ನಾಳೆ 54ನೇ ರಾಜ್ಯಮಟ್ಟದ ಗುಡ್ಡಗಾಡು ಓಟ ಸ್ಪರ್ಧೆ

ಅಥ್ಲೆಟಿಕ್ಸ್‌ ಸಂಸ್ಥೆ ರಾಜ್ಯ ಹಿರಿಯ ಉಪಾಧ್ಯಕ್ಷ ಅಜಯ್‌ಕುಮಾರ್‌ ಮಾಹಿತಿ

Team Udayavani, Nov 30, 2019, 4:06 PM IST

Udayavani Kannada Newspaper

ಚಿಕ್ಕಮಗಳೂರು: ಜಿಲ್ಲಾ ಅಥ್ಲೆಟಿಕ್ಸ್‌ ಸಂಸ್ಥೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಡಿ.1ರಂದು 54ನೇ ರಾಜ್ಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ರಾಜ್ಯ ಹಿರಿಯ ಉಪಾಧ್ಯಕ್ಷ ಅಜಯ್‌ ಕುಮಾರ್‌ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರುಷ, ಮಹಿಳೆ, ಬಾಲಕ, ಬಾಲಕಿಯರು ಸೇರಿ ಒಟ್ಟು 8 ವಿಭಾಗಗಳಿಂದ ತಲಾ 6 ಜನರಂತೆ
48 ಮಂದಿ ಸ್ಪರ್ಧಿಗಳು ಪ್ರತಿ ಜಿಲ್ಲೆಯಿಂದ ಆಗಮಿಸಲಿದ್ದಾರೆ. 14 ವರ್ಷದೊಳಗಿನವರಿಗೆ ಅವಕಾಶವಿಲ್ಲ. ಎಂಇಜಿ, ಪೊಲೀಸ್‌ ತಂಡ, ರೈಲ್ವೆ ಮತ್ತಿತರೆ ತಂಡಗಳು ಭಾಗವಹಿಸಲಿವೆ ಎಂದರು.

ರಾಜ್ಯ ಮಟ್ಟದ ಗುಡ್ಡಗಾಡು ಸ್ಪರ್ಧೆಯ ಪುರುಷ ಮತ್ತು ಮಹಿಳೆಯರ ತಂಡ ಡಿ.1 ರಂದು ಬೆ. 6.45 ಕ್ಕೆ ಮಳಲೂರಮ್ಮ ದೇವಸ್ಥಾನದಿಂದ ಹೊರಟು 10 ಕಿ.ಮೀ. ಕ್ರಮಿಸಿ ಸುಭಾಷ್‌ಚಂದ್ರ ಬೋಸ್‌ ಆಟದ ಮೈದಾನ ತಲುಪಲಿದೆ. 20 ವರ್ಷದ ಬಾಲಕರ ತಂಡ ಬೆ.7.30ಕ್ಕೆ ಸಿರಾಗಪುರ ಶಾಲೆಯಿಂದ ಹೊರಟು 8 ಕಿ.ಮೀ. ಕ್ರಮಿಸಿ ಆಟದ ಮೈದಾನ ಸೇರಲಿದೆ. ಬಾಲಕಿಯರ ತಂಡ ಬೆ.8ಕ್ಕೆ ಬೆಟ್ಟದ ಆಂಜನೇಯ ದೇವಸ್ಥಾನದಿಂದ ಹೊರಟು 6 ಕಿ.ಮೀ. ಸಾಗಿ ಆಟದ ಮೈದಾನ ತಲುಪಲಿದೆ ಎಂದು ತಿಳಿಸಿದರು.

18 ವರ್ಷ ವಯೋಮಾನದ ಬಾಲಕರ ತಂಡ ಬೆಳಗ್ಗೆ 8ಕ್ಕೆ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದಿಂದ, ಬಾಲಕಿಯರ ತಂಡ ಸ್ವರ್ಣಭೂಮಿ ಸಿಲ್ವರ್‌ ಪ್ಲಾಂಟೇಶನ್‌ನಿಂದ ಬೆ.6.45 ಕ್ಕೆ ಹೊರಟು ಗುರಿ ತಲುಪಲಿವೆ. 16ರ ವಯೋಮಾನದ ಬಾಲಕರ ತಂಡ ಬೆ.8 ಕ್ಕೆ ಮತ್ತು ಬಾಲಕಿಯರ ತಂಡ 7.30 ಕ್ಕೆ ಕೋಟೆಯ ಎಂ.ಎಲ್‌. ಮೂರ್ತಿ ಮನೆ ಆವರಣದಿಂದ 2 ಕಿ.ಮೀ. ಕ್ರಮಿಸಿ ಜಿಲ್ಲಾ ಆಟದ ಮೈದಾನ ತಲುಪಲಿದೆ ಎಂದರು.

ಗುಡ್ಡಗಾಡು ಓಟಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಿಲ್ಲೆಯ 14 ವಯೋಮಿತಿಯ ಬಾಲಕರ ತಂಡ ಬೆ.8.45ಕ್ಕೆ ಹಾಗೂ ಬಾಲಕಿಯರ ತಂಡಗಳಿಗೆ ಬೆ.9 ಕ್ಕೆ ನಗರದ ಹನುಮಂತಪ್ಪ ವೃತ್ತದಿಂದ ಜಿಲ್ಲಾ ಆಟದ ಮೈದಾನದವರೆಗೆ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.

ರಾಜ್ಯ ಮಟ್ಟದ ಪುರುಷ ಮತ್ತು ಮಹಿಳಾ ವಿಭಾಗದ ವಿಜೇತರಿಗೆ ಪ್ರಥಮ 5 ಸಾವಿರ ರೂ., ದ್ವಿತೀಯ 3 ಸಾವಿರ, ತೃತೀಯ 2ಸಾವಿರ, 4, 5 ಮತ್ತು 6 ನೇ ಬಹುಮಾನವಾಗಿ ತಲಾ 1 ಸಾವಿರ ರೂ. ನೀಡಲಾಗುವುದು. 20 ವರ್ಷದ ಬಾಲಕ, ಬಾಲಕಿಯರ ವಿಭಾಗದಲ್ಲಿ ಪ್ರಥಮ 5 ಸಾವಿರ ರೂ., ದ್ವಿತೀಯ 3 ಸಾವಿರ, ತೃತೀಯ 2 ಸಾವಿರ, 4, 5, 6 ನೇ ಬಹುಮಾನವಾಗಿ ತಲಾ 1 ಸಾವಿರ ರೂ. ನೀಡಲಾಗುವುದು. 18 ವರ್ಷದ ಬಾಲಕ, ಬಾಲಕಿಯರ ವಿಭಾಗದಲ್ಲಿ ಪ್ರಥಮ 4 ಸಾವಿರ ರೂ., ದ್ವಿತೀಯ 3 ಸಾವಿರ, ತೃತೀಯ 2 ಸಾವಿರ, 4ನೇ ಬಹುಮಾನವಾಗಿ 1 ಸಾವಿರ, 16 ವರ್ಷ ವಯೋಮಾನದ ಬಾಲಕ, ಬಾಲಕಿಯರ ವಿಭಾಗದಲ್ಲಿ ಪ್ರಥಮ 4 ಸಾವಿರ, ದ್ವಿತೀಯ 3ಸಾವಿರ, ತೃತೀಯ 2 ಸಾವಿರ ಹಾಗೂ 4 ನೇ ಬಹುಮಾನವಾಗಿ 1 ಸಾವಿರ ರೂ. ನೀಡಲಾಗುವುದು. ಜಿಲ್ಲಾ ಮಟ್ಟದ 14 ವರ್ಷದ ಬಾಲಕ, ಬಾಲಕಿಯರ ಸ್ಪರ್ಧೆಯಲ್ಲಿ ಪ್ರಥಮ 3 ಸಾವಿರ, ದ್ವಿತೀಯ 2 ಸಾವಿರ, ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ವಿವರಿಸಿದರು.

ಈಗಾಗಲೇ ಆನ್‌ ಲೈನ್‌ನಲ್ಲಿ ನೋಂದಣಿ ನಡೆಯುತ್ತಿದೆ. ಜಿಲ್ಲೆಯವರಿಗೆ 30 ರವರೆಗೆ ಅವಕಾಶವಿದೆ. ಬಹುಮಾನ ನೀಡಲು ಜಿಆರ್‌ಬಿ ಮತ್ತು ಸಿರಿ ಕೆಫೆ ಉದ್ದಿಮೆಗಳು ಹಣಕಾಸಿನ ನೆರವು ನೀಡಿವೆ ಎಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಅಥ್ಲೆಟಿಕ್ಸ್‌ ಸಂಸ್ಥೆ ಅಧ್ಯಕ್ಷ ಉದಯ್‌ ಪೈ, ಕಾರ್ಯದರ್ಶಿ ಮಂಜುನಾಥ್‌, ಉಪಾಧ್ಯಕ್ಷರಾದ ಯಶೋಧಾ, ಲಕ್ಷ¾ಣಕುಮಾರ, ತರಬೇತುದಾರ ಫ್ರಾನ್ಸಿಸ್‌ ಹಾಜರಿದ್ದರು.

ಈಗಾಗಲೇ ಆನ್‌ ಲೈನ್‌ನಲ್ಲಿ ನೋಂದಣಿ ನಡೆಯುತ್ತಿದೆ. ಜಿಲ್ಲೆಯ ವರಿಗೆ 30 ರವರೆಗೆ ಅವಕಾಶವಿದೆ. ಬಹುಮಾನ ನೀಡಲು ಜಿಆರ್‌ಬಿ ಮತ್ತು ಸಿರಿ ಕೆಫೆ ಉದ್ದಿಮೆಗಳು ಹಣಕಾಸಿನ ನೆರವು ನೀಡಿವೆ.
ಅಜಯ್‌ಕುಮಾರ್‌

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.