ಮಾಜಿ ಸಿಎಂ ಜತೆ ವಿಡಿಯೋ ಕಾನ್ಫರೆನ್ಸ್
Team Udayavani, Jun 1, 2020, 6:45 AM IST
ಕೊಟ್ಟಿಗೆಹಾರ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ವಿವಿಧ ಜಿಲ್ಲೆಗಳ ಜೆಡಿಎಸ್ ಜಿಲ್ಲಾಧ್ಯಕ್ಷರು ಹಾಗೂ ಜೆಡಿಎಸ್ನ ಹಾಲಿ ಹಾಗೂ ಮಾಜಿ ಶಾಸಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಶನಿವಾರ ನಡೆಯಿತು.
ಜೆಡಿಎಸ್ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ರಂಜನ್ ಅಜಿತ್ಕುಮಾರ್ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ಕುಮಾರ್ ಮಾತನಾಡಿ, ಜಿಲ್ಲೆಯ ನೆರೆಪೀಡಿತ ಪ್ರದೇಶಗಳ ನೆರೆ ಸಂತ್ರಸ್ತರು ಶಾಶ್ವತ ನೆಲೆ ಕಂಡು ಕೊಂಡಿಲ್ಲ. 5 ತಿಂಗಳ ಬಾಡಿಗೆ ಮತ್ತು 1 ಲಕ್ಷ ರೂ. ಪರಿಹಾರ ಬಂದಿರುವುದು ಬಿಟ್ಟರೆ ಶಾಶ್ವತ ಪರಿಹಾರೋಪಾಯಗಳು ಜಾರಿಯಾಗಿಲ್ಲ. ಕೋವಿಡ್ ದಿಂದಾಗಿ ಸಂಕಷ್ಟದಲ್ಲಿರುವ ಆಟೋ ಚಾಲಕರು, ಕಾರ್ಮಿಕರು ಮುಂತಾದವರಿಗೆ ನೀಡುತ್ತೇವೆ ಎಂದಿದ್ದ ಧನಸಹಾಯ ಕೇವಲ ಬೋಗಸ್ ಆಗಿದೆ. ಕೋವಿಡ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವವರಿಗೆ ಜೆಡಿಎಸ್ನಿಂದ ಕಿಟ್ಗಳನ್ನು ವಿತರಿಸಲಾಗಿದೆ ಎಂದರು. ತಾಲ್ಲೂಕು ಯುವ ಜನತಾದಳ ಕಾರ್ಯಾಧ್ಯಕ್ಷ ಆದರ್ಶ ಬಾಳೂರು ಇದ್ದರು.