ಮಲೆನಾಡಲ್ಲಿ ಹೆಚ್ಚುತ್ತಿದೆ ಭೂ ಕುಸಿತ


Team Udayavani, Aug 23, 2018, 6:00 AM IST

western-ghats-chikmagalur-district.jpg

ಚಿಕ್ಕಮಗಳೂರು: ಪಶ್ಚಿಮ ಘಟ್ಟ ಪ್ರದೇಶದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಮುಂದುವರಿದಿದೆ. ಮಳೆ ಪ್ರಮಾಣ ತಗ್ಗಿದರೂ ಗುಡ್ಡ, ರಸ್ತೆಗಳು ಕುಸಿಯುತ್ತಲೇ ಇವೆ. ಬುಧವಾರ ಸಹ ಹಲವೆಡೆ ಗುಡ್ಡ ಕುಸಿದಿದ್ದು, ರಸ್ತೆಗಳು ಬಿರುಕು ಬಿಟ್ಟಿವೆ.

ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಬಳಿಯ ಬಿದರೆ ಗ್ರಾಮದ ಸತೀಶ್‌ ಭಟ್‌ ಎನ್ನುವವರಿಗೆ ಸೇರಿದ ಅಡಿಕೆ ತೋಟದಲ್ಲಿ ಭೂಮಿ ಕುಸಿದು ನಷ್ಟವಾಗಿದೆ. ಸುಮಾರು 20 ಅಡಿ ಆಳಕ್ಕೆ ಭೂಮಿ ಕುಸಿದಿದ್ದು, ಒಂದು ಎಕರೆ ಪ್ರದೇಶದಲ್ಲಿದ್ದ ಅಡಿಕೆ, ಕಾಫಿ ಮತ್ತು ಕಾಳುಮೆಣಸು ನಾಶವಾಗಿದೆ. ತಾಲೂಕಿನ ಬೊಗಸೆ ವಡ್ಡಿ ಎಂಬಲ್ಲಿ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿದು ಸಂಚಾರ ಸ್ಥಗಿತಗೊಂಡಿದೆ. ರಸ್ತೆಯ ಒಂದು ಬದಿ ಸಂಪೂರ್ಣ ಕುಸಿದ್ದಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.

ಎನ್‌.ಆರ್‌.ಪುರ ತಾಲೂಕಿನ ಮೇಲ್ಪಾಲ್‌ ಎಂಬಲ್ಲಿ ಗುಡ್ಡ ಕುಸಿದು, ಹಳಸೆ ಶಿವಣ್ಣ ಎನ್ನುವವರ ಕಾಫಿತೋಟಕ್ಕೆ ಹಾನಿಯಾಗಿದೆ. ಗುಡ್ಡ ಕುಸಿತದ ಮಣ್ಣು ಬಿದ್ದು ಸುಮಾರು 1 ಎಕರೆ ಪ್ರದೇಶದ ಕಾಫಿ, ಕಾಳುಮೆಣಸು ಬೆಳೆ ನಾಶವಾಗಿದೆ.

ಮಳೆಗಾಲವಿಡೀ ಕುಸಿತ:
ಈ ವರ್ಷ ಮಳೆಗಾಲದ ಆರಂಭದಿಂದಲೂ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿಯುತ್ತಲೇ ಇದ್ದು, ಪ್ರಮಾಣ ಹೆಚ್ಚಿದೆ. ಅಲ್ಲದೆ, ಜಿಲ್ಲೆಯ ಹಲವೆಡೆ ರಸ್ತೆಗಳು ಬಿರುಕು ಬಿಟ್ಟಿವೆ. ಭಾರೀ ಮಳೆಯಿಂದ ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟಿ ರಸ್ತೆಯ ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಅದೇ ರೀತಿ ಕಳಸ-ಮಂಗಳೂರು ರಸ್ತೆಯಲ್ಲಿಯೂ ಗುಡ್ಡ ಕುಸಿದಿತ್ತು.

ಕೊಪ್ಪದಲ್ಲಿ ಜಾಸ್ತಿ:
ಭೂಕುಸಿತ ಪ್ರಕರಣಗಳು ಕೊಪ್ಪ ತಾಲೂಕಿನಲ್ಲಿ ಹೆಚ್ಚಾಗಿದ್ದು, ಮುಂದುವರಿದಿದೆ. ತಾಲೂಕಿನ ಹೇರೂರು ಸಮೀಪ ಗುಡ್ಡ ಕುಸಿದಿತ್ತು. ಮೇಗುಂದ ಸಮೀಪದ ಗುಡ್ಡೆತೋಟದ ರಸ್ತೆಯಲ್ಲಿ ಬಿರುಕು ಬಿಟ್ಟಿತ್ತಲ್ಲದೆ ಭೂ ಕುಸಿತವುಂಟಾಗಿತ್ತು. ಶಾನುವಳ್ಳಿ ಗ್ರಾಮದಲ್ಲಿ ಭೂ ಕುಸಿತವುಂಟಾಗಿ ಬಾವಿಯೊಂದು 30 ಅಡಿ ಆಳಕ್ಕೆ ಕುಸಿದು ಸುರಂಗ ಉಂಟಾಗಿತ್ತು. ಹೇರೂರು ಗ್ರಾಮದ ಬಳಿ ಭೂ ಕುಸಿತವುಂಟಾಗಿತ್ತು. ಹಾಲುಗರಡಿ, ಬೈರದೇವರು, ಸಂವಾನೆ ಗ್ರಾಮಗಳಲ್ಲಿ ಗುಡ್ಡ ಕುಸಿದಿತ್ತು. ಬಂಡಿಗಡಿ ಸಮೀಪ ಭೂ ಕುಸಿತದಿಂದ ವಿದ್ಯುತ್‌ ಪರಿವರ್ತಕ ಹಾಗೂ 4 ವಿದ್ಯುತ್‌ ಕಂಬಗಳು ನೆಲಕ್ಕುರುಳಿ 4 ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಬೂತನಕಾಡು ಬಳಿ ಭೂ ಕುಸಿತವುಂಟಾಗಿ ಕಾಫಿ, ಅಡಕೆ ತೋಟಗಳಿಗೆ ಮಣ್ಣು ನುಗ್ಗಿ ಬೆಳೆಹಾನಿಯಾಗಿತ್ತು.
ಇದಲ್ಲದೆ ನರಸಿಂಹರಾಜಪುರ ತಾಲೂಕಿನ ಮೇಲ್ಪಾಲ್‌ ಗ್ರಾಮದ ಬಳಿ ಹಲವು ಬಾರಿ ಭೂಕುಸಿತವುಂಟಾಗಿತ್ತು. ಶೃಂಗೇರಿ ತಾಲೂಕಿನಲ್ಲೂ ಸಹ ಹಲವೆಡೆ ಗುಡ್ಡ ಕುಸಿದಿದೆ. 

ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಬೆಟ್ಟ ಶ್ರೇಣಿಯಲ್ಲಿ ಹಲವು ಬಾರಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.
ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಆರಂಭದಿಂದಲೂ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಗಾಳಿ ಮಳೆಯೊಂದಿಗೆ ಆಗಾಗ ಗುಡ್ಡ ಕುಸಿಯುತ್ತಲೇ ಇದೆ. ಭಾರೀ ಮಳೆಗೆ ಗುಡ್ಡ ಕುಸಿದು ಕೊಡಗು ಕೊಚ್ಚಿಹೋಗಿರುವುದು ಕಣ್ಣೆದುರಿಗಿದ್ದು, ಜಿಲ್ಲೆಯ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.