ತುಕ್ಡೆ ಗ್ಯಾಂಗ್ ನ ಪ್ರಚೋದನೆಯಿಂದ ಕರ್ನಾಟಕದಲ್ಲಿ ಬೆಂಕಿ ಹತ್ತಿದೆ: ಸಿ.ಟಿ.ರವಿ
Team Udayavani, Dec 21, 2021, 1:59 PM IST
ಚಿಕ್ಕಮಗಳೂರು: ಕನ್ನಡ ಭಾವುಟ ಸುಟ್ಟು ಗಲಭೆ ಎಬ್ಬಿಸುವಂತಹ ಕೆಲಸ ಕಾಂಗ್ರೆಸ್ ಬೆಂಬಲಿತ ಕಾರ್ಯಕರ್ತರು ಮಾಡಿದ್ದಾರೆ. ಶಿವಾಜಿ ಪ್ರತಿಮೆಗೆ ಮಸಿ ಬಳಿದು ಮರಾಠಿಗರನ್ನು ಎತ್ತು ಕಟ್ಟುವ ಷಡ್ಯಂತ್ರ ನಡೆಸಿದರು, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿ ಕರ್ನಾಟಕದಲ್ಲಿ ಮರಾಠಿಗರು ಮತ್ತು ಕನ್ನಡಿಗರೆಂದು ಸಂಘರ್ಷ ಉಂಟು ಮಾಡುವ ಸಂಚು ಮಾಡಿದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೆಲ್ಲದರ ಹಿಂದೆ ಕಾಂಗ್ರೆಸ್ ಇದೆ. ಈಗ ಬಂಧನವಾಗಿರುವುದು ಕಾಂಗ್ರೆಸ್ ಬೆಂಬಲಿಗರು. ಬಂಧಿತರು ಡಿ.ಕೆ.ಶಿವಕುಮಾರ್ ಹಾಗೂ ಜಮೀರ್ ಖಾನ್ ಬೆಂಬಲಿಗರು. ತುಕ್ಡೆ ಗ್ಯಾಂಗ್ ನಲ್ಲಿದ್ದವರು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಅದು ಕನ್ನಯ್ಯ ಕುಮಾರ್ ಇರಬಹುದು, ಹಾರ್ಥಿಕ್ ಪಟೇಲ್ ಇರಬಹುದು. ತುಕ್ಡೆ ಗ್ಯಾಂಗ್ ನ ಪ್ರಚೋದನೆಯಿಂದ ಕರ್ನಾಟಕದಲ್ಲಿ ಬೆಂಕಿ ಹತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ಬೆಳಗಾವಿ:ಗೃಹ ಸಚಿವರಿಂದ ಶಿವಾಜಿ,ಬಸವೇಶ್ವರ ಮತ್ತು ರಾಯಣ್ಣರ ಪ್ರತಿಮೆಗೆ ಮಾಲಾರ್ಪಣೆ
ಪಟಾಕಿ ರವಿ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಪಟಾಕಿ ಶುಭ ಕಾರ್ಯದಲ್ಲಿ ಸ್ವಾಗತ ಮಾಡಲು ಹಚ್ಚುತ್ತಾರೆ. ಆದರೆ ಬೆಂಕಿ ಹಚ್ಚುವ ಜಾಯಾಮಾನಕ್ಕೆ ನಾನು ಸೇರಿದವನಲ್ಲ.ಇವರ ಉದ್ದೇಶ ಅರಾಜಕತೆ ಸೃಷ್ಟಿ ಮಾಡುವುದು, ಬೆಂಕಿ ಹಾಕುವುದು. ಆ ಬೆಂಕಿ ಹಾಕುವ ಜಾಯಮಾನಕ್ಕೆ ನಾನು ಸೇರಿದವನಲ್ಲ. ಬೆಂಕಿ ಹಾಕುವವರು ಡೇಂಜರ್. ಕಾಂಗ್ರೆಸ್ಸಿಗರು ಊರಿಗೆ ಬೆಂಕಿ ಹಾಕಿ ಇದ್ದಲು ಮಾರಿದರೆ ಎಷ್ಟು ಲಾಭವಾಗುತ್ತದೆಂಬ ಮನಸ್ಥಿತಿ ಇರುವವರು. ಬೆಂಕಿ ಹಾಕುವ ಮನಸ್ಥಿತಿ ಕಾರಣಕ್ಕೆ ಇವತ್ತು ಮರಾಠ, ಕನ್ನಡಿಗರ ನಡುವೆ ಸಂಘರ್ಷ ಉಂಟಾಗಿದೆ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು