ನಾವು ಜನಾಭಿಪ್ರಾಯವನ್ನು ಸ್ವಾಗತಿಸುತ್ತೇವೆ: ಸಿ.ಟಿ ರವಿ
Team Udayavani, Feb 11, 2020, 3:50 PM IST
ಚಿಕ್ಕಮಗಳೂರು: ದೆಹಲಿ ಚುನಾವಣೆ ಫಲಿತಾಂಶ ಏನೇ ಇರಲಿ ಜನಾಭಿಪ್ರಾಯವನ್ನು ಸ್ವಾಗತಿಸುತ್ತೇವೆ ಎಂದು ಸಚಿವ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಗೆದ್ದಾಗ ಮೋದಿ, ಬಿಜೆಪಿ ವಿರುದ್ಧ ತೀರ್ಪು ಎನ್ನುತ್ತಾರೆ, ಸೋತಾಗ ಇವಿಎಂ ಮೇಲೆ ಆರೋಪಿಸುವುದು ಕೆಲವರ ಕಾಯಿಲೆ ಎಂದು ಪರೋಕ್ಷವಾಗಿ ಅವರು ಕಾಂಗ್ರೆಸ್ ಗೆ ಟಾಂಗ್ ನೀಡಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಪ್ರಜಾಪ್ರಭುತ್ವಕ್ಕೆ ಅಪಮಾನಿಸುವ ಕೆಲಸ ಮಾಡಲ್ಲ, ದೀರ್ಘ ವರ್ಷಗಳ ಆಡಳಿತ ನಡೆಸಿದ ಕಾಂಗ್ರೆಸ್ ಶೂನ್ಯ ಸಂಪಾದಿಸಿದೆ. ದೊಡ್ಡ ಪರಂಪರೆಯ ಕಾಂಗ್ರೆಸ್ ದೆಹಲಿಯಲ್ಲಿ ಅವಸಾನದ ಅಂಚಿನಲ್ಲಿದೆ. ಇನ್ನಾದರೂ ಟೀಕೆಯನ್ನೇ ಉದ್ಯೋಗ ಮಾಡಿಕೊಳ್ಳುವುದನ್ನ ಕಾಂಗ್ರೆಸ್ ಬಿಡಲಿ ಎಂದರು.
ನಾವು ಸೋಲು-ಗೆಲುವು ಎರಡನ್ನೂ ಕಂಡಿದ್ದೇವೆ, ಅದು ಸ್ವಾಭಾವಿಕ ಸ್ಥಳೀಯ ನಾಯಕತ್ವ, ಸಮಸ್ಯೆ, ಸ್ಥಳೀಯ ನಾಯಕತ್ವ ಆಧಾರದ ಅರಿವಾಗಿದೆ. ನಮ್ಮದು ವಿರೋಚಿತ ಹೋರಾಟ, ಅಸಹಾಯಕತೆಯ ಶರಣಾಗತಿಯಲ್ಲ ಎಂದರು.
ಸೋಲಿಗೆ ಕಾರಣವೇನೆಂದು ಪಕ್ಷದ ವೇದಿಕೆಯಲ್ಲಿ ಚರ್ಚಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ