ಕೋವಿಡ್ ಸಮಯದಲ್ಲಿ ಅಧಿಕಾರಿಗಳ ಮೋಜು-ಮಸ್ತಿ: ಕಾರು-ಜೀಪುಗಳನ್ನು ತಡೆದು ಗ್ರಾಮಸ್ಥರ ಆಕ್ರೋಶ
Team Udayavani, May 21, 2021, 2:00 PM IST
ಚಿಕ್ಕಮಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕಿನ ಕಾರಣದಿಂದ ಬಿಗಿ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಜನರು ಯಾರೂ ಅನಗತ್ಯವಾಗಿ ಓಡಾಡುವಂತಿಲ್ಲ ಎಂದು ನಿಯಮ ಮಾಡಲಾಗಿದೆ. ನಿಯಮ ಮೀರಿದವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಆದರೆ ಕಾಫಿನಾಡು ಚಿಕ್ಕಮಗಳೂರಿನ ಅರಣ್ಯಾಧಿಕಾರಿಗಳಿಗೆ ಮಾತ್ರ ಯಾವುದೇ ನಿಯಮಗಳು ಅನ್ವಯಿಸುವುದಿಲ್ಲವೇ ಎಂಬ ಅನುಮಾನ ಜನತೆಗೆ ಕಾಡುತ್ತಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ ಮೋಜು ಮಸ್ತಿಗೆಂದು ಹತ್ತಾರು ವಾಹನಗಳಲ್ಲಿ ತೆರಳುತ್ತಿದ್ದ ಅರಣ್ಯಾಧಿಕಾರಿಗಳನ್ನು ಗುರುವಾರ ಜನರು ತಡೆದು ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ.
ಇದನ್ನೂ ಓದಿ:ಶೃಂಗೇರಿ ತಾಲೂಕು ಕಚೇರಿಯಲ್ಲೇ ತಹಶೀಲ್ದಾರ್ ಬರ್ತ್ ಡೇ ಸೆಲಬ್ರೇಷನ್: ವಿಡಿಯೋ ವೈರಲ್
ಚಿಕ್ಕಮಗಳೂರಿನಿಂದ ಸಂತವೇರಿ ಸಮೀಪದ “ಗೇಮ್ ಫಾರೆಸ್ಟ್” ಗೆ ಹಿರಿಯ ಅಧಿಕಾರಿಗಳ ತಂಡ ಹೊರಟಿತ್ತು. ಸಂತವೇರಿ ಗ್ರಾಮದ ಬಳಿ ಕಾರು-ಜೀಪುಗಳನ್ನು ತಡೆದ ಗ್ರಾಮಸ್ಥರು, ಕೊರೊನಾ ಸಮಯದಲ್ಲಿ ನಿಮಗೆ ಮೋಜು-ಮಸ್ತಿ ಬೇಕಾ ಎಂದು ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮಸ್ಥರು ಘೇರಾವ್ ಹಾಕಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾರಿಕಾಣದೇ ವಾಪಸಾಗಿದ್ದರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್