ಚಿಕ್ಕಮಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ಪ್ರತ್ಯಕ್ಷ, ಜಮೀನು, ರಸ್ತೆಗಳಲ್ಲಿ ಓಡಾಟ!
Team Udayavani, Jul 12, 2021, 9:52 AM IST
ಚಿಕ್ಕಮಗಳೂರು : ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡು ಜನರ ಆತಂಕಕ್ಕೆ ಕಾರಣವಾದ ಪ್ರಸಂಗ ಚಿಕ್ಕಮಗಳೂರು ನಗರದ ಹೊರವಲಯದಲ್ಲಿ ನಲ್ಲೂರು ಗ್ರಾಮದ ಬಳಿ ನಡೆದಿದೆ.
ಗ್ರಾಮದ ಸಮೀಪ, ಜಮೀನು, ರಸ್ತೆಗಳಲ್ಲಿ ಕಾಡಾನೆ ಬೆಳಗ್ಗೆ ಓಡಾಟ ನಡೆಸಿ ಸ್ಥಳೀಯರ ಆತಂಕಕ್ಕೆ ಕಾರಣವಾಯಿತು. ಜಮೀನಿನಲ್ಲಿ ಓಡಾಡಿ ಗುಡ್ಡದ ಕಡೆ ಹೆಜ್ಜೆ ಹಾಕಿತು.
ಇದನ್ನೂ ಓದಿ:ಉಡುಪಿ: ಮಗು ಅಪಹರಿಸಿದ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು
ಚಿಕ್ಕಮಗಳೂರು ನಗರದಲ್ಲಿ ಸಂಚಾರ ನಡೆಸಿದ ಒಂಟಿ ಸಲಗ ನಗರದ ಕಾಫಿ ಡೇ ಮುಂಭಾಗದ ಎಬಿಸಿ ಕಾಂಪೌಂಡ್ ಗೆ ಕಡೆಗೆ ಧಾವಿಸಿತು. ಸೋಮವಾರ ಬೆಳಗ್ಗೆ ಕಾಡು ಬಿಟ್ಟು ನಾಡು ವೀಕ್ಷಣೆಗೆ ಆಗಮಿಸಿದ ಗಜರಾಜ ನಲ್ಲೂರು, ಉಂಡೇದಾಸರಹಳ್ಳಿ, ಕಲ್ಲದೇವರಹಳ್ಳಿ ಸುತ್ತಮುತ್ತ ಸಂಚಾರ ನಡೆಸಿದೆ. ಸದ್ಯ ಯರೇಹಳ್ಳಿ ಗ್ರಾಮದಲ್ಲಿ ಈ ಒಂಟಿ ಸಲಗ ಬೀಡುಬಿಟ್ಟಿರುವ ಬಗ್ಗೆ ಮಾಹಿತಿ ದೊರೆತಿದೆ.
ಇದನ್ನೂ ಓದಿ:ಇಬ್ಬರು ಉಗ್ರರ ಬಂಧನ, ಭಾರೀ ಸಂಚು ವಿಫಲ: ಉ.ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ
ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ