ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲು
Team Udayavani, Jun 19, 2022, 5:30 PM IST
ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿ ಮೂವರು ಯುವಕರು ನೀರುಪಾಲಾದ ಘಟನೆ ಕಡೂರು ತಾಲೂಕಿನ ಅಣ್ಣೇಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ.
ರಾಕೇಶ್ (18), ಕಿರಣ್ (16), ದರ್ಶನ್ (20) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಘಟನೆ ಪಂಚನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಗಲಭೆಯ ಬಳಿಕ ಬೂದಿ ಮುಚ್ಚಿದ ಕೆಂಡದಂತಿರುವ ಗೌಂಡವಾಡ: ಬಂಧನ ಭೀತಿಯಿಂದ ಊರು ತೊರೆದ ಹಲವರು