ಚಿಂಚೋಳಿ ಉಪ ಚುನಾವಣೆ: ಇವಿಎಂ ಹಂಚಿಕೆಗೆ ರ್ಯಾಂಡಮೈಸೇಶನ್
Team Udayavani, May 9, 2019, 5:19 PM IST
ಕಲಬುರಗಿ: ಚಿಂಚೋಳಿ ಮೀಸಲು ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ನೇತೃತ್ವದಲ್ಲಿ ಇವಿಎಂ ಹಂಚಿಕೆ, ಸಿಬ್ಬಂದಿ ನಿಯೋಜನೆ ಕುರಿತಂತೆ ಯಾದೃಚ್ಛೀಕರಣ ನಡೆಸಲಾಯಿತು
ಕಲಬುರಗಿ: ಮೇ 19ರಂದು ನಡೆಯಲಿರುವ 42-ಚಿಂಚೋಳಿ ಮೀಸಲು (ಎಸ್ಸಿ) ವಿಧಾನಸಭೆ ಉಪ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದ್ದು, ಬುಧವಾರ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್. ವೆಂಕಟೇಶಕುಮಾರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇವಿಎಂ ಹಂಚಿಕೆ ಹಾಗೂ ಸಿಬ್ಬಂದಿ ನಿಯೋಜನೆ ಕುರಿತಂತೆ ರ್ಯಾಂಡಮೈಸೇಶನ್ (ಯಾದೃಚ್ಛೀಕರಣ) ನಡೆಸಲಾಯಿತು.
42-ಚಿಂಚೋಳಿ ಮೀಸಲು (ಎಸ್.ಸಿ.) ವಿಧಾನಸಭೆ ಉಪ ಚುನಾವಣೆಗೆ ನೇಮಕವಾಗಿರುವ ಸಾಮಾನ್ಯ ವೀಕ್ಷಕ ಬಿ. ರಾಮರಾವ್ ಹಾಗೂ ಕಣದಲ್ಲಿರುವ ಅಭ್ಯರ್ಥಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್ ನಿಯೋಜನೆ ಕುರಿತು ಮೊದಲ ಹಂತದ ರ್ಯಾಂಡಮೈಸೇಶನ್ ಹಾಗೂ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ, ಇವಿಎಂಗಳ ಹಂಚಿಕೆ ಕುರಿತು 2ನೇ ಹಂತದ ರ್ಯಾಂಡಮೈಸೇಶನ್ ನಡೆಸಲಾಯಿತು.
ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಒಟ್ಟು 241 ಮತಕೇಂದ್ರಗಳ ಪೈಕಿ, 60 ಸಂದಿಗ್ದ (ಅತಿ ಸೂಕ್ಷ್ಮ) ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಕೇಂದ್ರ ಪ್ಯಾರಾ ಮಿಲಿಟರಿ ಪಡೆ ನಿಯೋಜಿಸಲಾಗುತ್ತಿದೆ. ಈ ಪೈಕಿ 25 ಮತಕೇಂದ್ರಗಳಲ್ಲಿ ವೆಬ್ ಕ್ಯಾಮೆರಾ ಅಳವಡಿಸಲಾಗಿದೆ. ಉಳಿದ 35 ಮತಗಟ್ಟೆಗಳಿಗೆ ಮೈಕ್ರೋ ಅಬ್ಸರ್ವರ್ ನೇಮಿಸುವ ರ್ಯಾಂಡಮೈಸೇಶನ್ ಪ್ರಕ್ರಿಯೆ ಕೈಗೊಳ್ಳಲಾಯಿತು.
ಚಿಂಚೋಳಿ ವಿಧಾನಸಭೆ ಉಪ ಚುನಾವಣೆ ಚುನಾವಣಾಧಿಕಾರಿ ಸೋಮಶೇಖರ ಎಸ್.ಜಿ., ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಯೋಗೇಶ, ವೆಬ್ ಕ್ಯಾಸ್ಟಿಂಗ್ ಮತ್ತು ಮೈಕ್ರೋ ಅಬ್ಸರ್ವರ್ ನೋಡಲ್ ಅಧಿಕಾರಿ ಕೆ. ರಾಮೇಶ್ವರಪ್ಪ, ಎನ್ಐಸಿ ಕೇಂದ್ರದ ಅಧಿಕಾರಿ ಸುಧೀಂದ್ರ ಅವಧಾನಿ ಇದ್ದರು.
ಕಲಬುರಗಿ ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಸಿಬ್ಬಂದಿ ವಿರುದ್ಧ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಇದೀಗ ಕರ್ತವ್ಯ ಲೋಪ ಎಸಗಿರುವಂತ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಚಿಂಚೋಳಿ ವಿಧಾನಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಮೇ 3ರಂದು ಕರೆದಿದ್ದ ತರಬೇತಿಗೆ ಗೈರು ಹಾಜರಾದ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಲಾಗಿದೆ.
•ಆರ್. ವೆಂಕಟೇಶಕುಮಾರ, ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ