ಸಂಸ್ಕಾರ ದೊರೆತರೆ ಎಲ್ಲರೂ ಯೋಗ್ಯರೇ

ಭಗವಂತನ ಚಿಂತನೆಯಲ್ಲಿ ನಡೆದಾಗ ಬದುಕಿನಲ್ಲಿ ಶ್ರೇಯಸ್ಸು ಕಾಣಲು ಸಾಧ್ಯ: ರಂಭಾಪುರಿ ಶ್ರೀ

Team Udayavani, Jul 15, 2019, 1:35 PM IST

15-July-27

ಚಿಕ್ಕಮಗಳೂರು: ಸಮುದಾಯ ಭವನದಲ್ಲಿ ನಡೆದ ಶ್ರೀದೇವಿ ಗುರುಕುಲದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು.

ಚಿಕ್ಕಮಗಳೂರು: ಉನ್ನತ ಗುರಿ ಮತ್ತು ಧ್ಯೇಯ ವ್ಯಕ್ತಿತ್ವ ವಿಕಾಸಕ್ಕೆ ದಾರಿ ದೀಪ. ಹುಟ್ಟಿನಿಂದ ಯಾರೂ ಅಯೋಗ್ಯರಲ್ಲ. ಸೂಕ್ತ ಸಂಸ್ಕಾರ ದೊರೆತರೆ ಎಲ್ಲರೂ ಯೋಗ್ಯರಾಗಬಲ್ಲರು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ| ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಜಗದ್ಗುರು ರೇಣುಕಾಚಾರ್ಯ ಸಮುದಾಯ ಭವನದಲ್ಲಿ ಜರುಗಿದ ಶ್ರೀ ದೇವಿ ಗುರುಕುಲದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ಮನುಷ್ಯ ಜೀವನದಲ್ಲಿ ಕಲಿಕೆ, ಗಳಿಕೆ ಮತ್ತು ಭಗವಂತನ ಚಿಂತನೆಯಲ್ಲಿ ನಡೆದಾಗ ಬದುಕಿನಲ್ಲಿ ಶ್ರೇಯಸ್ಸನ್ನು ಕಾಣಲು ಸಾಧ್ಯ. ಜಗದ ಒಳಿತಿಗೆ ಹಿಂದಿನ ಇತಿಹಾಸದ ಅರಿವು ಮುಖ್ಯ. ಬೆಳೆಯುತ್ತಿರುವ ಯುವ ಜನಾಂಗದಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿಯ ಅರಿವು ಮೂಡಿಸುವ ಅವಶ್ಯಕತೆಯಿದೆ. ಧರ್ಮಾಚರಣೆ ಮರೆತರೆ ಅಪಾಯ ತಪ್ಪಿದ್ದಲ್ಲ. ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಮನುಷ್ಯನಲ್ಲಿ ಸದ್ಭಾವನೆಗಳು ಬೆಳೆದು ಬರಬೇಕಾಗಿದೆ. ಈ ದಿಶೆಯಲ್ಲಿ ಶ್ರೀ ದೇವಿ ಗುರುಕುಲ ಅತ್ಯುತ್ತಮ ಕಾರ್ಯ ಕೈಗೊಂಡು ಜನ ಸಮುದಾಯದಲ್ಲಿ ಧಾರ್ಮಿಕ ಪ್ರಜ್ಞೆ ಮತ್ತು ಅಧ್ಯಾತ್ಮದ ಮೌಲ್ಯಗಳನ್ನು ಸಂರಕ್ಷಿಸಿಕೊಂಡು ಬರುತ್ತಿದೆ. ವಿದ್ವಾನ್‌ ಡಾ.ಜಿ.ದಯಾನಂದ ಮೂರ್ತಿ ಅವರು ಗುರುಕುಲ ಸಂಸ್ಥಾಪಕರಾಗಿ ಉತ್ತಮ ಕಾರ್ಯ ಮಾಡುತ್ತಿರುವುದು ಸಂತಸ ತಂದಿದೆ ಎಂದರು.

ಗೌರಮ್ಮ ಬಸವೇಗೌಡ ಮಾತನಾಡಿ, ಅರಿವಿನ ಆಚಾರ ಬದುಕಿನ ಉನ್ನತಿಗೆ ಸೋಪಾನ. ಶುದ್ಧ ಬುದ್ಧಿ ಸಂಪತ್ತಿನ ಆಗರ. ಸ್ವಾರ್ಥ ರಹಿತ ಬದುಕಿಗೆ ಬೆಲೆ ಬಲವಿದೆ. ಶ್ರೀ ದೇವಿ ಗುರುಕುಲ ಭಾರತೀಯರ ಉತ್ಕೃಷ್ಟ ಸಂಸ್ಕೃತಿಯನ್ನು ಬೆಳೆಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಹುಲಿಕೆರೆ ದೊಡ್ಡಮಠದ ವಿರೂಪಾಕ್ಷ ಶಿವಾಚಾರ್ಯರು, ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯರು, ಶಂಕರ ದೇವರ ಮಠದ ಚಂದ್ರಶೇಖರ ಶಿವಾಚಾರ್ಯರು, ನುಗ್ಗೇಹಳ್ಳಿ ಡಾ. ಮಹೇಶ್ವರ ಶಿವಾಚಾರ್ಯರು, ಬೇರುಗಂಡಿ ರೇಣುಕ ಮಹಾಂತ ಶಿವಾಚಾರ್ಯರು ಪಾಲ್ಗೊಂಡಿದ್ದರು. ತಾವರೆಕೆರೆ ಶಿಲಾಮಠದ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯರು ವೇದ ಮಂತ್ರಗಳ ವೈಶಿಷ್ಠ ್ಯತೆ ಬಗ್ಗೆ ಉಪನ್ಯಾಸ ನೀಡಿದರು.

ಜಿಲ್ಲಾ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಮಹೇಶ್ವರಗೌಡ, ತಾ.ವೀರಶೈವ ಸಮಾಜದ ಅಧ್ಯಕ್ಷ ದಿವಾಕರ, ಪಂಚಾಕ್ಷರಯ್ಯ, ಕಲ್ಲೇಗೌಡ, ಕ.ರಾ.ಅರ್ಚಕರ ಸಂಘದ ಅಧ್ಯಕ್ಷ ಎಚ್.ವಿ. ನಾಗರಾಜ ಶಾಸ್ತ್ರಿ, ಕೆ.ಆರ್‌.ಷಡಕ್ಷರಿ ಶಾಸ್ತ್ರಿ, ಹೊನ್ನಪ್ಪ ಶಾಸ್ತ್ರಿ ಇದ್ದರು. ವೇದ ಮತ್ತು ಜ್ಯೋತಿಷ್ಯದಲ್ಲಿ ಉತ್ತಮ ಸಾಧನೆಗೈದ ಸುಮಾರು 19 ಜನ ಪಂಡಿತರಿಗೆ ‘ಪುರೋಹಿತ ಕೇಸರಿ’ ಮತ್ತು ‘ಜ್ಯೋತಿಷ್ಯ ಕೇಸರಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಲವಾರು ಗಣ್ಯರು ಮತ್ತು ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರು ರಕ್ಷೆ ನೀಡಿ ಆಶೀರ್ವದಿಸಿದರು. ಪ್ರಾಸ್ತಾವಿಕ ನುಡಿ ಸೇವೆಯನ್ನು ಡಾ. ಜಿ. ದಯಾನಂದ ಮೂರ್ತಿ ಶಾಸ್ತ್ರಿಗಳು ಸಲ್ಲಿಸಿದರು. ದೇವಿ ಗುರುಕುಲ ಮಹಾಪೋಷಕ ಪ್ರಭುಲಿಂಗ ಶಾಸ್ತ್ರಿಗಳು ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಶಿವಶಂಕರ ಶಾಸ್ತ್ರಿಯವರಿಂದ ಸಂಗೀತ ಸೇವೆ ನಡೆಯಿತು. ನಂದಿನಿ ಸ್ವಾಗತಿಸಿದರು. ಭಾಗ್ಯಮ್ಮ ನಿರೂಪಿಸಿದರು. ಸುಧಾ ವರದಿ ವಾಚಿಸಿದರು. ಸುಮಿತ್ರಾ ಶಾಸ್ತ್ರಿ ವಂದಿಸಿದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.