ಲೋಕ ಕಲ್ಯಾಣಾರ್ಥ ಅತಿರುದ್ರ ಯಾಗಕ್ಕೆ ಚಾಲನೆ


Team Udayavani, Oct 12, 2019, 5:34 PM IST

11-October-19

ಚಿಕ್ಕಮಗಳೂರು: ರಾಜ್ಯದಲ್ಲಿ ಅತಿವೃಷ್ಟಿ ತಡೆಗೆ ಮತ್ತು ಲೋಕ ಕಲ್ಯಾಣಾರ್ಥವಾಗಿ ಶ್ರೀಗುರುದತ್ತ ಚೈತನ್ಯ ಷೋಡಶಿ ಸೇವಾಶ್ರಮದಲ್ಲಿ ಅತಿರುದ್ರ ಪುರಶ್ಚರಣೆ ಮಾಡಿದ 25 ಗುರು ಭಕ್ತರಿಂದ ಹನ್ನೊಂದು ದಿನಗಳ ಅತಿರುದ್ರ ಯಾಗಕ್ಕೆ ಚಾಲನೆ ದೊರೆಯಿತು.

ತಾಲೂಕಿನ ಮಳಲೂರು ಸಮೀಪದ ಶ್ರೀಗುರುದತ್ತ ಚೈತನ್ಯ ಷೋಡಶಿ ದತ್ತಾಶ್ರಮದ ಆವರಣದಲ್ಲಿ ಅವಧೂತರಾದ ಅಶೋಕ ಗಣಪತಿ ಶರ್ಮ ನೇತೃತ್ವದಲ್ಲಿ ಮುಂಜಾನೆ 5.30 ರಿಂದ ಆರಂಭವಾದ ಅತಿರುದ್ರ ಯಾಗದ ಪಾರಾಯಣದಲ್ಲಿ 25ಗುರು ಭಕ್ತರು ಪಾಲ್ಗೊಂಡಿದ್ದರು.

ಹನ್ನೊಂದು ದಿನಗಳ ಕಾಲ ಬೆಳಗ್ಗೆ 5.30 ರಿಂದ 8.30ರ ತನಕ ಯಾಗ ನಡೆಯಲಿದ್ದು, ಗುರುಬಂಧುಗಳು ಪಾಲ್ಗೊಳ್ಳಲಿದ್ದಾರೆ. ಅ.20 ರಂದು ಮಧ್ಯಾಹ್ನ ಯಾಗದ ಮಹಾ ಪೂರ್ಣಾಹುತಿ ನಡೆಯಲಿದ್ದು, ನೂರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ.

ಅಶೋಕ ಗಣಪತಿ ಶರ್ಮ ಮಾತನಾಡಿ, ನಗರದ ಬಸವನಹಳ್ಳಿ ಶಂಕರಮಠ, ಸಖರಾಯಪಟ್ಟಣ, ಕಳಾಸಾಪುರಗಳಲ್ಲಿ ಗುರುಬಂಧುಗಳು ಸೇರಿ ನಾಲ್ಕೂವರೆ ತಿಂಗಳು ಪಾರಾಯಣ ಮಾಡಿದ ನಂತರ ಆಶ್ರಮದಲ್ಲಿ ಅತಿರುದ್ರಯಾಗದ ಹೋಮ, ಹವನ ಪ್ರಕ್ರಿಯೆಯನ್ನು ಪ್ರಾರಂಭ ಮಾಡಲಾಗಿದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ದೇಶದಲ್ಲಾಗುತ್ತಿರುವ ಅತಿವೃಷ್ಟಿಗೆ ಬಹಳಷ್ಟು ಮಂದಿ ಸಂತ್ರಸ್ತರ ಜೀವನ ಅಯೋಮಯವಾಗಿದೆ.

ಮಹಾರುದ್ರ ಶಾಂತನಾಗಿ ಗಂಗೆಯನ್ನು ಸಂಪೂರ್ಣ ಸಂತೋಷಗೊಳಿಸಿ, ದೇಶಕ್ಕೆ ಒಳಿತು ಮಾಡುವಂತಾಗಲಿ. ಸಂತ್ರಸ್ತರಿಗೆ ಉತ್ತಮ ಜೀವನ ಪ್ರಾಪ್ತವಾಗಲಿ ಎಂದು ಸಂಕಲ್ಪಿಸಿ ಮತ್ತು ಲೋಕಕಲ್ಯಾಣಾರ್ಥವಾಗಿ ಈ ಯಾಗದ ಕೈಂಕರ್ಯ ಹಮ್ಮಿಕೊಳ್ಳಲಾಗಿದೆ ಎಂದರು.

ಪೂರ್ಣಾಹುತಿ ದಿನದಂದು ಅನ್ನಸಂತರ್ಪಣೆ ನಡೆಯಲಿದೆ. ನಿತ್ಯ 133 ಆವರ್ತಿಯಿಂದ ಆಗುವ ಈ ಅತಿರುದ್ರ ಯಾಗದಲ್ಲಿ 11 ದಿನಕ್ಕೆ 2 ಲಕ್ಷಕ್ಕೂ ಹೆಚ್ಚು ರುದ್ರಮಂತ್ರಗಳ ಸ್ವಾಹಾಕಾರಗಳು ಬರುತ್ತವೆ. ಚಿಕ್ಕಮಗಳೂರು, ಕಳಸಾಪುರ, ಸಖರಾಯಪಟ್ಟಣದ ಗುರುಬಂಧುಗಳು ನಿತ್ಯ ಆಗಮಿಸಿ ಯಾಗದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು. ಗೋಪಿನಾಥ್‌ ಪಾರಾಯಣ ನಡೆಸಿದರು. ಸಚ್ಚಿದಾನಂದ, ಕಳಸಾಪುರದ ಕಿಟ್ಟಿ, ಅಕ್ಷಯ ಶರ್ಮ, ರಾಮಮೂರ್ತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ನಂತರ ಶ್ರೀಗುರು ದತ್ತಾತ್ರೇಯರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.