ಬಾಬಾ ಬುಡನ್ ಗಿರಿ ಗುಹೆಯೊಳಗೆ ಸಚಿವ ಸಿ.ಟಿ ರವಿಯಿಂದ ಕಾನೂನು ಉಲ್ಲಂಘನೆ?
Team Udayavani, Sep 28, 2020, 2:27 PM IST
ಚಿಕ್ಕಮಗಳೂರು: ಬಾಬಾ ಬುಡನ್ ಗಿರಿಯ ಗುಹೆಯೊಳಗೆ ದತ್ತ ಪಾದುಕೆ ದರ್ಶನದ ವೇಳೆ ಸಚಿವ ಸಿ.ಟಿ ರವಿಯಿಂದ ಕಾನೂನು ಉಲ್ಲಂಘನೆ ಆರೋಪ ಕೇಳಿಬಂದಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಭಾನುವಾರ ನಗರಕ್ಕೆ ಆಗಮಿಸಿದ್ದ ಸಿ.ಟಿ.ರವಿ ಸೋಮವಾರ ಮುಜರಾಯಿ ಇಲಾಖೆಯ ಅಧಿಕಾರಿಗಳೊಂದಿಗೆ ಬಾಬಾ ಬುಡನ್ ಗಿರಿಗೆ ಭೇಟಿ ನೀಡಿದ್ದರು. ಈ ವೇಳೆ ಅವರು ಗುಹೆಯೊಳಗೆ ಇರುವ ದತ್ತಪಾದುಕೆಗಳ ದರ್ಶನ ಪಡೆದಿದ್ದಾರೆ.
ದರ್ಶನದ ವೇಳೆ ಸಿ.ಟಿ.ರವಿ ಜೊತೆಯಲ್ಲಿದ್ದವರು ಗುಹೆಯೊಳಗೆ ವಿಡಿಯೋ ಮಾಡಿರುವುದಲ್ಲದೇ ಪೊಟೊಗಳನ್ನೂ ತೆಗೆದಿದ್ದಾರೆ.
ಇದನ್ನೂ ಓದಿ:ರೈತರಿಗೆ ಅನ್ಯಾಯವಾದರೆ ಅಧಿಕಾರಕ್ಕೆ ಅಂಟಿಕೊಂಡು ಕೂರಲ್ಲ: ಬಿ ಎಸ್ ಯಡಿಯೂರಪ್ಪ
ಬಾಬಾ ಬುಡನ್ ಗಿರಿ ದತ್ತಪೀಠದ ವಿವಾದದ ಹಿನ್ನೆಲೆಯಲ್ಲಿ ಸರಕಾರದ ಮುಜರಾಯಿ ಇಲಾಖೆ ಈ ಹಿಂದೆ ಗುಹೆಯೊಳಗೆ ಪೊಟೊ ವಿಡಿಯೋ ಮಾಡುವುದನ್ನು ನಿಷೇದಿಸಿ ಆದೇಶ ಮಾಡಿದೆ. ಈ ಹಿನ್ನೆಲೆಯಲ್ಲಿ ದತ್ತ ಪಾದುಕೆಗಳ ದರ್ಶನಕ್ಕೆ ಬರುವವರಿಗೆ ಜಿಲ್ಲಾಡಳಿತ ಗುಹೆಯೊಳಗೆ ಪೊಟೊ, ವಿಡಿಯೋ ತೆಗೆಯಬಾರದೆಂದು ಷರತ್ತು ವಿಧಿಸಿದೆ.
ಆದರೆ ಸೋಮವಾರ ಸಚಿವ ಸಿಟಿ ರವಿ ಹಾಗೂ ಅವರ ಬೆಂಬಲಿಗರು ಗುಹೆಯೊಳಗೆ ಪೊಟೊ ತೆಗೆದಿರುವುದಲ್ಲದೇ, ವಿಡಿಯೋ ಕೂಡ ಮಾಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಸರಕಾರದ ಪ್ರತಿನಿಧಿಯಾಗಿ, ವಿವಾದಿತ ಸ್ಥಳವೊಂದರ ಬಗ್ಗೆ ಸರಕಾರದ ಕಾನೂನುಗಳ ಮಾಹಿತಿ ಇದ್ದರೂ ಸಚಿವ ಸಿ.ಟಿ.ರವಿ ಉದ್ದೇಶ ಪೂರ್ವಕವಾಗಿ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆಂಬ ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.
ದತ್ತ ಪಾದುಕೆಗಳ ಸಂದರ್ಭ ಜಿಲ್ಲೆಯ ಮುಜಾರಾಯಿ ಇಲಾಖೆಯ ಅಧಿಕಾರಿಗಳು ಸಿ.ಟಿ ರವಿ ಅವರೊಂದಿಗಿದ್ದು, ಕಾನೂನು ಉಲ್ಲಂಘನೆಗೆ ಅಧಿಕಾರಿಗಳು ಸಾಥ್ ನೀಡಿದ್ದಾರೆಂದೂ ಅರೋಪಿಸಲಾಗುತ್ತಿದೆ.
ಇನ್ನು ಈ ಘಟನೆ ಸಂಬಂಧ ಜಿಲ್ಲಾಡಳಿತ ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಮೌನಕ್ಕೆ ಶರಣಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ