ಜಿಲ್ಲೆಯಲ್ಲಿಲ್ಲ ಕೋವಿಡ್ 19 ಪ್ರಕರಣ: ಸಿ.ಟಿ. ರವಿ


Team Udayavani, Apr 5, 2020, 6:23 PM IST

ಜಿಲ್ಲೆಯಲ್ಲಿಲ್ಲ ಕೊರೊನಾ ಪ್ರಕರಣ: ಸಿ.ಟಿ. ರವಿ

ಚಿಕ್ಕಮಗಳೂರು: ಜಿಲ್ಲಾಡಳಿತ ಪ್ರಾಥಮಿಕ ಹಂತದಲ್ಲಿ ಕಟ್ಟುನಿಟ್ಟಿನ ಮುನ್ನೇಚ್ಚರಿಕೆ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಕೋವಿಡ್‌-19 ಸೋಂಕು ಪಾಸಿಟಿವ್‌ ಪ್ರಕರಣ ಜಿಲ್ಲೆಯಲ್ಲಿ ಇದುವರೆಗೂ ಪತ್ತೆಯಾಗಿಲ್ಲ ಎಂದು ಸಚಿವ ಸಿ.ಟಿ. ರವಿ ಹೇಳಿದರು.

ಶನಿವಾರ ನಗರದ ಜಿಲ್ಲಾ ಧಿಕಾರಿ ಕಚೇರಿಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕು ನಿರ್ವಹಣೆ ಮತ್ತು ನಿಯಂತ್ರಣ ಕ್ರಮಗಳ ಕುರಿತು ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 273 ಶಂಕಿತರನ್ನು ಗೃಹಬಂಧನದಲ್ಲಿರಿಸಿದ್ದು, ಅವರಲ್ಲಿ 49 ಜನ 28 ದಿನಗಳ ನಿಗಾ ಅವ ಧಿ ಪೂರೈಸಿದ್ದಾರೆ ಹಾಗೂ 250 ಮಂದಿ 14 ದಿನಗಳ ಗೃಹಬಂಧನವನ್ನು ಪೂರೈಸಿದ್ದಾರೆ. ಕಳೆದ ಐದು ದಿನಗಳಿಂದ ಯಾವುದೇ ಶಂಕಿತ ಪ್ರಕರಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ಸರ್ವೇಕ್ಷಣಾಧಿಕಾರಿ ಡಾ| ಮಂಜುನಾಥ್‌ ಸಭೆಗೆ ತಿಳಿಸಿದರು.

ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಫೀವರ್‌ ಕ್ಲಿನಿಕ್‌ ತೆರೆಯಲಾಗಿದೆ. ಜಿಲ್ಲೆಯಲ್ಲಿ ಕಾಂಟ್ಯಾಕ್ಟ್ ಟ್ರೇಸಿಂಗ್‌ ಟೀಂ ರಚಿಸಲಾಗಿದೆ. ಈ ತಂಡ ಕೋವಿಡ್‌-19  ಪಾಸಿಟಿವ್‌ ಪ್ರಕರಣ ಪತ್ತೆಯಾದಲ್ಲಿ ಅವರ ಸಂಪರ್ಕದಲ್ಲಿ ಯಾರ್ಯಾರು ಇದ್ದರು ಎಂಬುದನ್ನು ಕಲೆ ಹಾಕಲಿದೆ ಎಂದರು. ಜಿಲ್ಲೆಯ ಚಿಕ್ಕಮಗಳೂರು ತಾಲೂಕು 11, ಕಡೂರು 13, ತರೀಕೆರೆ 10, ಮೂಡಿಗೆರೆ 8, ಕೊಪ್ಪ 5, ಎನ್‌ ಆರ್‌ ಪುರ 5, ಶೃಂಗೇರಿ 2 ತಂಡ ರಚಿಸಿದ್ದು, ಅಲ್ಲದೇ ಕಾಂಟ್ಯಾಕ್ಟ್ ಟ್ರೆಸಿಂಗ್‌ ತಂಡಗಳ ರಚನೆಲಾಗಿದೆ ಎಂದು ತಿಳಿಸಿದರು.

ಸಚಿವ ಸಿ.ಟಿ. ರವಿ ಮಾತನಾಡಿ, ಈ ತಂಡಗಳ ಕಾರ್ಯ ನಿರ್ವಹಣೆಯ ಬಗ್ಗೆ ಜಿಲ್ಲೆಯ ಸಂಸದರು, ಶಾಸಕರು, ಜಿಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ತಕ್ಷಣ ಮಾಹಿತಿಯ ರವಾನಿಸುವಂತೆ ಸೂಚನೆ ನೀಡಿದರು. ಜಿಲ್ಲೆಯ ಎಲ್ಲಾ ತಾಲೂಕಿನ ಜನರಿಗೆ 2 ತಿಂಗಳ ಪಡಿತರ ಮುಂಚಿತವಾಗಿ ನೀಡಬೇಕಾಗಿದ್ದು, ಆಹಾರ ಸರಬರಾಜು ಇಲಾಖೆ ಅಕ್ಕಿ ಮತ್ತು ಗೋಧಿ ಸರಿಯಾದ ಸಮಯದಲ್ಲಿ ವಿತರಣೆ ಮಾಡಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ನಾಗರಾಜ್‌ ಅವರಿಗೆ ಸಚಿವರು ಸೂಚಿಸಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಕೋವಿಡ್‌-19  ವೈರಸ್‌ ಸೋಂಕಿನಿಂದಾಗಿ ಜನರು ಹಸಿವಿನಿಂದ ನರಳುತ್ತಿದ್ದು, ಅದನ್ನು ತಪ್ಪಿಸಲು ಸರ್ಕಾರ 2 ತಿಂಗಳ ಪಡಿತರವನ್ನು ಮುಂಚಿತವಾಗಿ ನೀಡಲು ಕ್ರಮ ವಹಿಸಿದ್ದು, ಯಾವ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಲ್ಲಿ ಯಾವಾಗ ಪಡಿತರ ನೀಡಲಾಗುತ್ತದೆ ಎಂಬುದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ನಾಗರಾಜ್‌ ಅವರಿಗೆ ತಿಳಿಸಿದರು.

ಸಭೆಯಲ್ಲಿ ಕಡೂರು ಕ್ಷೇತ್ರದ ಶಾಸಕ ಬೆಳ್ಳಿಪ್ರಕಾಶ್‌, ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ಉಪಾಧ್ಯಕ್ಷ ವಿಜಯ್‌ ಕುಮಾರ್‌, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾ ಅನಿಲ್‌ ಕುಮಾರ್‌, ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಎಸ್‌. ಪೂವಿತಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ ಪಾಂಡೆ, ಅಪರ ಜಿಲ್ಲಾ ಧಿಕಾರಿ ಡಾ| ಕುಮಾರ್‌, ನಗರಸಭೆ ಆಯುಕ್ತ ಚಂದ್ರಶೇಖರ್‌ ಮತ್ತಿತರರು ಇದ್ದರು.

 

18 ಅಕ್ರಮ ಮದ್ಯ ಪ್ರಕರಣ :  ಲಾಕ್‌ಡೌನ್‌ ವಿಧಿ ಸಿದ ನಂತರ ಜಿಲ್ಲೆಯಲ್ಲಿ 27 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಅದರಲ್ಲಿ 18 ಅಕ್ರಮ ಮದ್ಯ ಮಾರಾಟಕ್ಕೆ ಸಂಬಂ ಧಿಸಿದ್ದು, 6 ಪ್ರಕರಣಗಳು ಲಾಕ್‌ ಡೌನ್‌ ಉಲ್ಲಂಘನೆಗೆ ಸಂಬಂಧಿಸಿವೆ. ಮೂರು ಪ್ರಕರಣಗಳು ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ಸುತ್ತಾಡಿದಕ್ಕೆ ಸಂಬಂಧಿಸಿದ್ದಾಗಿದೆ. ಲಾಕ್‌ಡೌನ್‌ ನಂತರ ಶೇ. 50ರಷ್ಟು ಅಪಘಾತ ಪ್ರಕರಣ ಮತ್ತು ಶೇ.75 ರಷ್ಟು ಕ್ರೈಂ ಪ್ರಕರಣಗಳು ಜಿಲ್ಲೆಯಲ್ಲಿ ಕಡಿಮೆಯಾಗಿವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರೀಶ್‌ ಪಾಂಡೆ ಸಭೆಗೆ ತಿಳಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.