“ಬರೋದಾದ್ರೆ ಏಳು ಗಂಟೆ ಒಳಗೆ ಬನ್ನಿ”: ಚಾರ್ಮಾಡಿ ಘಾಟಿಯಲ್ಲಿ ಸಂಚಾರ ದುಸ್ತರ
Team Udayavani, Jul 25, 2021, 8:13 PM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರ ಜೋರಿದೆ. ಸಂಜೆ ಏಳು ಗಂಟೆಯ ನಂತರ ಚಾರ್ಮಾಡಿ ಘಾಟ್ ಮೂಲಕ ಮಂಗಳೂರು-ಧರ್ಮಸ್ಥಳಕ್ಕೆ ತೆರಳಲು ಯಾರೂ ಬರಬೇಡಿ. ಬಂದರೆ, ಇಡೀ ರಾತ್ರಿ ಚಾರ್ಮಾಡಿ ಘಾಟಿಯ ಚಳಿಯಲ್ಲಿ ನಡುಗಬೇಕು. ಜೊತೆಗೆ, ಬೆಳಗ್ಗೆ ಗಾಡಿಗಳು ಹೊರಟಾಗಲೂ ಮೂರ್ನಾಲ್ಕು ಗಂಟೆ ಚಾರ್ಮಾಡಿ ಘಾಟಿಯಲ್ಲಿ ನಿಲ್ಲಬೇಕಾಗುತ್ತದೆ.
ಇಂದು-ನಿನ್ನೆ ಮಳೆ ಪ್ರಮಾಣ ತಗ್ಗಿದ್ದರೂ ಚಾರ್ಮಾಡಿಯ ದಟ್ಟ ಕಾನನದಲ್ಲಿ ವರುಣ ಅಬ್ಬರ ನಿಂತಿಲ್ಲ. ಹಾಗಾಗಿ, ಕಳೆದ ಎರಡ್ಮೂರು ವರ್ಷದಿಂದ ಪ್ರತಿ ವರ್ಷ ಚಾರ್ಮಾಡಿಯಲ್ಲಿ ಬೆಟ್ಟ-ಗುಡ್ಡ, ಭೂ ಕುಸಿತ ಸಾಮಾನ್ಯವಾಗಿತ್ತು. ದುರಸ್ಥಿಗೆ ತಿಂಗಳುಗಳೇ ಬೇಕಾಗಿತ್ತು. ಹಾಗಾಗಿ, ಜಿಲ್ಲಾಡಳಿತ ಮುಂಜಾಗೃತ ಕ್ರಮವಾಗಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಬಾರದೆಂದು ಚಾರ್ಮಾಡಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಜರ್ನಿಗೆ ಸಂಪೂರ್ಣ ಬ್ರೇಕ್ ಹಾಕಿತ್ತು. ಆದರೂ ಗೊತ್ತಿದ್ದೋ… ಗೊತ್ತಿಲ್ಲದೆಯೋ ಬರುವ ಪ್ರವಾಸಿಗರು-ಪ್ರಯಾಣಿಕರಿಗೆ ಬಣಕಲ್ ಪೊಲೀಸರು ಯಾರನ್ನೂ ಬಿಡದೆ ಚಳಿಯಲ್ಲಿ ನಡುಗಿಸಿದ್ದರು.
ನಿನ್ನೆ ರಾತ್ರಿ ಕೂಡ ಸುಮಾರು 200 ವಾಹನಗಳು ಚಾರ್ಮಾಡಿ ಘಾಟಿ ಆರಂಭದ ಕೊಟ್ಟಿಗೆಹಾರದಲ್ಲಿ ಪರೇಡ್ ನಡೆಸಿದ್ದವು. ದಮ್ಮಯ್ಯ ಅಂದರೂ ಪೊಲೀಸರು ಬಿಟ್ಟಿರಲಿಲ್ಲ. ಇಂದು ಬೆಳಗ್ಗೆ 6 ಗಂಟೆಗೆ ವಾಹನಗಳನ್ನ ಬಿಡುತ್ತಿದ್ದಂತೆ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವ ಹಾಗೂ ಚಿಕ್ಕಮಗಳೂರಿನಿಂದ ಮಂಗಳೂರಿಗೆ ಹೋಗುವ ನೂರಾರು ವಾಹನಗಳಿಂದ ಚಾರ್ಮಾಡಿಯಲ್ಲಿ ಸುಮಾರು ಮೂರು ಗಂಟೆ ಟ್ರಾಫಿಕ್ ಜಾಮ್ ಆಗಿತ್ತು. ಪ್ರವಾಸಿಗರು-ಪ್ರಯಾಣಿಕರು ಇಡೀ ರಾತ್ರಿ ಚಾರ್ಮಾಡಿಯ ರಣಚಳಿಯಲ್ಲಿ ನಡುಗಿದ್ದಲ್ಲದೆ. ಬೆಳಗ್ಗೆ ಕೂಡ ಚಳಿಯಲ್ಲಿ ನಡುಗುತ್ತಾ ಮೂರ್ನಾಲ್ಕು ಗಂಟೆ ನಿಂತಲ್ಲೇ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಹಾಗಾಗಿ, ಪ್ರಯಾಣಿಕರು-ಪ್ರವಾಸಿಗರು ಬರೋದಾದರೆ ಸಂಜೆ ಏಳು ಗಂಟೆ ಒಳಗೆ ಬಂದು ಮಂಗಳೂರು ಸೇರಿಬೇಡಿ. ಏಳು ಗಂಟೆಯ ನಂತರ ಬಂದು ಕೊಟ್ಟಿಗೆಹಾರದಲ್ಲಿ ಪರಿತಪ್ಪಿಸಬೇಡಿ.
ಕೊಟ್ಟಿಗೆಹಾರದಲ್ಲಿ ತಂಗಲು ಸಮರ್ಪಕ ಲಾಡ್ಜ್ ಸೌಲಭ್ಯವೂ ಇಲ್ಲ. ಅತ್ತ ಪೊಲೀಸರು ಬಿಡೋದು ಇಲ್ಲ. ಹಾಗಾಗಿ, ಸಂಜೆ ಏಳು ಗಂಟೆಯ ನಂತರ ಬರಬೇಡಿ. ಬಂದು ಉಳಿಯಲು ಜಾಗವಿಲ್ಲದೆ ಮಲೆನಾಡ ಚಳಿಯಲ್ಲಿ ನಡುಗಬೇಡಿ ಅನ್ನೋ ಭಾವನೆ ಮಳೆಯಲ್ಲಿ ನೆನೆದು, ಚಳಿಯಲ್ಲಿ ನಡುಗುತ್ತಾ ರಸ್ತೆಯಲ್ಲಿ ಕಾಲ ಕಳೆಯೋ ಪ್ರಯಾಣಿಕರು-ಪ್ರವಾಸಿಗರನ್ನ ಕಣ್ಣಾರೆ ಕಂಡ ಕೊಟ್ಟಿಗೆಹಾರದ ಹೃದಯವಂತರದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…