ಮಾತೃಪೂರ್ಣ ಯೋಜನೆ ಶೇ.60 ಯಶಸ್ವಿ

ರಾಜ್ಯ ಸರ್ಕಾರದ ಪೌಷ್ಟಿಕಾಂಶವುಳ್ಳ ಆಹಾರ ಯೋಜನೆಗೆ ಮಲೆನಾಡು ಗರ್ಭಿಣಿ ಮತ್ತು ಬಾಣಂತಿಯರ ನಿರಾಸಕ್ತಿ

Team Udayavani, Oct 16, 2019, 3:56 PM IST

Udayavani Kannada Newspaper

ಚಿಕ್ಕಮಗಳೂರು: ಗರ್ಭಿಣಿ ಮತ್ತು ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಾತೃಪೂರ್ಣ ಯೋಜನೆ ಜಿಲ್ಲೆಯಲ್ಲಿ ಶೇ.60ರಷ್ಟು ಮಾತ್ರ ಯಶಸ್ವಿಯಾಗಿದೆ.

ಮಾತೃಪೂರ್ಣ ಯೋಜನೆ ಮೂಲಕ ಗರ್ಭಿಣಿಯರಿಗೆ ಪೌಷ್ಟಿಕಾಂಶದ ಆಹಾರ ನೀಡಲು ಸರ್ಕಾರ ಆಲೋಚಿಸಿತ್ತು. ಅಲ್ಲದೇ, ನಂತರ ಆರು ತಿಂಗಳು ಬಾಣಂತಿಯರಿಗೂ ಉತ್ತಮ ಆಹಾರ ನೀಡುವ ಆಲೋಚನೆಯೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಿತ್ತು. ಗರ್ಭಿಣಿ ಮತ್ತು ಬಾಣಂತಿಯರಿಗೆ ಆಹಾರದಲ್ಲಿ ಅನ್ನ, ಸಾಂಬಾರು, ಪಲ್ಯ, ಮೊಟ್ಟೆ, ಶೇಂಗಾ ಚಟ್ನಿ ಹಾಗೂ ಹಾಲನ್ನು ನೀಡಲು ಮುಂದಾಗಿತ್ತು.

ಈ ಯೋಜನೆ ಆರಂಭವಾದಾಗ ಗರ್ಭಿಣಿಯರು ಹಾಗೂ ಬಾಣಂತಿಯರು ಇರುವ ಮನೆಗಳಿಗೆ ಹೋಗಿ ಆಹಾರ ನೀಡಲು ಅಂಗನವಾಡಿ ಕೇಂದ್ರಗಳಿಗೆ ಸೂಚಿಸಲಾಗಿತ್ತು. ಆನಂತರ ಇದು ಕಷ್ಟಸಾಧ್ಯ ಹಾಗೂ ಮನೆಗೆ ಹೋಗಿ ನೀಡಿದಾಗ ಅದು ಬಾಣಂತಿಯರಿಗೆ ಹಾಗೂ ಗರ್ಭಿಣಿಯರಿಗೆ ಮಾತ್ರ ಸಿಗದೇ ಮನೆಯ ಇನ್ನಿತರ ಮಂದಿ ಸಹ ಅದರಲ್ಲಿ ಪಾಲು ಪಡೆಯುತ್ತಿದ್ದರು.

ಹಾಗಾಗಿ, ಅಂಗನವಾಡಿ ಕೇಂದ್ರಗಳಿಗೆ ಹೋಗಿ ಆಹಾರ ಸೇವಿಸಲು ಅವರಿಗೆ ಸೂಚಿಸಲಾಯಿತು. ಆದರೆ, ಈ ವ್ಯವಸ್ಥೆ ಸಹ ಈಗ ಯಶಸ್ವಿಯಾಗಿಲ್ಲ ಎಂಬುದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಿರುವ ಅಂಕಿ-ಅಂಶ ಸ್ಪಷ್ಟಪಡಿಸುತ್ತದೆ. ಮಾತೃಪೂರ್ಣ ಯೋಜನೆಯಡಿ ಒಟ್ಟು ಇಲಾಖೆ ನೋಂದಣಿ ಮಾಡಿಕೊಂಡಿರುವ ಗರ್ಭಿಣಿ ಮತ್ತು ಬಾಣಂತಿಯರ ಸಂಖ್ಯೆ 12912.

ಆದರೆ, ಆಯಾ ಅಂಗನವಾಡಿ ಕೇಂದ್ರಗಳಿಗೆ ಪ್ರತಿನಿತ್ಯ ಬಂದು ಊಟ ಮಾಡುತ್ತಿರುವ ಗರ್ಭಿಣಿ ಮತ್ತು ಬಾಣಂತಿಯರ ಸಂಖ್ಯೆ 6933. ಇವರಲ್ಲಿ ಗರ್ಭಿಣಿಯರ ಸಂಖ್ಯೆ 3336 ಆದರೆ, ಬಾಣಂತಿಯರ ಸಂಖ್ಯೆ 3597. ಇವರ ಜತೆಗೆ ಆಹಾರ ತಯಾರಿಸಿ ಅವರಿಗೆ ನೀಡುವ 1786 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ 1656 ಮಂದಿ ಸಹಾಯಕಿಯರು ಸೇರಿ ಪ್ರತಿನಿತ್ಯ 10375 ಮಂದಿ ಆಹಾರ ಸ್ವೀಕರಿಸುತ್ತಿದ್ದಾರೆ.

ಮಲೆನಾಡಿನಲ್ಲಿ ಕ್ಷೀಣ: ದಟ್ಟ ಮಲೆನಾಡು ಕೊಪ್ಪ ತಾಲೂಕಿನಲ್ಲಿ ಅಂಗನವಾಡಿಗೆ ಬಂದು ಆಹಾರ ಸ್ವೀಕರಿಸಲು ದಾಖಲಿಸಿಕೊಂಡ ಗರ್ಭಿಣಿಯರು ಮತ್ತು ಬಾಣಂತಿಯರ ಸಂಖ್ಯೆ 584. ಆದರೆ, ಅಲ್ಲಿಗೆ
ಬಂದು ಆಹಾರ ಸ್ವೀಕರಿಸುತ್ತಿರುವ ಗರ್ಭಿಣಿಯರ ಸಂಖ್ಯೆ 121 ಆದರೆ, ಬಾಣಂತಿಯರ ಸಂಖ್ಯೆ ಕೇವಲ 90, ಮೂಡಿಗೆರೆಯಲ್ಲಿ ದಾಖಲಿಸಿಕೊಂಡಿರುವ 1420 ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿ ಬಂದು ಆಹಾರ ಸ್ವೀಕರಿಸುತ್ತಿರುವವರು ಅನುಕ್ರಮವಾಗಿ 184 ಮತ್ತು 191. ಶೃಂಗೇರಿ ತಾಲೂಕಿನಲ್ಲಿ 526 ರ ಗುರಿಗೆ ಎದುರಾಗಿ ಬಂದು ಆಹಾರ ಸ್ವೀಕರಿಸುತ್ತಿರುವವರು
68 ಮಂದಿ ಗರ್ಭಿಣಿಯರು ಮತ್ತು 53 ಮಂದಿ ಬಾಣಂತಿಯರು.

ಚಿಕ್ಕಮಗಳೂರು ತಾಲೂಕಿನಲ್ಲಿ ಆಹಾರ ಸ್ವೀಕರಿಸಲು ನೋಂದಾಯಿಸಿಕೊಂಡವರ ಸಂಖ್ಯೆ 3302, ಬಂದು ಆಹಾರ ಸ್ವೀಕರಿಸುತ್ತಿರುವ ಗರ್ಭಿಣಿಯರು 822 ಮಂದಿಯಾದರೆ, ಬಾಣಂತಿಯರ ಸಂಖ್ಯೆ 879, ನರಸಿಂಹರಾಜಪುರ ತಾಲೂಕಿನಲ್ಲಿ ಹೆಸರು ದಾಖಲಿಸಿಕೊಂಡ 955 ಮಂದಿಯಲ್ಲಿ ಕೇವಲ 186 ಮಂದಿ ಗರ್ಭಿಣಿಯರು ಹಾಗೂ 189 ಮಂದಿ ಬಾಣಂತಿಯರು ಆಹಾರ ಸ್ವೀಕರಿಸಲು ಬರುತ್ತಿದ್ದಾರೆ.

ಮಲೆನಾಡಿನಲ್ಲಿ ಪೌಷ್ಟಿಕ ಆಹಾರವನ್ನು ಸರ್ಕಾರ ಉಚಿತವಾಗಿ ಒದಗಿಸಿ ಗರ್ಭಿಣಿ ಹಾಗೂ ಬಾಣಂತಿಯರ ಆರೋಗ್ಯ ಸುಧಾರಿಸಲು ಯೋಜನೆ ಜಾರಿಗೆ ತಂದರೂ, ಅಂಗನವಾಡಿ ಕೇಂದ್ರಕ್ಕೆ ಬಂದು ಆಹಾರ ಸ್ವೀಕರಿಸಲು ಅದರದೇ ಆದ ಭೌಗೋಳಿಕ ಸಮಸ್ಯೆ ಕಾರಣ ಎಂದು ಜನ ಹೇಳುತ್ತಾರೆ.

ಮಲೆನಾಡಿನಲ್ಲಿ ಅಂಗನವಾಡಿ ಕೇಂದ್ರಕ್ಕೂ, ಅಲ್ಲಿರುವ ಮನೆಗಳಿಗೂ ಅಂತರ ಹೆಚ್ಚಾಗಿರುವುದು ಕಾರಣ. ಮಲೆನಾಡಿನಲ್ಲಿ ಬಯಲಿನಂತೆ ಒಟ್ಟಾಗಿ ಮನೆಗಳು ಕಂಡು ಬರುವುದಿಲ್ಲ. ಒಂದು ಮನೆಯಿಂದ ಮತ್ತೊಂದು  ಮನೆಗೆ ಹರಿದಾರಿ ದೂರವಿರುತ್ತದೆ. ಊಟಕ್ಕಾಗಿ ತಿಟ್ಟು ಹತ್ತಿ ಅಂಗನವಾಡಿಗೆ ಬರಲು ಸಾಧ್ಯವೇ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಾರೆ.

ಹಾಗಾಗಿ, ಸರ್ಕಾರದ ಈ ಒಂದು ದೂರದೃಷ್ಟಿಯ ಯೋಜನೆ ಅಲ್ಲಿ ಸಫಲವಾಗುತ್ತಿಲ್ಲ. ಬಯಲು ಭಾಗದಲ್ಲಿ ಒಂದು ಹಳ್ಳಿ ಎಂದರೆ ನೂರಾರು ಮನೆಗಳು ಒಟ್ಟಾಗಿರುತ್ತವೆ. ಜೊತೆಗೆ ಮಲೆನಾಡಿಗಿಂತ ಇಲ್ಲಿ ಬದುಕು ಕಷ್ಟಕರ. ಈ ಹಿನ್ನೆಲೆಯಲ್ಲಿ ಈ ಯೋಜನೆಯ ಫಲಾನುಭವಿಗಳ ಸಂಖ್ಯೆಯೂ ಅಧಿಕ. ಆದರೂ ಸಹ ಕಡೂರು, ತರೀಕೆರೆ ತಾಲೂಕಿನಲ್ಲಿ ನೋಂದಾಯಿಸಿಕೊಂಡವರ ಸಂಖ್ಯೆಗೆ ಅನುಗುಣವಾಗಿ ಅಂಗನವಾಡಿ ಕೇಂದ್ರಕ್ಕೆ ಬರುವವರ ಸಂಖ್ಯಾ ಪ್ರಮಾಣದಲ್ಲೂ ಕುಸಿತ ಕಂಡುಬರುತ್ತಿದೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.