ಮುಂದೆಯೂ ದತ್ತಗೇ ಟಿಕೆಟ್‌


Team Udayavani, Mar 1, 2019, 11:48 AM IST

bell-3.jpg

ಕಡೂರು: ಕಡೂರು ಕ್ಷೇತ್ರದ ಜನರಲ್ಲಿ ಅನೇಕ ಭಿನ್ನಾಭಿಪ್ರಾಯಗಳಿವೆ. ಏನೇ ಇರಲಿ ಕಡೂರು ವಿಷಯದಲ್ಲಿ ದತ್ತನಿಗೆ ಟಿಕೆಟ್‌ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಘೋಷಿಸಿದರು. ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜೆಡಿಎಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದತ್ತ ಕಳೆದ 45 ವರ್ಷಗಳಿಂದ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿ ಕಳೆದ 10 ವರ್ಷಗಳಿಂದ ಶಾಸಕನಾಗಿ ಇದೀಗ ಸೋತಿದ್ದಾರೆ. ಅದೇ ರೀತಿ ಎಸ್‌.ಆರ್‌. ಲಕ್ಷ್ಮಯ್ಯನವರ ಕುಟುಂಬವು ನಮ್ಮ ರಾಜಕೀಯ ಭವಿಷ್ಯದಲ್ಲಿ ಸಹಕಾರ ನೀಡುತ್ತಿದೆ. ಅದೇ ಹಾದಿಯಲ್ಲೇ ಅವರ ಮಕ್ಕಳಾದ
ಧರ್ಮೇಗೌಡ, ಭೋಜೇಗೌಡರು ಇದ್ದಾರೆ ಎಂದರು.
 
ಕಡೂರು ಕ್ಷೇತ್ರಕ್ಕೆ ವೈ.ಎಸ್‌.ವಿ ದತ್ತ ಮತ್ತು ಎಸ್‌. ಎಲ್‌.ಧರ್ಮೇಗೌಡರು ಎರಡು ಕಣ್ಣುಗಳಿದ್ದಂತೆ. ಧರ್ಮೇಗೌಡರು ಮುಂದಿನ 6 ವರ್ಷಗಳವರೆಗೆ ಶಾಸಕರಾಗಿರುತ್ತಾರೆ. ಅವರಿಂದ ಏನೇ ದೂರು ಬಂದರೂ ನಮ್ಮ ಮನೆಗೆ ಕರೆಸಿ ನಾನೇ ತೀರ್ಮಾನ ಮಾಡುತ್ತೇನೆ. ಬಹಿರಂಗವಾಗಿ ಹೇಳಿಕೆ ಬೇಡ ಪಕ್ಷದ ಸಂಘಟನೆಗೆ ದುಡಿಯಿರಿ, ಪಕ್ಷಕ್ಕೆ ಶಕ್ತಿ ತುಂಬಿ ಎಂದರು.

ಜೆಡಿಎಸ್‌ ಯುವ ಮುಖಂಡ ಪ್ರಜ್ವಲ್‌ ರೇವಣ್ಣ ಮಾತನಾಡಿ ಹಾಸನ ಜಿಲ್ಲೆಯಲ್ಲಿ ದೇವೇಗೌಡರಿಗೆ ಶಕ್ತಿ ಇದೆ. ಗೌಡರು ಸ್ಪರ್ಧಿಸಿದರೆ ನಾನೇ ಯುವಕರನ್ನು ಕಟ್ಟಿಕೊಂಡು ಹೋರಾಟ ಮಾಡಿ ಸುಮಾರು 5 ಲಕ್ಷ ಮತಗಳಿಂದ ಗೆಲ್ಲಿಸುತ್ತೇನೆ ಎಂದು ಹೇಳಿದರು.

ಹಾಸನ ಲೋಕಸಭಾ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿದ್ದು, ಪಕ್ಷವು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಕಡೂರು ಕ್ಷೇತ್ರವು ಹಾಸನ ಲೋಕಸಭಾ ಕ್ಷೇತ್ರಕ್ಕೆ ಒಳಪಡುವುದರಿಂದ ದತ್ತಣ್ಣ ಕಡೂರು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತಿದ್ದಾರೆ
ನಾನು ಅವರೊಂದಿಗೆ ಸೇರಿಕೊಂಡು ನೀರಾವರಿ ಯೋಜನೆ, ರೈತರ ಸಮಸ್ಯೆಗಳಿಗೆ ಅವರ ಮಾರ್ಗದರ್ಶನದಲ್ಲಿ ಕಡೂರು ಜನತೆಯ ವಿಶ್ವಾಸ ಗೆಲ್ಲುತ್ತೇನೆ ಎಂದರು.

ಸಚಿವ ಎಚ್‌.ಡಿ. ರೇವಣ್ಣ ಮಾತನಾಡಿ, ದತ್ತ ರಾಜ್ಯದ ಜೆಡಿಎಸ್‌ ಶಕ್ತಿಯಾಗಿದ್ದಾರೆ. ಜೆಡಿಎಸ್‌ ಮೂಲಕ ಕಡೂರು, ಬೀರೂರು, ತರೀಕೆರೆ ಕ್ಷೇತ್ರಗಳಲ್ಲಿ ಅನೇಕ ಬಾರಿ ಕೆಎಂಕೆ, ದತ್ತ, ಲಕ್ಷ್ಮಯ್ಯ, ಧರ್ಮೇಗೌಡರನ್ನು ಗೆಲ್ಲಿಸಿದ್ದೀರಾ. ಕಡೂರು ಕ್ಷೇತ್ರವನ್ನು ಮರೆಯುವಂತಿಲ್ಲ. ಕಡೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ನಾವು ಇಂದು 87 ಕೋಟಿ ಕಾಮಗಾರಿಗಳ ಶಂಕುಸ್ಥಾಪನೆ ಮಾಡಿದ್ದೇವೆ ಎಂದರು. 

ಮಾಜಿ ಶಾಸಕ ಮತ್ತು ಜೆಡಿಎಸ್‌ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವೈ.ಎಸ್‌.ವಿ ದತ್ತ ಮಾತನಾಡಿ, ಹೆಬ್ಬೆ ಯೋಜನೆಗೆ ಸರಕಾರ 100 ಕೋಟಿ ರೂ. ಮೀಸಲಿಟ್ಟಿದೆ. ಈ ಹಿಂದಿನ ಸರಕಾರ ಈ ಯೋಜನೆ ಅನುಷ್ಠಾನಕ್ಕೆ ನಕಾರಾತ್ಮಕವಾಗಿ ಉತ್ತರ ನೀಡಿದ್ದರೂ ಸಹ ಮಾನವೀಯತೆ ದೃಷ್ಠಿಯಿಂದ ಸರಕಾರ ಈ ನಿರ್ಧಾರ ತೆಗೆದುಕೊಂಡಿದ್ದು ನಾನು ಸಹ ಹೆಬ್ಬೆ ಯೋಜನೆ ಅನುಷ್ಠಾನಕ್ಕೆ ಕೋರುತ್ತೇನೆ ಎಂದರು.ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಅಜಿತ್‌ ರಂಜನ್‌ ಕುಮಾರ್‌, ಚನ್ನರಾಯಪಟ್ಟಣ ಶಾಸಕ ಬಾಲಕೃಷ್ಣ, ತಾಲೂಕು ಅಧ್ಯಕ್ಷ ಕೋಡಿಹಳ್ಳಿಮಹೇಶ್ವರಪ್ಪ, ಬಂಡಾರಿ ಶ್ರೀನಿವಾಸ್‌, ಜಿಗಣೆಹಳ್ಳಿ ನೀಲಕಂಠಪ್ಪ, ಸೀಗೆಹಡ್ಲು ಹರೀಶ್‌, ಶೂದ್ರ ಶ್ರೀನಿವಾಸ್‌ ಇತರರು ಪಾಲ್ಗೊಂಡಿದ್ದರು. 

ಚುನಾವಣೆ ಗೆಲುವಿಗಾಗಿ ಬಿಜೆಪಿಯವರು ಏನು ಬೇಕಾದ್ರೂ ಮಾಡ್ತಾರೆ  ಬಿಜೆಪಿಯವರು ಚುನಾವಣೆ ಗೆಲ್ಲಲು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರ ಇಮೇಜ್‌ ಈಗ ಕಡಿಮೆಯಾಗಿರುವುದರಿಂದ ಲೋಕಸಭೆ ಚುನಾವಣೆ ಗೆಲ್ಲಲು ಏನೂ ಬೇಕಾದರೂ
ಮಾಡುತ್ತಾರೆ ಎಂದರು. 

ಕುಮಾರಸ್ವಾಮಿ ಅವರ ಸಾಲಮನ್ನಾ ಯೋಜನೆಯನ್ನು ಟೀಕಿಸಿದ್ದ ಮೋದಿ ಅವರು, ರೈತರ ಸಾಲ ಮನ್ನಾ ಮಾಡುವುದು ಪಾಪದ ಕೆಲಸ ಎಂದಿದ್ದರು. ಆದರೆ ಈಗ ರೈತರ ಖಾತೆಗೆ ಭಿಕ್ಷುಕರಿಗೆ ನೀಡುವಂತೆ ವಾರ್ಷಿಕವಾಗಿ 6 ಸಾವಿರ ರೂ. ಹಾಕುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಬಿಜೆಪಿಯವರಿಗೆ ರೈತರ ಮೇಲೆ ಕಾಳಜಿ ಇದ್ದಿದ್ದೇ ಆದಲ್ಲಿ ಈ ಯೋಜನೆಯನ್ನು ಮೊದಲೇ ಘೋಷಿಸಬೇಕಿತ್ತು. ಚುನಾವಣಾ ಸಂದರ್ಭದಲ್ಲಿ ಈ ಯೋಜನೆ ಘೋಷಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು. 

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನಾಲ್ಕು ವರ್ಷಗಳಲ್ಲಿ ರೈತರಿಗೆ, ಸಾಮಾನ್ಯ ಜನರಿಗೆ ಯಾವ ಜನಪರ ಕೊಡುಗೆಗಳನ್ನೂ ನೀಡಿಲ್ಲ. ರಾಜ್ಯದ ಪಾಲಿನ ಅನುದಾನವನ್ನೂ ಸಮರ್ಪಕವಾಗಿ ನೀಡಿಲ್ಲ. ನರೇಗಾದಡಿಯಲ್ಲಿ ಕೇಂದ್ರ ಸರ್ಕಾರ ಎರಡೂವರೆ ಸಾವಿರ ಕೋಟಿ ರೂ. ಅನುದಾನ ನೀಡಬೇಕಿದೆ. ಅತೀವೃಷ್ಟಿಗೆ ಪರಿಹಾರದ ರೂಪದಲ್ಲಿ 900 ಕೋಟಿ ರೂ. ಬರಬೇಕಿದೆ. ರಾಜ್ಯದಲ್ಲಿ 142 ತಾಲೂಕು ಬರಪೀಡಿತ ಎಂದು ಘೋಷಿಸಿದರೂ ಕೇಂದ್ರ ಸರ್ಕಾರ ಬಿಡಿಗಾಸನ್ನೂ ನೀಡಿಲ್ಲ. ಈ ಬಗ್ಗೆ ಬಿಜೆಪಿ ಮುಖಂಡರು ಮಾತೇ ಆಡುವುದಿಲ್ಲ.

ವಿಧಾನಪರಿಷತ್‌ ಉಪಸಭಾಪತಿ ಎಸ್‌. ಎಲ್‌.ಧರ್ಮೇಗೌಡ, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ರಂಜನ್‌ ಅಜಿತ್‌ ಕುಮಾರ್‌ ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.