ಕರ್ಫ್ಯೂ ಹಿನ್ನೆಲೆ ಸ್ತಬ್ಧವಾದ ಚಿಕ್ಕಮಗಳೂರು ;ರಸ್ತೆಗಳೆಲ್ಲ ಖಾಲಿ ಖಾಲಿ
Team Udayavani, Jan 8, 2022, 3:51 PM IST
ಚಿಕ್ಕಮಗಳೂರು : ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಇಂದು ಬಹುತೇಕ ಸ್ತಬ್ಧವಾಗಿತ್ತು .
ಸದಾ ಜನ ಮತ್ತು ವಾಹನಗಳಿಂದ ಗಿಜಿಗುಡುತ್ತಿದ್ದ ಮಹಾತ್ಮಗಾಂಧಿ ರಸ್ತೆ, ಮಾರ್ಕೆಟ್ ರಸ್ತೆ, ಐಜಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಹೊಡೆಯುತ್ತಿದ್ದವು .
ರಸ್ತೆ ಸಾರಿಗೆ ಬಸ್ ಸಂಚಾರ ಇದ್ದರೂ ಪ್ರಯಾಣಿಕರಿಲ್ಲದೆ ಖಾಲಿ ಹೊಡೆಯುತ್ತಿದ್ದವು . ಕರ್ಫ್ಯೂ ಮಧ್ಯೆ ಕೆಲಸವಿಲ್ಲದೆ ಓಡಾಡುತ್ತಿದ್ದ ಹಲವರು ಪೊಲೀಸರ ಕೈಗೆ ಸಿಕ್ಕಿಬಿದ್ದು ದಂಡ ತೆರಬೇಕಾಯಿತು .
ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಲಾಗಿತ್ತು .ಎಲ್ಲೆಡೆ ಪೊಲೀಸ್ ಕಣ್ಗಾವಲು ಇರಿಸಲಾಗಿತ್ತು . 2 ನೇ ಶನಿವಾರವಾಗಿದ್ದರಿಂದ ಸಹಜವಾಗಿ ಸರ್ಕಾರಿ ಕಚೇರಿ, ಬ್ಯಾಂಕ್ ಗೆ ರಜೆ ಇತ್ತು .ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು .
ತುರ್ತು ಸೇವೆಗಳಿಗೆ ಬೆರಳೆಣಿಕೆಯಷ್ಟು ಜನ ತಿರುಗಾಡುತ್ತಿದ್ದು ಪೊಲೀಸರಿಗೆ ಸೂಕ್ತ ಸಮಜಾಯಿಸಿ ನೀಡಬೇಕಾಗಿತ್ತು. ಹಣ್ಣು ತರಕಾರಿ ಇನ್ನಿತರ ಕೆಲ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿದ್ದರೂ ಖರೀದಿಸುವವರ ಸಂಖ್ಯೆ ವಿರಳವಾಗಿತ್ತು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…