ಅಮೃತ್‌ ಯೋಜನೆಗೆ ಅನುದಾನ ಒದಗಿಸಿ

ನೀರು ಸಂಗ್ರಹಣೆಗೆ ಮೂರು ವಿವಿಧ ಅಳತೆಯ ಟ್ಯಾಂಕ್‌ಗಳನ್ನು ನಿರ್ಮಿಸಲು ಆಗ್ರಹ

Team Udayavani, May 2, 2019, 3:07 PM IST

2-MAY-23

ಚಿಕ್ಕಮಗಳೂರು: ನಗರದಲ್ಲಿ ನಡೆಯುತ್ತಿರುವ ಅಮೃತ್‌ ಯೋಜನೆ ಕಾಮಗಾರಿ.

ಚಿಕ್ಕಮಗಳೂರು: ನಗರಕ್ಕೆ ದಿನದ 24 ಗಂಟೆ ನೀರು ನೀಡುವ ಅಮೃತ್‌ ಯೋಜನೆಗೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ನಗರಸಭೆಯಿಂದ ಸರಿಯಾಗಿ ಹಣ ಬಿಡುಗಡೆಯಾಗದೆ ಗುತ್ತಿಗೆದಾರನ ಬಿಲ್ ಪಾವತಿಸಲು ತೊಡಕಾಗಿದೆ.

ಅಮೃತ್‌ ಯೋಜನೆಯ ಒಟ್ಟು ವೆಚ್ಚ 102.57 ಕೋಟಿ ರೂ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.50 ರಷ್ಟು ಅಂದರೆ 51 ಕೋಟಿ ಹಣ ಅಲ್ಲಿಂದ ಬರಬೇಕು. ಆದರೆ ಈ ವರೆಗೂ ಬಂದಿರುವುದು 19.44 ಕೋಟಿ ರೂ. ಮಾತ್ರ.

ರಾಜ್ಯ ಸರ್ಕಾರ ಈ ವೆಚ್ಚದ ಶೇ. 20 ಹಣ ಭರಿಸಬೇಕಾಗಿದೆ. ಒಟ್ಟು 20.51 ಕೋಟಿ ರೂ. ರಾಜ್ಯ ಸರ್ಕಾರದಿಂದ ಬರಬೇಕಿದ್ದು, ಅದರಲ್ಲಿ ಈವರೆಗೆ 6.07 ಕೋಟಿ ರೂ. ಬಂದಿದೆ. ನಗರಸಭೆ ಭರಿಸಬೇಕಾದ ಮೊತ್ತ 30.77 ಕೋಟಿ ರೂ. ಆದರೆ ಈವರೆಗೂ ನಗರಸಭೆ ನೀಡಿರುವುದು 2.91 ಕೋಟಿ ರೂ. ಮಾತ್ರ.

ಗುತ್ತಿಗೆದಾರರು ನಿರ್ವಹಿಸಿರುವ ಕೆಲಸಕ್ಕೆ ಒಟ್ಟು 41 ಕೋಟಿ ರೂ. ವೆಚ್ಚವಾಗಿದೆ. ಇನ್ನೂ ಸಹ ಗುತ್ತಿಗೆದಾರರಿಗೆ 4 ಕೋಟಿ ರೂ. ಬಾಕಿ ನೀಡಬೇಕಾಗಿದೆ. ಆದರೆ ಕಾಮಗಾರಿ ಶೇ. 50ರಷ್ಟು ಪೂರ್ಣಗೊಂಡಿದೆ. ಹಣದ ಹರಿವು ಮಾತ್ರ ಕುಂಟುತ್ತಾ ಬರುತ್ತಿದೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ, ಯಗಚಿ ನದಿಯಲ್ಲಿ ನಿರ್ಮಿಸಿರುವ ಜಾಕ್‌ವೆಲ್ನಿಂದ ಮುಗುಳವಳ್ಳಿಯಲ್ಲಿರುವ ಮಧ್ಯಂತರ ಪಂಪಿಂಗ್‌ ಘಟಕಕ್ಕೆ 12.25 ಕಿ.ಮೀ. ಅಂತರವಿದೆ. ಈಗಾಗಲೇ ಎಂ.ಎಸ್‌.ಪೈಪ್‌ಲೈನ್‌ಗಳನ್ನು 11 ಕಿ.ಮೀ.ನಲ್ಲಿ ಅಳವಡಿಸಲಾಗಿದೆ. ಇನ್ನುಳಿದಿರುವುದು 1.25 ಕಿ.ಮೀ.ಮಾತ್ರ.

ಮಧ್ಯಂತರ ಪಂಪಿಂಗ್‌ ಘಟಕದಿಂದ ಗೃಹಮಂಡಳಿ ಬಡಾವಣೆಯಲ್ಲಿರುವ ನೀರು ಶುದ್ಧೀಕರಣ ಘಟಕಕ್ಕೆ ಇರುವ ದೂರ 3.6 ಕಿ.ಮೀ.ಈವರೆಗೂ ಎಂ.ಎಸ್‌.ಪೈಪ್‌ಲೈನ್‌ ಅನ್ನು 3.4 ಕಿ.ಮೀ.ನಲ್ಲಿ ಅಳವಡಿಸಲಾಗಿದ್ದು, ಈ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ. ಒಟ್ಟು 312 ಕಿ.ಮೀ. ದೂರ ಎಚ್‌ಡಿಪಿಇ ಪೈಪ್‌ಗ್ಳನ್ನು ಅಳವಡಿಸಿ ಮನೆ ಮನೆಗೆ ಸಂಪರ್ಕ ನೀಡಬೇಕು. ಈವರೆಗೆ 174 ಕಿ.ಮೀ. ಪೈಪ್‌ ಅಳವಡಿಸಲಾಗಿದೆ. ಒಟ್ಟು ನಗರದಲ್ಲಿ 30,300 ಸಂಪರ್ಕಗಳನ್ನು ನೀಡಬೇಕಾಗಿದೆ. ಇದರಲ್ಲಿ ಈವರೆಗೆ 4852 ಸಂಪರ್ಕ ಕಲ್ಪಿಸಲಾಗಿದ್ದು, ಕೆಲವು ಕಡೆ ರಸ್ತೆ ಅಗೆದು ಸಂಪರ್ಕ ನೀಡಬೇಕಾಗಿರುವುದರಿಂದ ಈ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.

ನೀರು ಸಂಗ್ರಹಣೆಗೆ ಮೂರು ವಿವಿಧ ಅಳತೆಯ ಟ್ಯಾಂಕ್‌ಗಳನ್ನು ನಿರ್ಮಿಸಬೇಕಾಗಿದೆ. 60 ಲಕ್ಷ ಲೀಟರ್‌ನ ಒಂದು ಟ್ಯಾಂಕ್‌ ಅನ್ನು ಗೃಹಮಂಡಳಿ ಬಡಾವಣೆಯಲ್ಲಿ ನಿರ್ಮಿಸುತ್ತಿದ್ದು, ಕಾಮಗಾರಿ ಆರಂಭವಾಗಿ ಮುಚ್ಚಿಗೆ ನಿರ್ಮಿಸಿದಲ್ಲಿ ಪೂರ್ಣಗೊಳ್ಳಲಿವೆ. ರತ್ನಗಿರಿ ಬೋರೆಯಲ್ಲಿ 5 ಲಕ್ಷ ಲೀಟರ್‌ ಸಾಮರ್ಥ್ಯದ ಟ್ಯಾಂಕ್‌ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. 12 ಲಕ್ಷ ಲೀಟರ್‌ ಟ್ಯಾಂಕ್‌ ಅನ್ನು ಜಿಲ್ಲಾ ಕಾರಾಗೃಹದ ಆವರಣದಲ್ಲಿ ನಿರ್ಮಿಸಲಾಗುತ್ತಿದ್ದು, ಅದರ ಮೇಲ್ಚಾವಣಿ ನಿರ್ಮಾಣ ಬಾಕಿ ಉಳಿದಿದೆ.

ದಿನದ 24 ಗಂಟೆ ನೀರು ನೀಡಬೇಕಾಗಿರುವುದರಿಂದ ಹೆಚ್ಚಿನ ಸಾಮರ್ಥ್ಯದ ಪಂಪಿಂಗ್‌ ಯಂತ್ರಗಳನ್ನು ಅಳವಡಿಸಬೇಕಾಗಿದ್ದು, ಈ ಯಂತ್ರಗಳು ಸರಬರಾಜಾಗಿವೆ. ಅವುಗಳನ್ನು ಜೋಡಿಸುವ ಕೆಲಸ ಬಾಕಿ ಉಳಿದಿವೆ. ಈ ಯೋಜನೆಯನ್ನು 2020ರ ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕಾಗಿದ್ದು, ಕಾಮಗಾರಿ ಇದೇ ರೀತಿ ತ್ವರಿತವಾಗಿ ನಡೆದಲ್ಲಿ ಅದಕ್ಕಿಂತ ಮುಂಚಿತವಾಗಿಯೇ ಪೂರ್ಣಗೊಳಿಸುವ ನಿರೀಕ್ಷೆ ಇದೆ. ಅಥವಾ ಇನ್ನೊಂದು ತಿಂಗಳು ಮುಂದಕ್ಕೆ ಹೋಗಬಹುದು ಎಂದು ಮೂಲಗಳು ಹೇಳುತ್ತಿವೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.