ಚಿಕ್ಕಮಗಳೂರು: ಚಿಲ್ಲರೆ ಹಣಕ್ಕಾಗಿ ಬಾರ್ ಕ್ಯಾಶಿಯರ್ ಕೊಲೆ !
Team Udayavani, Apr 4, 2022, 3:45 PM IST
ಚಿಕ್ಕಮಗಳೂರು: ಚಿಲ್ಲರೆ ಹಣಕ್ಕಾಗಿ ನಡೆದ ಗಲಾಟೆ ಬಾರ್ ಕ್ಯಾಶಿಯರ್ ನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.
ಬಾರ್ ಕ್ಯಾಶಿಯರ್ ಯಶ್ಪಾಲ್ (28 ವ) ಮೃತ ದುರ್ದೈವಿ. ಪ್ರವಾಸಕ್ಕೆಂದು ಬಂದಿದ್ದ ಯುವಕರ ಜೊತೆಗಿನ ಗಲಾಟೆಯಲ್ಲಿ ಎದೆಗೆ ಪೆಟ್ಟುಬಿದ್ದು ಯಶ್ ಪಾಲ್ ಸಾವನ್ನಪ್ಪಿದ್ದಾರೆ.
ಪ್ರವಾಸಿತಾಣ ಅಯ್ಯನಕೆರೆಗೆ ಹೋಗಿ ಬಂದ ಆರು ಜನ ಯುವಕರ ತಂಡ ಬಿಯರ್ ಖರೀದಿಗೆ ಬಂದಿತ್ತು. ಈ ವೇಳೆ ಚಿಲ್ಲರೆ ಹಣಕ್ಕಾಗಿ ಯಶ್ಪಾಲ್ ಜೊತೆ ಯುವಕರ ತಂಡ ಕಿರಿಕ್ ಮಾಡಿಕೊಂಡಿದೆ. ವೈನ್ಸ್ ಮುಂದೆ ರಸ್ತೆಗೆ ಬೈಕ್ ಅಡ್ಡಲಾಗಿ ನಿಲ್ಲಿಸಿದ ಯುವಕರು ಗಲಾಟೆ ಮಾಡಿದ್ದಾರೆ.
ಇದನ್ನೂ ಓದಿ:ಕಾಪು: ಐದು ತಲೆಮಾರುಗಳಿಂದ ನಾಗಸ್ವರ ನುಡಿಸಿಕೊಂಡು ಬರುತ್ತಿದೆ ಮುಸ್ಲಿಂ ಮನೆತನ
ಇದನ್ನು ಪ್ರಶ್ನಿಸಿದ ಯಶ್ಪಾಲ್ ಎದೆಗೆ ಯುವಕರ ಗುಂಪಿನ ಓರ್ವ ಯುವಕ ಬಲವಾಗಿ ಹೊಡೆದಿದ್ದಾರೆ. ಚಿಕಿತ್ಸೆಗಾಗಿ ಯಶ್ಪಾಲ್ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ತೆರಳುವಾಗ ಮಾರ್ಗ ಮಧ್ಯೆ ಯಶ್ ಪಾಲ್ ಸಾವನ್ನಪ್ಪಿದ್ದಾರೆ.
ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು