ಸರ್‌ಎಂವಿ ಮಾರ್ಗದಲ್ಲಿ ನಡೆದರೆ ಭವಿಷ್ಯ ಉಜ್ವಲ


Team Udayavani, Sep 17, 2018, 5:14 PM IST

chikk.jpg

ಚಿಕ್ಕಮಗಳೂರು: ತಾಂತ್ರಿಕತೆಯ ಜ್ಞಾನವನ್ನು ಸದುಪಯೋಗಕ್ಕಾಗಿ ಬಳಸಿಕೊಳ್ಳುವ ಸ್ವಾನುಭವ ಅಗತ್ಯವೆಂಬುದನ್ನು ಸರ್‌.ಎಂ.ವಿ. ಅವರಿಂದ ಕಲಿಯಬಹುದು ಎಂದು ಕನ್ನಡ ಸಾಹಿತ್ಯ ಪೂಜಾರಿ ಹಿರೇಮಗಳೂರುಕಣ್ಣನ್‌ ಅಭಿಪ್ರಾಯಪಟ್ಟರು.

ಜಿಲ್ಲಾ ಸಿವಿಲ್‌ ಇಂಜಿನಿಯರ್ ಅಸೋಸಿಯೇಷನ್‌ ನಗರದ ಎಂಎಲ್‌ವಿ ರೋಟರಿ ಸಭಾಂಗಣದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ಇಂಜಿನಿಯರ್ ಡೇ ಸಂಭ್ರಮಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವೇಶ್ವರಯ್ಯ ಅವರ ಜೀವನ ಮತ್ತು ಸಾಧನೆಯನ್ನು ಮೊದಲು ಅಭ್ಯಾಸ ಮಾಡಿ, ಪಿಎಚ್‌ಡಿ ಪಡೆದು ಪುಸ್ತಕವಾಗಿ ಹೊರ ತಂದಿರುವವರು ನಮ್ಮ ಜಿಲ್ಲೆಯ ಡಾ| ಜಯಪ್ಪ ಗೌಡ ಎಂಬುದು ಜಿಲ್ಲೆಗೆ ಅಭಿಮಾನದ ಸಂಗತಿ. ಅದೇರೀತಿ ಸರ್‌.ಎಂ.ವಿ. ಅವರ ಪತ್ರಗಳನ್ನೆಲ್ಲಾ ಸಂಗ್ರಹಿಸಿ ಪುಸ್ತಕ ರೂಪದಲ್ಲಿ ತಂದಿರುವ ಶಿವಮೊಗ್ಗದ ಸುಂದರರಾಜ್‌ ಕೆಲಸವೂ ಸ್ಮರಣೀಯ. ಅವರ ದೌಲತ್ತು, ಜಬರ್ದಸ್ತು, ಬದ್ಧತೆ, ಸಮಯಪ್ರಜ್ಞೆ ಸಾಮಾಜಿಕ ಕಾಳಜಿ ವಿಶೇಷವಾಗಿತ್ತು ಎಂದು ಸ್ಮರಿಸಿದರು. 

ತಾಂತ್ರಿಕತೆಯ ಜ್ಞಾನವನ್ನು ಸ್ವಾನುಭಾವದಿಂದ ಬಳಸುವ ವಿವೇಚನೆ ಅಗತ್ಯ. ಇತ್ತೀಚೆಗೆ ಬೇಲೂರಿಗೆ ಭೇಟಿ ನೀಡಿದ್ದ ವಿದೇಶಿಯ ಪ್ರವಾಸಿ ಯಗಚಿ ಅಣೆಕಟ್ಟೆಯ ಪ್ರಸ್ತುತತೆಯನ್ನು ಪ್ರಶ್ನಿಸಿದ್ದರು. ಕೇವಲ ಎರಡು ಕಿ.ಮೀ. ಅಂತರದಲ್ಲಿ ವಿಶ್ವವಿಖ್ಯಾತ ದೇವಾಲಯವಿದ್ದು, ಅಣೆಕಟ್ಟೆಯಲ್ಲಿ ನೀರಿರುವುದರಿಂದ ಅದರ ಪಸೆ 50ಕಿ. ಮೀ.ವರೆಗೂ ಪಸರಿಸುವ ಸಾಧ್ಯತೆ ಇದೆ. ಒಂದೊಮ್ಮೆ ಅಣೆಕಟ್ಟೆಗೆ ಧಕ್ಕೆಯಾದರೆ ಸುಂದರ-ಅಪೂರ್ವ ಕಲಾದೇಗುಲ ನಾಶವಾಗುವ ಸಾಧ್ಯತೆ ಇದೆ. ಮುಂದೆ ಇಂತಹ ಕೆತ್ತನೆಯನ್ನು ಮಾನವ ಸಂಪನ್ಮೂಲ ಬಳಸಿ ಪುನಃ ನಿರ್ಮಿಸುವುದು ಅಸಾಧ್ಯವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರೆಂದು ಕಣ್ಣನ್‌ ಉಲ್ಲೇಖೀಸಿದರು. ಇಂಗ್ಲಿಷ್‌ ಕಲಿಸಿ, ಕನ್ನಡ ಮರೆಸಿ ಮಕ್ಕಳ ಸೃಜನಶೀಲತೆಯನ್ನು ಹಾಳು ಮಾಡುತ್ತಿದ್ದೇವೆ. 

ಅಂಕಗಳಿಕೆಗಾಗಿ ಓದುವುದಕ್ಕಿಂತ ಉತ್ತಮ ಜೀವನ ನಡೆಸಲು ಶಿಕ್ಷಣ ಅಗತ್ಯ. ಸತ್ಸಜೆಗಳಾಗಿ ಬದುಕುವುದೇ ನಿಜವಾದ ಬದುಕು. ಸಾಕ್ಷರರಿಂದಲೇ ನಿಜವಾಗಿಯೂ ಸ್ವತ್ಛತೆಗೆ ಹಾನಿಯುಂಟಾಗಿದೆ. ಇತಿಹಾಸ ನಿರ್ಮಿಸುವ ಶಕ್ತಿ ಭಾರತಕ್ಕಿದೆ. ಸತ್ಯವೇ ನಮ್ಮ ತಾಯಿ-ತಂದೆ, ಬಂಧು-ಬಳಗ ಎಂದು ನಂಬಿದ್ದ ಸರ್‌.ಎಂ.ವಿ. ಅವರ ಹಾದಿಯಲ್ಲಿ ಮುನ್ನಡೆದಾಗ ನಿಜಕ್ಕೂ ದೇಶದ ಭವಿಷ್ಯ ಉಜ್ವಲಗೊಳ್ಳಲಿದೆ ಎಂದರು.

ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ  ದಿಚುಂಚನಗಿರಿ ವಿ.ವಿ.ಕುಲಸಚಿವ ಡಾ|ಸುಬ್ರಾಯ, ವಿಶ್ವಕಂಡ ಬಹುಮುಖ ಪ್ರತಿಭೆ ಸರ್‌.ಎಂ.ವಿ. ಶಿಸ್ತು, ಪ್ರಾಮಾಣಿಕತೆ, ದಕ್ಷತೆ, ತಾಂತ್ರಿಕ ನೈಪುಣ್ಯತೆ, ದೂರದೃಷ್ಟಿ, ಮಾನವೀಯತೆ, ಇವೆಲ್ಲ ಓರ್ವ ವ್ಯಕ್ತಿಯಲ್ಲಿ ಮೇಳೈಸಿರುವುದು ಅಪರೂಪ. ಒಪೊ³ತ್ತಿನ ಊಟಮಾಡಿ, ಬೀದಿ ದೀಪದಡಿ ಓದಿ, ಸಂಕಷ್ಟಗಳನ್ನೆಲ್ಲಾ ಅನುಭವಿಸಿ ಮೂಡಿಬಂದ ಅವರದು ಸಾಧನೆಯ ಬದುಕು ನಿಷ್ಕಂಳಕ ವ್ಯಕ್ತಿತ್ವ ಎಂದರು. 

ಔದ್ಯೋಗೀಕರಣಗೊಳ್ಳದಿದ್ದರೆ ದೇಶ ವಿನಾಶದತ್ತ ಸಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದ ಸರ್‌.ಎಂ.ವಿ. ಮಹಾತ್ಮಾ ಗಾಂಧೀಜಿ ಅವರೊಂದಿಗೆ ಸುಮಧುರ ಬಾಂಧವ್ಯ ಹೊಂದಿದ್ದರು. ಅನೇಕ ಹೊಸ ಆವಿಷ್ಕಾರಗಳಿಗೆ ಕಾರಣರಾಗಿದ್ದರು. ಅಣೆಕಟ್ಟೆಗೆ ಸ್ವಯಂಚಾಲಿತ ಗೇಟ್‌ ಗಳನ್ನು ಅಳವಡಿಸಿದಷ್ಟೇ ಅಲ್ಲದೆ ಈ ತಂತ್ರಜ್ಞಾನಕ್ಕಾಗಿ ಪೇಟೆಂಟ್‌ ಪಡೆದಿದ್ದವರೆಂದು ಡಾ| ಸುಬ್ರಾಯ ವಿವರಿಸಿದರು. ಸಂಘದ ಅಧ್ಯಕ್ಷ ಎಂ.ಎಸ್‌.ಮಹೇಶ್‌ ಅಭಿನಂದನಾ ಭಾಷಣ ಮಾಡಿದರು. 

ಇಂಜಿನಿಯರ್‌ ಕುಟುಂಬದ ಪ್ರತಿಭಾವಂತ ವಿದ್ಯಾರ್ಥಿಗಳಾದ ವಿದ್ಯಾಶ್ರೀ, ಡಾ|ನಿಖೀಲ್‌ ಎನ್‌.ಕಶ್ಯಪ್‌ ಮತ್ತು ಚಿರಾಗ್‌ ಎಂ.ಅರಸು ಅವರನ್ನು ಪುರಸ್ಕರಿಸಿ ಮಾತನಾಡಿದ ನಗರಸಭಾ ಆಯುಕ್ತೆ ಎಂ.ವಿ.ತುಷಾರಮಣಿ, ಮಹಿಳೆಯರು ಸರ್‌.ಎಂ.ವಿ. ಅವರಿಗೆ ಕೃತಜ್ಞರಾಗಿರಬೇಕು. ನಿತ್ಯೋಪಯೋಗಿ ಉಪಕರಣಗಳ ಆವಿಷ್ಕಾರದಿಂದಲೇ ಮಹಿಳೆಯರಿಗೆ ಮನೆಕೆಲಸದ ಜೊತೆಗೂ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿದೆ. ಅವರ ಮಾಂತ್ರಿಕತೆ ಶಕ್ತಿ ಸಾಮರ್ಥ್ಯಗಳು ಆದರ್ಶವಾಗಬೇಕು ಎಂದರು.

ಜಿಲ್ಲಾ ಸಿವಿಲ್‌ ಇಂಜಿನಿಯರ್ ಅಸೋಸಿಯೇಷನ್‌ ಅಧ್ಯಕ್ಷ ಬಿ.ಎಸ್‌.ಹರೀಶ್‌ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಸರ್‌.ಎಂ.ವಿ. ಹೆಸರಿನಲ್ಲಿ ಯಾವುದೇ ರಸ್ತೆ, ವೃತ್ತ, ಬಡಾವಣೆಗಳಿಲ್ಲ. ಆಜಾದ್‌ ಪಾರ್ಕ್‌ನಿಂದ ಕೋಟೆಕೆರೆಯವರೆಗಿನ ರಸ್ತೆಗೆ ಅವರ ಹೆಸರಿಡಬೇಕೆಂದರು. ಸಿಡಿಎ ಆಯುಕ್ತ ಟಿ.ಆರ್‌.ಭೀಮಾನಿಧಿ ಮಾತನಾಡಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಎನ್‌.ಎಸ್‌.ನಾಗೇಂದ್ರ ಮತ್ತು ಜಿ.ರಮೇಶ್‌ ಕಾರ್ಯಕ್ರಮ ನಿರೂಪಿಸಿದರು. 

ಟಾಪ್ ನ್ಯೂಸ್

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.