ಧರ್ಮ ಒಡೆಯುವ ಉದ್ದೇಶವಿರಲಿಲ್ಲ: ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪ
Team Udayavani, Aug 19, 2022, 6:20 PM IST
ಚಿಕ್ಕಮಗಳೂರು : ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ, ಕೆಲವರು ನನ್ನನ್ನ ದಾರಿ ತಪ್ಪಿಸಿದರು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾಳೆ ಹೊನ್ನೂರಿನ ಶ್ರೀ ಜಗದ್ಗುರು ರಂಭಾಪುರಿ ಶ್ರೀ ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಬಳಿ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ.
ಚಿಕ್ಕಮಗಳೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ವೀರಸಿಂಹಾಸನ ಮಹಾ ಸಂಸ್ಥಾನ ಪೀಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು.
ಭೇಟಿಯ ಬಳಿಕ ಸುದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸಿದ್ದರಾಮಯ್ಯನವರು ಇಂದು ಮೊತ್ತ ಮೊದಲ ಬಾರಿಗೆ ಪೀಠಕ್ಕೆ ಆಗಮಿಸಿ ಆಶೀರ್ವಾದ ಪಡೆದರು. ಮನಸ್ಸಿನಲ್ಲಿರುವ ದುಗುಡವನ್ನು ಪ್ರಾಂಜಲ ಮನಸ್ಸಿನಿಂದ ನಮ್ಮೆದುರಿಗೆ ಬಿಚ್ಚಿ ಮಾತನಾಡಿದರು. ಖಂಡಿತವಾಗಿ ಪಶ್ಚತ್ತಾಪವಾಗಿದೆ. ಧರ್ಮದ ವಿಚಾರದಲ್ಲಿ ನಾನೆಂದೂ ಪ್ರವೇಶ ಮಾಡುವುದಿಲ್ಲ ಎಂದು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವಿಚಾರದ ಕುರಿತು ಹೇಳಿದ್ದಾರೆ ಎಂದು ತಿಳಿಸಿದರು.
ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ, ರಾಜ್ಯ, ಜನರ ಅಭಿವೃದ್ದಿ ಬಗ್ಗೆ ಆಧ್ಯತೆ ನೀಡುತ್ತೇನೆ. ಬಹಳ ದಿನಗಳಿಂದ ಪೀಠಕ್ಕೆ ಭೇಟಿ ನೀಡುವ ಬಯಕೆ ಇತ್ತು, ಆದರೆ ಇವತ್ತು ಕೂಡಿ ಬಂದದ್ದು ನನ್ನ ಪುಣ್ಯ ಎಂದಿದ್ದಾರೆ. ರಾಜಕೀಯ ವಿಚಾರ ಪ್ರಸ್ತಾಪವಾಗಲಿಲ್ಲ ಎಂದು ಶ್ರೀಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ