20 ಹಳ್ಳಿಗಳಿಗೆ ಟ್ಯಾಂಕರ್‌ ನೀರುಪೂರೈಸಲು ಕ್ರಿಯಾಯೋಜನೆ ಸಿದ್ಧ


Team Udayavani, Mar 8, 2019, 7:57 AM IST

chikk-1.jpg

ಚಿಕ್ಕಮಗಳೂರು: ತಾಲೂಕಿನ 6 ಗ್ರಾಮ ಪಂಚಾಯತ್‌ಗಳ 20 ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ನೀರು ನೀಡಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ ಎಂದು ತಾಪಂ ಅಧ್ಯಕ್ಷ ಜಯಣ್ಣ ಹೇಳಿದರು.

ತಾಪಂ ಅಂಬೇಡ್ಕರ್‌ ಸಭಾಂಗಣದಲ್ಲಿ ನಡೆದ ಮಾಸಿಕ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಗ್ರಾಮಗಳಿಗೆ ಪ್ರತಿದಿನ 65 ಟ್ಯಾಂಕರ್‌ ನೀರು ಒದಗಿಸಲಾಗುವುದು ಎಂದರು.

ಲಕ್ಕಮ್ಮನಹಳ್ಳಿ, ಲಕ್ಯಾ, ಹಿರೇಗೌಜ, ಕರ್ತಿಕೆರೆ, ತೇಗೂರು ಸೇರಿದಂತೆ 20 ಹಳ್ಳಿಗಳನ್ನು ಗುರುತಿಸಲಾಗಿದೆ. ನೀರು ಒದಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಸುವುದು ಕಡ್ಡಾಯವಾಗಿದ್ದು, ಯಾವ ಗ್ರಾಮಗಳಿಗೆ ನೀರು ನೀಡಲಾಗುತ್ತದೆಯೋ ಆ ಗ್ರಾಮವನ್ನು ಪ್ರತಿನಿಧಿಸುವ ಪಂಚಾಯತ್‌ ಸದಸ್ಯರ ಸಹಿ ಇರಬೇಕು. ಛಾಯಾಚಿತ್ರ ತೆಗೆಸಬೇಕು. ದೃಢೀಕರಣ ಪತ್ರ ತರಬೇಕು. ಎಂದರು.

ಕುಡಿಯುವ ನೀರು ಒದಗಿಸುವುದಕ್ಕೆ ಸಂಬಂಧಿಸಿದಂತೆ ತಲೆದೋರುವ ಲೋಪದೋಷ ಸರಿಪಡಿಸಲು ತಾಪಂ ವತಿಯಿಂದ ಸಿಬ್ಬಂದಿಯೊಬ್ಬರನ್ನು ನೇಮಿಸಲಾಗುವುದು ಈ ಸಿಬ್ಬಂದಿ ಕುಡಿಯುವ ನೀರಿನ ಅವ್ಯವಹಾರ ನಡೆಯದಂತೆ ನೋಡಿಕೊಂಡು ನೀರು ಒದಗಿಸುತ್ತಾರೆ ಎಂದರು.

ಈಗಾಗಲೇ ಕುಡಿಯುವ ನೀರಿನ ಕಾಮಗಾರಿ ಮುಕ್ತಾಯಗೊಂಡಿದ್ದರೆ, ಉದ್ಘಾಟನೆಗೆ ಕಾಯದೆ ಜನರಿಗೆ ನೀರು ನೀಡಲು ಜಿಪಂ ಇಂಜಿನಿಯರಿಂಗ್‌ ವಿಭಾಗ ಮುಂದಾಗಬೇಕು ಎಂದು ತಿಳಿಸಿದರು. ಶಾಸಕ ಸಿ.ಟಿ. ರವಿ ಅವರು 36 ಗ್ರಾಮಗಳಿಗೆ ಕುಡಿಯುವ ನೀರೊದಗಿಸಲು ಟಾಸ್ಕ್ಫೋರ್ಸ್‌ ಸಮಿತಿ ವತಿಯಿಂದ 50 ಲಕ್ಷ ರೂ.ಗಳನ್ನು ಮೀಸಲಿಟ್ಟಿದ್ದಾರೆ. ಇದರಿಂದ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.

ಶಿರವಾಸೆ ಮತ್ತು ಕೈಮರದಲ್ಲಿ 2 ಮಂಗಗಳು ಸಾವನ್ನಪ್ಪಿದ್ದು, ಮಂಗನ ಕಾಯಿಲೆ ದೃಢಪಟ್ಟಿದೆಯೇ ಎಂದು ಅಧ್ಯಕ್ಷರು ಪ್ರಶ್ನಿಸಿದಾಗ, ಈ ಮಂಗಗಳಲ್ಲಿ ಕಾಯಿಲೆ ಹರಡುವ ಉಣ್ಣೆಗಳು ಪತ್ತೆಯಾಗಿಲ್ಲ. ಸುತ್ತಮುತ್ತಲ ಗ್ರಾಮಗಳಲ್ಲಿ ವಾಸಿಸುವ ಜನರಲ್ಲಿ ಜ್ವರ ಕಂಡುಬರುತ್ತಿದೆಯೇ ಎಂದು ಸಮೀಕ್ಷೆ ನಡೆಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಸೀಮಾ ತಿಳಿಸಿದರು.

ತಾಲೂಕಿನಲ್ಲಿ 4 ಎಚ್‌1ಎನ್‌1 ಪ್ರಕರಣ ಪತ್ತೆಯಾಗಿದೆ. ಡೆಂಘೀ ಮತ್ತು ಮಲೇರಿಯಾ ಕಂಡುಬಂದಿಲ್ಲ. ತಿಂಗಳ ಮೊದಲ ಶುಕ್ರವಾರ ಮತ್ತು ಕೊನೆ ಶುಕ್ರವಾರದಲ್ಲಿ ಲಾರ್ವಾ ಸರ್ವೇ ನಡೆಸಲಾಗುತ್ತಿದೆ. ಈ ಕುರಿತು ಎಎನ್‌ ಎಂ ಮತ್ತು ಆಶಾಕಾರ್ಯಕರ್ತೆಯರಿಗೆ ನಿರ್ದೇಶನ ನೀಡಲಾಗಿದೆ ಎಂದರು.

ದೀನ್‌ದಯಾಳ್‌ ಉಪಾಧ್ಯಾಯ ಯೋಜನೆಯಡಿ ಸಮರ್ಪಕವಾಗಿ ಕೆಲಸವಾಗದಿರುವ ಬಗ್ಗೆ ಅಧ್ಯಕ್ಷರು ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಭವ್ಯಾನಟೇಶ್‌
ಅಸಮಾಧಾನ ವ್ಯಕ್ತಪಡಿಸಿದರು. ಅಂಗನವಾಡಿಗಳ ನಿರ್ವಹಣೆಗೆ ವಿಶೇಷ ಅನುದಾನ ಬಂದಿಲ್ಲವೆಂದು ಶಿಶುಅಭಿವೃದ್ಧಿ ಯೋಜನಾಧಿಕಾರಿ ಕೃಷ್ಣಪ್ಪ ತಿಳಿಸಿದಾಗ ಸರ್ಕಾರಿ ಕಟ್ಟಡಗಳು ಉತ್ತಮ ರೀತಿ ನಿರ್ವಹಣೆಯಾಗದಿದ್ದರೆ, ಅಧಿಕಾರಿಗಳು ಮಾಡುವ ತಪ್ಪಿಗೆ ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡಬೇಕಾಗುತ್ತದೆ.

ಅಧಿಕಾರಿಗಳಿಂದ ವಿಶೇಷ ಅನುದಾನ ತರಲು ಸಾಧ್ಯವಾಗದಿದ್ದರೆ, ಅದನ್ನು ನಮ್ಮ ಗಮನಕ್ಕೆ ತರಬೇಕು. ವಿಶೇಷ ಅನುದಾನಕ್ಕೆ ಯತ್ನಿಸಲು ಸಾಧ್ಯವಾಗುತ್ತದೆ ಎಂದು ಅಧ್ಯಕ್ಷರು ಹೇಳಿದರು. ಒಣಗಿರುವ ಪ್ರತಿ ತೆಂಗಿನ ಮರಗಳಿಗೆ ಸರ್ಕಾರ 400 ರೂ. ಪರಿಹಾರ ನೀಡುತ್ತಿದ್ದು, ಈ ತಾಲೂಕಿಗೆ 2 ಕೋಟಿ ರೂ. ಬಂದಿದೆ. ಒಟ್ಟು 3462 ಅರ್ಜಿಗಳು ಸಲ್ಲಿಕೆಯಾಗಿದ್ದು, 2980 ಅರ್ಜಿಗಳಿಗೆ ಪರಿಹಾರ ವಿತರಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರು ತಿಳಿಸಿದರು. ತಾಪಂ ಉಪಾಧ್ಯಕ್ಷ ರಮೇಶ್‌, ಇಒ ಎಚ್‌.ಸಿ. ತಾರನಾಥ್‌ ಇದ್ದರು.

ಲಕ್ಕಮ್ಮನಹಳ್ಳಿ, ಲಕ್ಯಾ, ಹಿರೇಗೌಜ, ಕರ್ತಿಕೆರೆ, ತೇಗೂರು ಸೇರಿದಂತೆ 20 ಹಳ್ಳಿಗಳನ್ನು ಗುರುತಿಸಲಾಗಿದೆ. ನೀರು ಒದಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಸುವುದು ಕಡ್ಡಾಯವಾಗಿದ್ದು, ಯಾವ ಗ್ರಾಮಗಳಿಗೆ ನೀರು ನೀಡಲಾಗುತ್ತದೆಯೋ ಆ ಗ್ರಾಮವನ್ನು ಪ್ರತಿನಿಧಿಸುವ ಪಂಚಾಯತ್‌ ಸದಸ್ಯರ ಸಹಿ ಇರಬೇಕು. ಛಾಯಾಚಿತ್ರ ತೆಗೆಸಬೇಕು. ದೃಢೀಕರಣ ಪತ್ರ ತರಬೇಕು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.