ಚಿಂಚೋಳಿ-ಚಂದಾಪುರದಲ್ಲಿ  ಜಲಕ್ಷಾಮ

ಸಂಪೂರ್ಣ ಬತ್ತಿದ ಮುಲ್ಲಾಮಾರಿ ನದಿನದಿಗೆ ನೀರು ಹರಿದು ಬಿಡಲು ಆಗ್ರಹ 

Team Udayavani, Mar 27, 2019, 5:07 PM IST

27-March-19

ಚಿಂಚೋಳಿ: ಪಟ್ಟಣದ ಪಕ್ಕದಲ್ಲಿ ಹರಿಯುವ ಮುಲ್ಲಾಮಾರಿ ನದಿಯಲ್ಲಿ ಅಲ್ಲಲ್ಲಿ ನಿಂತುಕೊಂಡಿರುವ ನೀರು ಕಲುಷಿತಗೊಂಡಿದೆ.

ಚಿಂಚೋಳಿ: ತಾಲೂಕಿನಲ್ಲಿ ದಿನೇ-ದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದಾಗಿ ಮುಲ್ಲಾಮಾರಿ ನದಿ ಸಂಪೂರ್ಣ ಬತ್ತಿದೆ. ಅಲ್ಲಲ್ಲಿ ನಿಂತುಕೊಂಡಿದ್ದ ನೀರು ಹೊಲಸು ವಾಸನೆ ಮತ್ತು ಹಸಿರು ಬಣ್ಣಕ್ಕೆ ತಿರುಗಿದೆ. ಇದರಿಂದ ಕುಡಿಯಲು ಯೋಗ್ಯವಲ್ಲದ ಕಾರಣ ಪಟ್ಟಣದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.
ತಾಲೂಕಿನ ನಾಗರಾಳ ಗ್ರಾಮದ ಬಳಿಯಲ್ಲಿ ಇರುವ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಪ್ರತಿ ವರ್ಷ ಬೇಸಿಗೆ ದಿನಗಳಲ್ಲಿ ಹದಿನೈದು ದಿನಕ್ಕೊಮ್ಮೆ ನದಿಗೆ ನೀರು ಹರಿದು ಬಿಡಲಾಗುತ್ತಿತ್ತು. ಇದರಿಂದ ನದಿ ಪಾತ್ರದ ಗ್ರಾಮಗಳಾದ ಚಿಮ್ಮನಚೋಡ, ತಾಜಲಾಪೂರ, ಕನಕಪೂರ, ಗಾರಂಪಳ್ಳಿ, ಗೌಡನಹಳ್ಳಿ, ನಿಮಾಹೊಸಳ್ಳಿ, ಚಿಂಚೋಳಿ, ಅಣವಾರ, ಪರದಾರ ಮೋತಕಪಳ್ಳಿ, ಗರಗಪಳ್ಳಿ, ಇರಗಪಳ್ಳಿ, ಕರ್ಚಖೇಡ ಮತ್ತು ಜಟ್ಟುರ, ಹಲಕೋಡ, ಪೋತಂಗಳು ಸೇರಿದಂತೆ ಸೇಡಂ ತಾಲೂಕಿನ ಅನೇಕ ಗ್ರಾಮಗಳಿಗೆ ಕುಡಿಯುವ ನೀರು ಉಪಯೋಗವಾಗುತ್ತಿತ್ತು.
ಆದರೆ ತಾಲೂಕಿನಲ್ಲಿ ಭೀಕರ ಬರಗಾಲ ಆವರಿಸಿಕೊಂಡಿದೆ. ದನಕರುಗಳಿಗೆ ಅಡವಿಯಲ್ಲಿ ಕುಡಿಯಲು ನೀರಿಲ್ಲ. ಆಹಾರಕ್ಕೆ ಮೇವು-ಹುಲ್ಲು ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ನದಿಯಲ್ಲೂ ನೀರಿಲ್ಲದ ಕಾರಣ ಅನೇಕ ಗ್ರಾಮಸ್ಥರು ತೊಂದರೆ ಪಡಬೇಕಾಗಿದೆ. ಫೆ.11ರಿಂದ ಕೇವಲ ಒಂದು ವಾರ ನದಿಗೆ ನೀರು ಬಿಟ್ಟದ್ದರಿಂದ ಈಗ ಮತ್ತೆ ನದಿಯಲ್ಲಿ ನೀರಿಲ್ಲದಂತಾಗಿದೆ. ಕೊಳವೆಬಾವಿ ಮತ್ತು ಸಾರ್ವಜನಿಕ ಬಾವಿಗಳು ಬತ್ತುತ್ತಿವೆ. ಕೂಡಲೇ ಮುಲ್ಲಾಮಾರಿ ನದಿಗೆ ನೀರು ಹರಿದು ಬಿಡುವಂತೆ ಈ ಭಾಗದ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಚಿಂಚೋಳಿ- ಚಂದಾಪುರ ಅವಳಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವುದಕ್ಕಾಗಿ ಹನುಮಾನ ಮಂದಿರ ಹಿಂಭಾಗದಲ್ಲಿ ಮುಲ್ಲಾಮಾರಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ಯಾರೇಜ್‌ನಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಇದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲು ಆಗುತ್ತಿಲ್ಲ. ಚಂದಾಪುರ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.
.ಸಂತೋಷ ಗುತ್ತೆದಾರ, 
ಆರೋಗ್ಯ ರಕ್ಷಕ ಸಮಿತಿ ನಿರ್ದೇಶಕ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.