ತುಳು-ಬ್ಯಾರಿ ಭಾಷೆಗಿದೆ ವಿಶ್ವಮಾನ್ಯತೆ
Team Udayavani, Feb 4, 2019, 10:24 AM IST
ಮೂಡಿಗೆರೆ: ತುಳು ಮತ್ತು ಬ್ಯಾರಿ ಭಾಷೆಗಳು ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯಲ್ಲಿ ಬೆಳೆದು ವಿಶ್ವ ಮಟ್ಟಕ್ಕೆ ತಮ್ಮ ಪ್ರಾಬಲ್ಯ ಬೆಳೆಸಿಕೊಂಡಿದೆ ಎಂದು ಕರ್ನಾಟಕ ಬ್ಯಾರಿ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮ್ಮದ್ ಹೇಳಿದರು.
ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ತುಳುಕೂಟ ಮತ್ತು ಕರ್ನಾಟಕ ತುಳು ಮತ್ತು ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ನಡೆದ ಜಿಲ್ಲಾ ತುಳು ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಕರಾವಳಿ ಜಿಲ್ಲೆಯ ತುಳು ಭಾಷೆ ದಕ್ಷಿಣ ಕರ್ನಾಟಕದಲ್ಲಿ ತಮ್ಮ ಸಾಮರ್ಥ್ಯ ತೋರಿಸಿಕೊಂಡು ದೇಶ ವಿದೇಶದ ಮಟ್ಟಕ್ಕೆ ತಲುಪಿದೆ. ಬ್ಯಾರಿ ಭಾಷೆಯೂ ತುಳು ಭಾಷೆಯ ಜೊತೆಯಾಗಿ ಸಾಗಿದೆ. ಈ ಎರಡೂ ಭಾಷೆಯನ್ನು ಶ್ರೀಮಂತಗೊಳಿಸಲು ತುಳು ಮತ್ತು ಬ್ಯಾರಿ ಅಕಾಡೆಮಿಗಳು ತನ್ನದೇ ಆದ ರೀತಿಯಲ್ಲಿ ಕಾರ್ಯ ನಡೆಸುತ್ತಾ ಜನರ ಮನಸ್ಸನ್ನು ತಲುಪಿದೆ ಎಂದು ತಿಳಿಸಿದರು.
ಮಂಗಳೂರಿನ ತುಳು ವಿದ್ವಾಂಸ ದಯಾನಂದ ಕತ್ತಲ್ಕರ್ ಮಾತನಾಡಿ, ಕೇಂದ್ರ ಸರಕಾರ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸದ ಹೊರತು, ತುಳು ಭಾಷೆಗಾಗಿ ಎಷ್ಟೇ ಸಮ್ಮೇಳನಗಳನ್ನು ನಡೆಸಿದರೆ ಪ್ರಯೋಜನವಿಲ್ಲ. ಸರಕಾರದ ಮೇಲೆ ಒತ್ತಡ ಹೇರುವ ಮೂಲಕ 8ನೇ ಪರಿಚ್ಛೇದಕ್ಕೆ ಸೇರಿಸುವ ಕೆಲಸ ಆಗಬೇಕು. ತುಳು ಭಾಷೆ ಒಂದು ಜಿಲ್ಲೆಯಿಂದ ಬಂದಿದೆ ಎಂದರೆ ತಪ್ಪಾಗುತ್ತದೆ. ಒಂದು ಸಾವಿರ ವರ್ಷದ ಹಿಂದೆ ಕರಾವಳಿ ತುಳು ರಾಜ್ಯವಾಗಿತ್ತು. ಇಂದು ಒಂದು ಜಿಲ್ಲೆಯಾಗಿದೆ. ಈ ಭಾಷೆ ಒಂದು ರಾಜ್ಯವಾಗುವವರೆಗೆ ಹೋರಾಟ ಮಾಡಬೇಕಾಗಿದೆ. ಭಾಷೆಯ ಬೆಳವಣಿಗೆಗೆ ತುಳು ಮತ್ತು ಬ್ಯಾರಿ ಭಾಷಿಗರು ಒಗ್ಗಟ್ಟಾಗಿ ಹೋರಾಟ ರೂಪಿಸುವ ಅಗತ್ಯವಿದೆ ಎಂದು ತಿಳಿಸಿದರು.
ಈ ವೇಳೆ ಸಾಹಿತಿ ಜಯಪ್ಪ ಗೌಡ, ಬ್ಯಾರಿ ಅಕಾಡೆಮಿ ಅಧ್ಯಕ್ಷ ಕೆ.ಮಹಮ್ಮದ್ ಅವರನ್ನು ಗೌರವಿಸಲಾಯಿತು. ತುಳು ಪುಸ್ತಕ ಬಿಡುಗಡೆಗೊಳಿಸಲಾಯಿತು. ಶಾಸಕ ಎಂ.ಪಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
ಎಂಎಲ್ಸಿ ಎಂ.ಕೆ.ಪ್ರಾಣೇಶ್, ಮಾಜಿ ಸಚಿವರಾದ ಮೋಟಮ್ಮ, ಬಿ.ಬಿ.ನಿಂಗಯ್ಯ, ತುಳು ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ರಿಜಿಸ್ಟ್ರಾರ್ ಚಂದ್ರಹಾಸ ರೈ, ತುಳುಕೂಟದ ಅಧ್ಯಕ್ಷ ಅಶೋಕ ಎನ್. ಶೆಟ್ಟಿ, ತಾ.ಪಂ. ಅಧ್ಯಕ್ಷ ಕೆ.ಸಿ.ರತನ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕುಮಾರ್, ಜಿಲ್ಲಾ ಬ್ಯಾರಿ ಒಕ್ಕೂಟದ ಅಧ್ಯಕ್ಷ ಸಿ.ಕೆ.ಇಬ್ರಾಹಿಂ, ಮುಖಂಡರಾದ ನರೇದ್ರ ಶೆಟ್ಟಿ, ಡಾ| ರಾಮಚರಣ ಅಡ್ಯಂತಾಯ, ಬಿ.ಎಲ್.ವಿಶ್ವನಾಥ್ ರೈ, ವಸಂತ ಎಸ್.ಪೂಜಾರಿ, ರಾಘವ ಮುಡಿತ್ತಾಯ, ಕಿರುಗುಂದ ಅಬ್ಟಾಸ್, ವಿಶ್ವ ಕುಮಾರ್, ವಿನೀದ್ ಕುಮಾರ್ ಶೆಟ್ಟಿ, ರವಿಕುಮಾರ್, ಸುಂದರ್ ಬಿಳಗುಳ, ಕೇಶವ ಸುವರ್ಣ, ರಮೇಶ್ ಆಚಾರ್ಯ, ಅತುಲ್ರಾವ್, ಪಿ.ಹರೀಶ್, ಗಂಗಾಧರ್, ಎಂ.ಎ.ಹಮಬ್ಬ, ಐವಿಆರ್ ಪಿಂಟೊ, ಎ.ಸಿ.ಅಯೂಬ್ ಹಾಜಿ, ಫಿಶ್ ಮೋಣು, ಬಿ.ಎಚ್. ಮಹಮ್ಮದ್ ಮತ್ತಿತರರಿದ್ದರು.
ಮೂಡಿಗೆರೆ ತಾಲೂಕಿನಲ್ಲಿ 30 ಸಾವಿರ ಮಂದಿ ತುಳು ಭಾಷಿಗರಿದ್ದೇವೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ನಮ್ಮ ಒತ್ತಾಯವಿದೆ. ತುಳು ಅಕಾಡೆಮಿಗೆ ತಾಲೂಕಿನಿಂದ ಇಬ್ಬರು ಸದಸ್ಯರನ್ನು ಸರಕಾರ ನೇಮಿಸಬೇಕು. ಅಕಾಡೆಮಿಯಿಂದ ಪ್ರತಿ ವರ್ಷ ತುಳುಕೂಟದ ಕಾರ್ಯಕ್ರಮಕ್ಕೆ 5 ಲಕ್ಷ ರೂ. ಅನುದಾನ ಒದಗಿಸಬೇಕು. •ಅಶೋಕ್ ಎನ್.ಶೆಟ್ಟಿ, ತುಳುಕೂಟದ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!