ಮೂಡಿಗೆರೆ ತಾಲೂಕಿನಲ್ಲಿ ಆನೆಗಳ ಹಾವಳಿ : ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿರ್ಬಂಧ
Team Udayavani, Sep 11, 2022, 2:05 PM IST
ಕೊಟ್ಟಿಗೆಹಾರ : ಮಲೆನಾಡಿನ ಚಾರಣಿಗರ ನೆಚ್ಚಿನ ತಾಣ ಎತ್ತಿನ ಭುಜಕ್ಕೆ ನಿರ್ಬಂಧ ಮಲೆನಾಡಿನ ಅನೇಕ ಗ್ರಾಮಗಳಲ್ಲಿ ನಿರಂತರ ಆನೆ ದಾಳಿ ನಡೆಯುತ್ತಿದೆ.
ಅಲ್ಲಿಯ ಜನರು ಆತಂಕಗೊಂಡಿದ್ದಾರೆ. ಮೂಡಿಗೆರೆ ತಾಲೂಕಿನ ಎತ್ತಿನಭುಜ ವ್ಯಾಪ್ತಿಯಲ್ಲಿ ಆನೆಗಳು ಕಾಣಿಸಿಕೊಂಡಿರುವ ಹಿನ್ನಲೆ ಪ್ರಸಿದ್ಧ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಕರ್ನಾಟಕ ಅರಣ್ಯ ಇಲಾಖೆಯ ಚಿಕ್ಕಮಗಳೂರು ಪ್ರಾದೇಶಿಕ ವಿಭಾಗ ಎತ್ತಿನ ಭುಜ ಚಾರಣ ವನ್ನು ತಾತ್ಕಾಲಿಕ ನಿಷೇಧಿಸಿದೆ.
ಮೂಡಿಗೆರೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಎರಡು ದಿನ ಹಿಂದೆ ಒರ್ವ ಕೂಲಿ ಕಾರ್ಮಿಕನನ್ನು ಕಾಲಿನಿಂದ ತುಳಿದು ಸ್ಥಳದಲ್ಲಿಯೇ ಕೊಂದು ಹಾಕಿರುವ ಘಟನೆ ನಡೆದಿದೆ.
ಈ ಘಟನಾ ಸಂಭಂದ ವ್ಯಾಪಕವಾದ ವಿರೋಧ ಸ್ಥಳೀಯರಿಂದ ವ್ಯಕ್ತವಾಗಿತ್ತು. ಹಾಗೂ ಸ್ಥಳೀಯರು ಮತ್ತು ಸಾರ್ವಜನಿಕರಿಂದ ಮೃತ ದೇಹವನ್ನು ಮೂಡಿಗೆರೆ ಅರಣ್ಯ ಇಲಾಖೆ ಎದುರುಗಡೆ ಇಟ್ಟು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆ ತೀವ್ರಗೊಂಡ ಹಿನ್ನಲೆ, ಆನೆಯನ್ನು ಹಿಡಿಯುವ ಭರವಸೆ ಅರಣ್ಯ ಇಲಾಖೆಯಿಂದ ಸಿಕ್ಕಿದಂತಾಗಿದೆ. ಆನೆಗಳು ಈ ಭಾಗದಲ್ಲಿ ಓಡಾಡುತ್ತಲೇ ಇರುವುದರಿಂದ ಯಾವುದೇ ರೀತಿಯ ದುರ್ಘಟನೆ ಸಂಭವಿಸದೆ ಇರಲಿ ಎಂದು ಮುನ್ನೆಚ್ಚರಿಕ ಕ್ರಮವಾಗಿ ಎತ್ತಿನಭುಜ ಚಾರಣಕ್ಕೆ ನಿಷೇಧ ಹೇರಲಾಗಿದೆ.
ಕಾಡಾನೆಗಳು ಈ ಭಾಗದಲ್ಲಿ ತಿರುಗಾಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಾಗೂ ಸ್ಥಳೀಯರ ಒತ್ತಾಯದ ಮೇರೆಗೆ ಅಂತೆಯೇ ಮೇಲಧಿಕಾರಿಗಳ ನಿರ್ದೇಶನದಂತೆ ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ-
– ಮೋಹನ್ ಕುಮಾರ್, ಮೂಡಿಗೆರೆ ವಲಯ ಅರಣ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ