ನಾಲ್ಕನೇ ದಿನವೂ ಮುಂದುವರೆದ ಕಾರ್ಯಚರಣೆ; ಡ್ರೋನ್ ಕ್ಯಾಮೆರಾಕ್ಕೂ ಚಳ್ಳೆಹಣ್ಣು ತಿನ್ನಿಸುತ್ತಿರುವ ಮೂಡಿಗೆರೆಯ ಬೈರಾ
Team Udayavani, Dec 2, 2022, 3:04 PM IST
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆ ಹಾವಳಿಯಿಂದ ಸ್ಥಳೀಯರಲ್ಲಿ ಭೀತಿ ಹೆಚ್ಚಿದೆ.
ಡ್ರೋನ್ ಕ್ಯಾಮರಕ್ಕೂ ಚಳ್ಳೆಹಣ್ಣು ತಿನ್ನಿಸಿ ಮೂಡಿಗೆರೆಯ ಬೈರಾ ಮಾತ್ರವಲ್ಲದೇ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಭಾಗದಲ್ಲಿ 3 ಕಾಡಾನೆಗಳು ಕಾಫಿ ತೋಟದಲ್ಲೇ ಬೀಡು ಬಿಟ್ಟಿರುವುದು ಸ್ಥಳೀಯರಲ್ಲಿಆತಂಕವನ್ನುಂಟು ಮಾಡಿದೆ.
ಕಾರ್ಯಚರಣೆಗೂ ಸಿಗದ ನರಹಂತಕ ಕಾಡಾನೆಗಳಿಗಾಗಿ ನಾಲ್ಕನೇ ದಿನವೂ ಹುಡುಕಾಟ ಮುಂದುವರೆದಿದ್ದು, ತಾಲೂಕಿನ ಕುಂದೂರು, ತಳವಾರ ಸುತ್ತಮುತ್ತ ಡ್ರೋನ್ ಬಳಸಿ ಮೂಡಿಗೆರೆ ಬೈರಾ ಹಾಗೂ ಮತ್ತೊಂದು ಒಂಟಿ ಸಲಗಕ್ಕಾಗಿ ಕಾರ್ಯಚರಣೆ ನಡೆಯುತ್ತಿದೆ.
ಒಂದೆಡೆ ನರಹಂತಕನಿಗಾಗಿ ಹುಡುಕಾಟ ನಡೆಸುತ್ತಾ ಮತ್ತೊಂದೆಡೆ ಮೈಕ್ ಅನೌನ್ಸ್ ಮೆಂಟ್ ಮೂಲಕ ಘೋಷಣೆ ಕೂಗಿ ಜನರು ಎಚ್ಚರಿಕೆಯಿಂದಿರಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ