ಹೆಣ್ಣಿನ ಮೋಹಕ್ಕೂ ಬೀಳದ ಪುಂಡಾನೆ : ಅರಣ್ಯಾಧಿಕಾರಿಗಳು ಹೈರಾಣು
Team Udayavani, Aug 22, 2022, 7:31 PM IST
ಚಿಕ್ಕಮಗಳೂರು: ಹೆಣ್ಣಿನ ಮೋಹಕ್ಕೂ ಬೀಳದ ಪುಂಡ ಒಂಟಿ ಸಲಗವೊಂದು ಅರಣ್ಯಾಧಿಕಾರಿಗಳು ಹೈರಾಣುಗುವಂತೆ ಹಿಂಸೆ ಕೊಡುತ್ತಿದ್ದು, ಸೆರೆ ಹಿಡಿಯಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಮೇಗುಂದಾ ಹೋಬಳಿಯ ಸುತ್ತಮುತ್ತ ಕಳೆದ ನಾಲ್ಕೈದು ತಿಂಗಳಿಂದ ಪುಂಡಾನೆ ಕಾಟ ಕೊಡುತ್ತಿತ್ತು. ಇಡೀ ರಾತ್ರಿ ದಾಂಧಲೆ ಮಾಡಿ ಹಗಲಲ್ಲಿ ಸುತ್ತಲೂ ಪ್ರಪಾತವಿರುವ ಎತ್ತರದ ಜಾಗದಲ್ಲಿ ನಿಲ್ಲುತ್ತಿತ್ತು. ಇದರಿಂದ ಅಧಿಕಾರಿಗಳು ಹಾಗೂ ಸ್ಥಳಿಯರು ಹೈರಾಣಾಗಿದ್ದರು.
ಈ ಪುಂಡಾನೆಯನ್ನ ಹಿಡಿಯಲು ಶಿವಮೊಗ್ಗದಿಂದ ಸಾಕಾನೆಗಳನ್ನ ಕರೆಸಿದ್ದರು. ಮೂರು ದಿನದಿಂದ ಕಾರ್ಯಾಚರಣೆ ನಡೆಸಿದರು ಒಂಟಿ ಸಲಗ ಎಲ್ಲರಿಗೂ ಚಳ್ಳೆಹಣ್ಣು ತಿನ್ನಿಸುತ್ತಿದೆ. 11 ಮಾವುತರು, ಐದು ಸಾಕಾನೆಗಳು, ಅಧಿಕಾರಿಗಳು ಸೇರಿ 25ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ ಆನೆ ಸೆರೆಯಾಗಿಲ್ಲ.
ಈಗಲೂ ಹಗಲಲ್ಲಿ ದಾಂಧಲೆ ನಡೆಸುತ್ತಿರೋ ಒಂಟಿ ಸಲಗ ಮೇಗುಂದ ಹೋಬಳಿಯ ಗುಡ್ಡದ ಎತ್ತರಕ್ಕೆ ಹೋಗಿ ನಿಲ್ಲುತ್ತಿದೆ. ಸುತ್ತಲೂ ಪ್ರಪಾತವಿದ್ದು ಬೆದರಿಸಿದರೆ ಬಿದ್ದು ಪ್ರಾಣ ಕಳೆದುಕೊಳ್ಳಬಹುದು ಎಂದು ಅಧಿಕಾರಿಗಳು ಆನೆಯನ್ನ ಬೆದರಿಸಲು ಮುಂದಾಗದೆ ಸೆರೆ ಹಿಡಿಯಲು ಮುಂದಾಗಿದ್ದಾರೆ. ಆದರೆ ಸಾಧ್ಯವಾಗುತ್ತಿಲ್ಲ.
ಅಧಿಕಾರಿಗಳು ಸಾಕು ಹೆಣ್ಣಾನೆ ಭಾನುಮತಿ ಮೂಲಕ ಒಂಟಿ ಸಲಗಕ್ಕೆ ಹನಿಟ್ರ್ಯಾಪ್ ಮೂಲಕ ಸೆರೆ ಹಿಡಿಯಲು ಮುಂದಾದರೂ ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳು ಮೂರು ದಿನದಿಂದ ಉಪಯೋಗವಿಲ್ಲದ ಕಾರ್ಯಚರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಎಷ್ಟೆ ಪ್ರಯತ್ನಪಟ್ಟರೂ ಒಂಟಿ ಸಲಗವನ್ನ ಸೆರೆ ಹಿಡಿಯಲು ಸಾಧ್ಯವಾಗುತ್ತಿಲ್ಲ.
ಹಾವೇರಿಯಲ್ಲಿ ಸೆರೆ ಹಿಡಿದಿದ್ದ ಈ ಪುಂಡಾನೆಗೆ ಹಾವೇರಿ ಟಸ್ಕರ್ ಕೊರಳಿಗೆ ರೇಡಿಯೋ ಕಾಲರ್ ಇದ್ದು ಅದು ಇರುವ ನಿಖರ ಜಾಗ ತಿಳಿದಿದ್ದರೂ ಅಧಿಕಾರಿಗಳೂ ಏನೂ ಮಾಡದ ಸ್ಥಿತಿಯಲ್ಲಿದ್ದು ಪುಂಡಾನೆ ಮುಂದೆ ಅಸಹಾಯಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ