ರಾಂಶುಪಾಲ ಮತ್ತು ವಿದ್ವಾಂಸ ಡಾ| ಎಂ.ಎ. ಜಯಚಂದ್ರ ವಹಿಸಿದ್ದರು. ಗೋಷ್ಠಿಯಲ್ಲಿ ಡಾ| ತಾರಿಹಳ್ಳಿ ಹನುಮಂತಪ್ಪ, ರಂಜಿತ್‌ ಆರ್‌., ಹನುಮಾಕ್ಷಿ ಗೋಗಿ, ಡಾ| ಜಿನದತ್ತ ಹಡಗಲಿ, ಡಾ| ದೇವರೆಡ್ಡಿ ಹದ್ಲಿ ಪ್ರಬಂಧ ಮಂಡಿಸಿದರು. 

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.