ದುರಸ್ತಿಯಾಗದ ಚರಂಡಿ: ವಿದ್ಯಾರ್ಥಿಗಳಿಗೆ ಸಂಕಷ್ಟ!


Team Udayavani, Jan 4, 2020, 2:37 PM IST

cm–tdy-1

ಕಡೂರು: ಪಟ್ಟಣದ ಬಿಇಒ ಕಚೇರಿ ಆವರಣದಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ಎರಡು ವಿದ್ಯಾರ್ಥಿ ನಿಲಯಗಳ ಮುಂದೆ ಕಳೆದ 20 ದಿನಗಳಿಂದ ಶೌಚಾಲಯದ ನೀರು ಕೊಳಚೆ ನಿಂತು ದುರ್ವಾಸನೆ ಬೀರುತ್ತಿದೆ. ಆದರೆ, ಅಧಿಕಾರಿಗಳ ಮಧ್ಯೆ ಗೊಂದಲ ಉಂಟಾಗಿ ಚರಂಡಿ ದುರಸ್ತಿ ಮಾಡಿಸಲು ಸಾಧ್ಯವಾಗದ ಕಾರಣ ಹಾಸ್ಟೆಲ್‌ ಮಕ್ಕಳು ಮೂಗು ಮುಚ್ಚಿಕೊಂಡೇ ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಮೆಟ್ರಿಕ್‌ ನಂತರದ 2 ವಿದ್ಯಾರ್ಥಿ ನಿಲಯಗಳಿಂದ ಸುಮಾರು 250ಕ್ಕೂ ಹೆಚ್ಚಿನ ಮಕ್ಕಳು ನಿಲಯದಲ್ಲಿದ್ದಾರೆ. ಶೌಚಾಲಯದ ನೀರು ಮತ್ತು ಕಸ ಹೊರ ಹೋಗುವ ಪೈಪ್‌ ಲೈನ್‌ ಇಲ್ಲದ ಕಾರಣ ಮುಂದಿನ ರಸ್ತೆಗೆ ಬಿಡಲಾಗುತ್ತಿದೆ. ಇದರಿಂದ ಬಿಆರ್‌ಸಿ ಕಚೇರಿ, ಶಿಕ್ಷಕರ ಸಂಘ ಮತ್ತು ವಿದ್ಯಾರ್ಥಿ ನಿಲಯದೊಳಗೆ ತೆರಳಲು ಸಮಸ್ಯೆ ಉಂಟಾಗಿದೆ.

ಈ ಹಿನ್ನೆಲೆಯಲ್ಲಿ ಬಿಸಿಎಂ ಅಧಿಕಾರಿ ದುರಸ್ತಿಗೆ ಮುಂದಾದಾಗ ಕ್ಷೇತ್ರ ಶಿಕ್ಷಾಣಾಧಿಕಾರಿ ನಮ್ಮ ಕಚೇರಿಯ ಮುಂದೆ, ಹಿಂದೆ ಪೈಪ್‌ಲೈನ್‌ ತೆಗೆದುಕೊಂಡು ಹೋಗಬೇಡಿ ಎಂದರು.

ಪುರಸಭೆ ಮುಖ್ಯಾಧಿಕಾರಿ ಹಾಗೂ ಸಂಬಂಧಿಸಿದ ವಾರ್ಡ್‌ ಸದಸ್ಯರು ಕೆಲಸ ಮಾಡಬೇಡಿ. ಪುರಸಭೆಯಿಂದ ಮಾಡಿಸುತ್ತೇವೆ ಎಂದು ಹೇಳಿದ್ದರಿಂದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಇಲ್ಲಿಯವರೆಗೂ ಅನೇಕ ಬಾರಿ ಮನವಿ ಮಾಡಿದರೂ ಯಾರೊಬ್ಬರು ಸಹ ಸ್ಪಂದಿಸುತ್ತಿಲ್ಲ ಎಂದು ಬಿಸಿಎಂ ಅಧಿಕಾರಿ ನಾಗವಲ್ಲಿ ತಿಳಿಸಿದರು. ಅಲ್ಲದೇ, ಒಂದೆರಡು ದಿನಗಳು ಕಳೆದರೆ ಇಲಾಖೆಯಿಂದಲೇ ಗುಂಡಿಯನ್ನು ಮುಚ್ಚಿಸುವುದಾಗಿ ನಾಗವಲ್ಲಿ ಹೇಳಿದರು. ಕಳೆದ 20 ದಿನಗಳ ಹಿಂದೆ ದುರಸ್ತಿಗೆ ಗುಂಡಿ ತೆಗೆಯಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ಮತ್ತೂಂದು ವಿದ್ಯಾರ್ಥಿ ನಿಲಯ ಇಲ್ಲಿಯೇ ಕಾರ್ಯ ನಿರ್ವಹಿಸುತ್ತಿದೆ. ಬಾಲಕಿಯರು ಪ್ರತಿ ದಿನ ಚರಂಡಿ ದಾಟುವುದೇ ಕಷ್ಟವಾಗಿದೆ. ಗ್ಯಾಸ್‌ ಸಿಲಿಂಡರ್‌ ತರುವುದು, ತರಕಾರಿ, ರೇಷನ್‌ ಒಳಗೆ ತರುವುದು ಸಮಸ್ಯೆಯಾಗಿದೆ. ನೀರು ದುರ್ವಾಸನೆ ಬೀರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಸಮಸ್ಯೆಯಾಗಿದೆ ಎಂಬ ಅಳಲನ್ನು ಬಾಲಕಿಯರು ತೋಡಿಕೊಂಡರು.

ಬಿಆರ್‌ಸಿ ಕಚೇರಿಗೆ ತೆರಳುವ ಶಿಕ್ಷಕರಿಗೆ ಸಾರ್ವಜನಿಕರಿಗೆ ಸಮಸ್ಯೆಯಾಗಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕೆಂದು ಶಿಕ್ಷಕ ವೃಂದ ಅಧಿಕಾರಿಗಳಿಗೆ ಮನವಿ ಮಾಡಿದೆ. ಅಧಿಕಾರಿಗಳ ಮುಸುಕಿನ ಗುದ್ದಾಟದಿಂದ ಬಾಲಕಿಯರಿಗೆ ನಿತ್ಯ ತೊಂದರೆಯಾಗುತ್ತಿದ್ದು, ಸಮಸ್ಯೆ ಪರಿಹರಿಸುವವರೇ ಇಲ್ಲವೇ ಎಂಬ ಪ್ರಶ್ನೆ ಪೋಷಕರಿಂದ ಕೇಳಿ ಬರುತ್ತಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು, ಇಲಾಖೆಯ ಮುಖ್ಯಸ್ಥರು ಗುಂಡಿ ಮುಚ್ಚಿಸಿ ಮಕ್ಕಳ ಆರೋಗ್ಯಕ್ಕೆ ಒತ್ತು ನೀಡಲಿ ಎಂಬ ಮಾತು ಕೇಳಿ ಬರುತ್ತಿದೆ.

 

-ಏ.ಜೆ.ಪ್ರಕಾಶ್‌ ಮೂರ್ತಿ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.