ವಾಹನಗಳ ಎಫ್‌ಸಿ ದಂಡ ಶುಲ್ಕ ಕಡಿತ

ಲಘು ವಾಹನ- ಬೈಕ್‌ ಎರಡಕ್ಕೂ ಕೇವಲ 100 ರೂ. ದಂಡ: ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರಪ್ಪ ಶಿರೋಡ್ಕರ್‌

Team Udayavani, Sep 12, 2019, 3:39 PM IST

12-Sepctember-11

ಚಿಕ್ಕಮಗಳೂರು: ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ.

ಚಿಕ್ಕಮಗಳೂರು: ವಾಹನಗಳ ಎಫ್‌ಸಿ (ಅರ್ಹತಾ ಪ್ರಮಾಣಪತ್ರ)ಅವಧಿ ಪೂರ್ಣಗೊಂಡ ನಂತರ ಅದನ್ನು ನವೀಕರಿಸಲು ಹಿಂದೆ ಇದ್ದ ದಂಡ ಶುಲ್ಕವನ್ನು ಈಗ ಕಡಿತಗೊಳಿಸಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರಪ್ಪ ಶಿರೋಡ್ಕರ್‌ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ವಾಹನವೊಂದನ್ನು ಖರೀದಿಸಿದರೆ 15 ವರ್ಷಗಳ ಚಾಲನಾ ಅರ್ಹತೆಯನ್ನು ಅದು ಹೊಂದಿರುತ್ತದೆ. ಆ ನಂತರ ಮತ್ತೆ ನವೀಕರಿಸಲು ಮಾಲಿಕ ವಿಫಲವಾದಲ್ಲಿ ನವೀಕರಿಸುವವರೆಗೂ ಪ್ರತಿ ತಿಂಗಳು ಲಘು ವಾಹನವಾದರೆ 500 ರೂ. ಹಾಗೂ ದ್ವಿಚಕ್ರ ವಾಹನವಾದರೆ ತಿಂಗಳಿಗೆ 300 ರೂ.ನಂತೆ ಹಿಂದೆ ದಂಡ ವಿಧಿಸಲಾಗುತ್ತಿತ್ತು. ಈಗ ಆ ರೀತಿ ದಂಡ ವಿಧಿಸುವುದನ್ನು ರದ್ದು ಮಾಡಿ, ನವೀಕರಿಸಲು ಕೇವಲ 100 ರೂ. ದಂಡ ಮಾತ್ರ ವಿಧಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಆನ್‌ಲೈನ್‌ ಮೂಲಕ ಅರ್ಜಿ ಹಾಗೂ ದಾಖಲೆಗಳನ್ನು ಸಲ್ಲಿಸಿ ಆ ನಂತರ ಒಮ್ಮೆ ವಾಹನ ತಂದರೆ ಪರಿಶೀಲಿಸಿ ವಾಹನ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇದರಿಂದ ವಾಹನ ಖರೀದಿಸಿದವರಿಗೆ ಹಾಗೂ ಕಚೇರಿ ಸಿಬ್ಬಂದಿಗೂ ಸಮಯ ವ್ಯಯವಾಗುವುದಿಲ್ಲ. ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದೆಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ವಾಹನಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿವೆ. ಆದರೆ, ತಪಾಸಣೆಯಿಂದ ಹಿಡಿದು ಕಚೇರಿ ಕೆಲಸದವರೆಗೂ ತ್ವರಿತವಾಗಿ ಕಾರ್ಯ ನಿರ್ವಹಿಸಲು ಸಿಬ್ಬಂದಿ ಕೊರತೆ ತೀವ್ರವಾಗಿದೆ. ಕಚೇರಿಯಲ್ಲಿ 7 ಮಂದಿ ವಾಹನ ಪರಿವೀಕ್ಷಕರು ಇರಬೇಕು. ಆದರೆ, ಖಾಯಂ ಆಗಿ ಈ ಕಚೇರಿಯಲ್ಲಿ ಒಬ್ಬರೂ ಇಲ್ಲ. ಎರವಲು ಸೇವೆ ಮೇಲೆ ಪಕ್ಕದ ಜಿಲ್ಲೆಗಳಿಂದ ಬಂದು ವಾರದಲ್ಲಿ ಎರಡು ಅಥವಾ ಮೂರು ದಿನ ಕಾರ್ಯ ನಿರ್ವಹಿಸಿ ತೆರಳುತ್ತಿದ್ದಾರೆ ಎಂದರು.

ಜಿಲ್ಲೆಗೆ ವರ್ಗಾಯಿಸಿದ್ದ ವಾಹನ ನಿರೀಕ್ಷಕರನ್ನು ಬೇರೆ ಜಿಲ್ಲೆಗೆ ನಿಯೋಜಿಸಲಾಗಿದೆ. ತರೀಕೆರೆ ಮತ್ತು ಕಡೂರು ತಾಲೂಕುಗಳ ಜನರಿಗಾಗಿ ತರೀಕೆರೆಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ತೆರೆಯಲಾಗಿದೆ. ಆ ಕಚೇರಿಗೆ ಕನಿಷ್ಟ ಇಬ್ಬರು ವಾಹನ ಪರಿವೀಕ್ಷಕರ ಅಗತ್ಯವಿದೆ. ಆ ನೇಮಕಾತಿಯೂ ನಡೆದಿಲ್ಲ ಎಂದು ಹೇಳಿದರು.

ಜಿಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಕೆಲಸಗಳು ತ್ವರಿತಗತಿಯಲ್ಲಿ ನಡೆಯಲು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ. ಜನ ಆನ್‌ಲೈನ್‌ ವ್ಯವಸ್ಥೆಯನ್ನು ಹೆಚ್ಚಾಗಿ ಬಳಸಿಕೊಂಡಲ್ಲಿ ಕಚೇರಿಗೆ ಬಂದು ಸಮಯ ಹಾಳು ಮಾಡಿಕೊಳ್ಳುವುದನ್ನು ತಪ್ಪಿಸಬಹುದು. ಅಗತ್ಯ ಬಿದ್ದಾಗ ಮಾತ್ರ ಅವರ ಉಪಸ್ಥಿತಿ ಅವಶ್ಯಕ. ಈ ಹಿನ್ನೆಲೆಯಲ್ಲಿ ಜನ ಇಲಾಖೆಯೊಂದಿಗೆ ಸಹಕರಿಸಬೇಕಾಗಿದೆ. ಸಿಬ್ಬಂದಿ ಹಾಗೂ ಐಎಂವಿ ಇನ್ಸ್‌ಪೆಕ್ಟರ್‌ಗಳ ಕೊರತೆ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಲಾಗಿದ್ದು, ನೇಮಕವಾಗುವ ನಿರೀಕ್ಷೆ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.