ಭ್ರೂಣ ಹತ್ಯೆ ವಿರುದ್ಧ ಧ್ವನಿ ಎತ್ತಿ
ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾಯಾಧಿಧೀಶೆ ಅರುಣಾ ಕುಮಾರಿ ಸಲಹೆ
Team Udayavani, Nov 15, 2019, 2:46 PM IST
ಚಿಕ್ಕಮಗಳೂರು: ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಮೂಲಕ ಸಮಾಜದಲ್ಲಿ ದೌರ್ಜನ್ಯ ಪ್ರಾರಂಭವಾಗಿದ್ದು, ಅವುಗಳ ವಿರುದ್ಧ ಎಲ್ಲರೂ ಧ್ವನಿ ಎತ್ತುವಂತಾಗಬೇಕೆಂದು ಜೆ.ಎಂ.ಎಫ್.ಸಿ. ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧಿಧೀಶೆ ಅರುಣಾ ಕುಮಾರಿ ಹೇಳಿದರು.
ನಗರದ ಭುವನೇಂದ್ರ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಭುವನೇಂದ್ರ ವಿದ್ಯಾಸಂಸ್ಥೆ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಶ್ವಸಂಸ್ಥೆಯು ಮಕ್ಕಳಿಗೆ ನೀಡಿರುವ ಹಕ್ಕುಗಳು ದುರ್ಬಳಕೆಯಾದರೆ ಕಾನೂನಿನಡಿ ದೂರು ಸಲ್ಲಿಸಬಹುದು. ವಿಶ್ವಸಂಸ್ಥೆ ಮಕ್ಕಳಿಗೆ ನೀಡಿರುವ ಹಕ್ಕುಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಮಕ್ಕಳು ತಮಗೆ ಯಾವುದೇ ಸಮಸ್ಯೆಗಳಿದ್ದರೂ ತಮ್ಮ ಪೋಷಕರು ಮತ್ತು ಶಿಕ್ಷಕರ ಜೊತೆಗೆ ಹಂಚಿಕೊಂಡರೆ ಸೂಕ್ತ ಪರಿಹಾರ ದೊರಕಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜೆ.ಎಂ.ಎಫ್.ಸಿ. ಮೂರನೆಯ ಹೆಚ್ಚುವರಿ ಸಿವಿಲ್ ನ್ಯಾಯಾಧಿಧೀಶೆ ಕೆ.ಆರ್.ದೀಪಾ ಮಾತನಾಡಿ, ದೇಶ ಅಭಿವೃದ್ಧಿ ಹೊಂದಲು ಮಕ್ಕಳು ಮಾನವೀಯ ಮೌಲ್ಯಗಳನ್ನು, ಸಾಂಸ್ಕೃತಿಕ ಅಂಶಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಪಡೆಯಬೇಕೆಂದರು. ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಬಿ.ಆರ್. ಜಗದೀಶ್ ಮಾತನಾಡಿ, ಮನುಷ್ಯನಾಗಿ ಹುಟ್ಟಿದ ಮೇಲೆ ಸಾಧನೆ ಮಾಡಬೇಕು. ಸಾಧನೆಗೆ ಛಲ ಬೇಕೆಂದರು. ಎಸ್.ಟಿ.ಜೆ. ಮಹಿಳಾ ಪದವಿ ಕಾಲೇಜಿನ ಪ್ರಿನ್ಸಿಪಾಲ್ ಜೆ.ಕೆ.ಭಾರತಿ ಮಕ್ಕಳು ಮತ್ತು ದೇಶದ ಭವಿಷ್ಯದ ಬಗ್ಗೆ ಹಾಗೂ ವಕೀಲೆ ಡಿ.ಎಸ್.ಮಮತಾ ಮಕ್ಕಳ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು.
ಭುವನೇಂದ್ರ ವಿದ್ಯಾಸಂಸ್ಥೆ ಅಧ್ಯಕ್ಷ ನರೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಜಿಎಸ್ಬಿ ಸಮಾಜದ ಮತ್ತು ಟ್ರಸ್ಟಿ ಅಧ್ಯಕ್ಷ ದೇವದಾಸ್ ಹೆಗಡೆ, ಪ್ರಿನ್ಸಿಪಾಲ್ ಕೆ.ಪಿ.ದೇವರಾಜ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…