ಚಾರ್ಮಾಡಿಯಲ್ಲಿ ಸಂಚಾರ ಸಂಕಟ


Team Udayavani, Jan 22, 2018, 4:09 PM IST

22-42.jpg

ಮೂಡಿಗೆರೆ: ಶಿರಾಡಿ ಘಾಟ್‌ ಕಾಮಗಾರಿಗಾಗಿ ಜ. 20ರಿಂದ ಮಾರ್ಗ ಬಂದ್‌ ಮಾಡಿದ ಹಿನ್ನೆಲೆಯಲ್ಲಿ ಮೊದಲ ದಿನ ಚಾರ್ಮಾಡಿ ಘಾಟ್‌ ಭಾಗದ ಕೊಟ್ಟಿಗೆಹಾರದಲ್ಲಿ ಗಂಟೆಗಟ್ಟಲೆ ಸಂಚಾರ ದಟ್ಟಣೆ ಉಂಟಾಯಿತು. ಇದನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಚಾರ್ಮಾಡಿ ಘಾಟ್‌ನ ಕೆಲವೆಡೆ ಇಕ್ಕಟ್ಟಿನ ರಸ್ತೆಯಿದ್ದು, ಘನ ಗಾತ್ರದ ವಾಹನಗಳನ್ನು ಬಿಟ್ಟ ಪರಿಣಾಮ ಸಂಚಾರ ನಿಯಂತ್ರಣಕ್ಕೆ ಅನಾನುಕೂಲವಾಗಿ ಸಂಚಾರಕ್ಕೆ ಕಿರಿಕಿರಿ ಉಂಟಾಯಿತು. ಈ ಮಾರ್ಗದಲ್ಲಿ ಶನಿವಾರ ಬೆಳಗ್ಗೆ ಕಡಿಮೆಯಿದ್ದ ವಾಹನ ದಟ್ಟಣೆ, ಮಧ್ಯಾಹ್ನದ ನಂತರ ಭಾರೀ ಸರಕು ಸಾಗಾಟ ಲಾರಿ, ರಾಜಹಂಸ ಮತ್ತು ಇತರ ವಾಹನಗಳ ಹೆಚ್ಚಳದಿಂದ ಸಂಚಾರ ದಟ್ಟಣೆ ಉಂಟಾಯಿತು. ಭಾನುವಾರ ಕೂಡಾ ರಜೆ ಇದ್ದ ಕಾರಣ ಇನ್ನೂ ಹೆಚ್ಚಿನ ವಾಹನಗಳು ಈ ಮಾರ್ಗದಲ್ಲಿ ಓಡಾಡಿದವು.
ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು.

ಚಾರ್ಮಾಡಿ ಘಾಟ್‌ ಭಾಗದ ಅಣ್ಣಪ್ಪ ಸ್ವಾಮಿ ದೇವಸ್ಥಾನ ಸಮೀಪ ಕಿರಿದಾದ  ರಸ್ತೆಯಿದ್ದು, ವೇಗದಿಂದ ಬರುವ ವಾಹನಗಳು ಮುಂಭಾಗದಿಂದ ಬರುವ ವಾಹನಗಳು ಕಾಣಿಸದೇ ತೊಂದರೆ ಅನುಭವಿಸುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡ 11ನೇ ತಿರುವಿನ ಎದುರು ಕಡಿದಾದ ಬಂಡೆ ರಸ್ತೆಗೆ ಸಮೀಪವಾಗಿದ್ದು, ವೇಗದಿಂದ ವಾಹನಗಳು ಬಂದರೆ ಎರಡು ವಾಹನಗಳು ಏಕಕಾಲದಲ್ಲಿ ಸಂಚರಿಸಲು ಸಾಧ್ಯವಾಗದೇ ಹಿಂದೆ ಮುಂದೆ ವಾಹನಗಳನ್ನು ಮುನ್ನಡೆಸುವಾಗ ಟ್ರಾಫಿಕ್‌ ಜಾಮ್‌ ಸಂಭವಿಸುತ್ತಿದೆ. ಅಲ್ಲದೇ ಶಿರಾಡಿ ಘಾಟನಲ್ಲಿ ಓಡಾಡುವ ಚಾಲಕರಿಗೆ ಚಾರ್ಮಾಡಿ ಘಾಟಿಯ ರಸ್ತೆಯ ಪರಿಚಯ ಇಲ್ಲದಿರುವುದರಿಂದ ಅವರ ಚಾಲನಾಶೈಲಿಯಿಂದಲೂ ವಾಹನ ಸಂಚಾರಕ್ಕೆ ಅಡಚಣೆಯುಂಟಾಗುತ್ತಿದೆ. ಕೊಟ್ಟಿಗೆಹಾರ ಭಾಗದಲ್ಲಿ ಪ್ರತಿ ಶನಿವಾರ, ಭಾನುವಾರ ಸಾಮಾನ್ಯ ವಾಹನ ಸಂಚಾರ ಹೆಚ್ಚಾಗಿರುತ್ತದೆ. ಆದರೆ ಈಗ ಶಿರಾಡಿ ಘಾಟ್‌ ಬಂದಾದ ಕೂಡಲೇ ಇನ್ನೂ ಹೆಚ್ಚಿನ ವಾಹನಗಳಿಂದ ಸಂಚಾರ ದಟ್ಟನೆ
ಉಂಟಾಗುತ್ತಿದೆ. ಹೀಗಾಗಿ ಭಾನುವಾರ ಮಧ್ಯಾಹ್ನದ ನಂತರ ಪೊಲೀಸರು ಭಾರೀ ಸರಕು ಸಾಗಾಟದ ಲಾರಿಗಳನ್ನು ಹೋಗಲು ಬಿಡದೇ ವಾಪಾಸ್‌ ಬದಲಿ ರಸ್ತೆಯಲ್ಲಿ ಚಲಿಸುವಂತೆ ಸೂಚಿಸಿದ್ದಾರೆ. ಇದರಿಂದಾಗಿ ಈ ಮಾರ್ಗದಲ್ಲಿ ಸಂಚಾರ ದಟ್ಟಣೆ ಕಡಿಮೆಯಾಗಿದೆ. 

ಚಾರ್ಮಾಡಿ ಘಾಟ್‌ ರಸ್ತೆ ಕರಾವಳಿಗೆ ಸಂಪರ್ಕ ಕಲ್ಪಿಸುವುದರಿಂದ ಪ್ರವಾಸಿಗರ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ. ಆದರೆ ಭಾರೀ ಸರಕು ಸಾಗಾಟದ ವಾಹನಗಳನ್ನು ಮೂಡಿಗೆರೆ ಹ್ಯಾಂಡ್‌ ಪೋಸ್‌ನಿಂದಲೇ ಮತ್ತು ಚಾರ್ಮಾಡಿ ಅರಣ್ಯ ತಪಾಸಣಾ ಗೇಟ್‌
ನಿಂದಲೇ ನಿಯಂತ್ರಿಸಿದರೆ ಚಾರ್ಮಾಡಿ ಘಾಟ್‌ ಸಂಚಾರಕ್ಕೆ ಮುಕ್ತವಾಗುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ಸಂಚಾರ ದಟ್ಟನೆ ಉಂಟಾಗದಂತೆ ಘನ ವಾಹನಗಳನ್ನು ಬದಲಿ ರಸ್ತೆಯಿಂದ ಚಲಿಸಲು ಸೂಚನೆ ನೀಡುವುದು ಉತ್ತಮ ಎಂದು ಈ ವೇಳೆ ಪ್ರವಾಸಿಯೊಬ್ಬರ ಅಭಿಪ್ರಾಯಪಟ್ಟರು. 

ನಾಗೇಶ್‌ ಹೆಬ್ಟಾರ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.