ನೀರಿಗಾಗಿ ಕೈ ಮುಗಿಯೋ ದುಸ್ಥಿತಿ

ಬಿಸಿಲಲ್ಲೂ ತರೋ ಸಂಕಷ್ಟ ಕಾಡು ಪ್ರಾಣಿಗಳ ಪರದಾಟ ಕೇಳ್ಳೋರಿಲ್ಲ

Team Udayavani, Apr 6, 2019, 12:25 PM IST

06-April-11

ಚಿಂಚೋಳಿ: ಶಾದೀಪುರ ಗ್ರಾಮದ ಸುತ್ತಮುತ್ತ ಇರುವ ತಾಂಡಾದ ಮಹಿಳೆಯರು ದೂರದಿಂದ ನೀರು ಹೊತ್ತು ತರುತ್ತಿರುವುದು.

ಚಿಂಚೋಳಿ: ತಾಲೂಕಿನ ವನ್ಯಜೀವಿಧಾಮ ಅರಣ್ಯಪ್ರದೇಶಕ್ಕೆ ಹೊಂದಿಕೊಂಡಿರುವ ಶಾದೀಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮ ತಾಂಡಾಗಳಲ್ಲಿ ಕಳೆದೆರಡು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಹೊಲಗದ್ದೆಗಳಿಗೆ ಸುಡು ಬಿಸಿಲು ಲೆಕ್ಕಿಸದೇ ತಲೆಮೇಲೆ ನೀರು ತುಂಬಿದ ಕೊಡಗಳನ್ನು ಹೊತ್ತುಕೊಂಡು ತರುವ ಪರಿಸ್ಥಿತಿ ಉಂಟಾಗಿದೆ. ಜನರು ನೀರಿಗಾಗಿ
ಪರದಾಟ ನಡೆಸುತ್ತಿದ್ದರೂ ತಾಲೂಕಿನ ಅ ಧಿಕಾರಿಗಳು ಗಮನ ಹರಿಸುತ್ತಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕುಂಚಾವರಂ ವನ್ಯಜೀವಿಧಾಮದಲ್ಲಿ ಕಾಡು ಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಿದರೆ, ಇತ್ತ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಸ್ಥಿತಿ ಉಂಟಾಗಿದೆ.

ಚಾಪಲಾ ನಾಯಕ ತಾಂಡಾ, ಚಂದುನಾಯಕ ತಾಂಡಾ, ಭಿಕ್ಕುನಾಯಕ ತಾಂಡಾ, ಧನಸಿಂಗ ನಾಯಕ ತಾಂಡಾ, ಜವಾಹರ ನಗರ ತಾಂಡಾಗಳಲ್ಲಿ ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದೆ.

ಹೆಚ್ಚುತ್ತಿರುವ ಬಿಸಿಲಿನ ತಾಪದಿಂದಾಗಿ ತಾಂಡಾಗಳಲ್ಲಿ ಇರುವ ಬೋರವೆಲ್‌ಗ‌ಳಲ್ಲಿ ನೀರಿನ ಅಂರ್ತಜಲಮಟ್ಟ ದಿನೇದಿನೇ ಕುಸಿಯುತ್ತಿದೆ. ಹೀಗಾಗಿ ಜನರು ತಾಸುಗಟ್ಟಲೇ ಬೋರವೆಲ್‌ ಹೊಡೆದರೂ ಒಂದು ಕೊಡ ನೀರು ಬರುತ್ತಿಲ್ಲ. ತಾಂಡಾಗಳ ಸುತ್ತಲು 2 ಕಿ.ಮೀ ಅಂತರದಲ್ಲಿ ಇರುವ ತೋಟಗಳಿಗೆ ಹೋಗಿ ಹೊಲದ ಮಾಲೀಕರಿಗೆ ಕೈಕಾಲು ಹಿಡಿದುಕೊಂಡು ನೀರಿಗಾಗಿ ಕೈಮುಗಿದು ಬೇಡಿಕೊಳ್ಳುವ ಪರಿಸ್ಥಿತಿ ಇಲ್ಲಿನ ಜನರದ್ದಾಗಿದೆ.

ಗ್ರಾಪಂ ಪಿಡಿಒ ಮತ್ತು ಸದಸ್ಯರಿಗೆ ತಾಂಡಾದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೊಸ ಬೋರವೆಲ್‌ ಕೊರೆಯುವಂತೆ ಇಲ್ಲವೇ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವಂತೆ ಶಾದೀಪುರ ಗ್ರಾಪಂ ಪಿಡಿಒ ಹಾಗೂ ಸದಸ್ಯರಿಗೆ ಮನವಿ ಮಾಡಿಕೊಂಡಿದ್ದರೂ ನಮಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ ಎಂದು ಇಲ್ಲಿನ ಜನರು ದೂರುತ್ತಾರೆ.

ಬಿಸಿಲಿನ ತಾಪದಿಂದ ಮಕ್ಕಳು ಬಾಯಾರಿ ಅಳುತ್ತಿವೆ. ಮನೆಯಲ್ಲಿ ನೀರಿಲ್ಲದ ಕಾರಣ ಮಕ್ಕಳಿಗಾಗಿ ಎರಡು ಕಿ.ಮೀ ದೂರದಲ್ಲಿ ಇರುವ ತೋಟ, ಹೊಲಗದ್ದೆಗಳಿಗೆ ತೆರಳಿ ಬಿಸಿಲು ಲೆಕ್ಕಸದೇ ದೂರದಿಂದ ನೀರು ಹೊತ್ತುಕೊಂಡು ಮನೆಗೆ ಬರುವಂತಾಗಿದೆ ಎಂದು ಮಹಿಳೆಯರು ಅಳಲು ತೋಡಿಕೊಳ್ಳುತ್ತಾರೆ.

ಜಾನುವಾರುಗಳ ಗತಿ ಆ ದೇವರೆ ಬಲ್ಲ. ಮೂಕ ಪ್ರಾಣಿಗಳ ವೇದನೆ ಹೇಳ ತೀರದಂತಾಗಿದೆ. ಬಾವಿಗಳಲ್ಲಿ, ಬೋರವೆಲ್‌ಗ‌ಳಲ್ಲಿ ನೀರಿಲ್ಲ ಏನು ಮಾಡಬೇಕು ಎಂದು ತಾಂಡಾದ ಚಾವಳಿಬಾಯಿ ಪ್ರಶ್ನಿಸುತ್ತಾರೆ.

ತಾಪಂ ಅಧ್ಯಕ್ಷೆ ರೇಣುಕಾ ಶಾದೀಪುರ ತಾಪಂ ಮತಕ್ಷೇತ್ರದಿಂದ ಗೆಲುವು ಸಾಧಿ ಸಿ ಅಧ್ಯಕ್ಷೆ ಆಗಿದ್ದಾರೆ. ಆದರೆ ಒಮ್ಮೆಯೂ ತಾಂಡಾಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ ನಡೆಸಿಲ್ಲ. ಕಳೆದ ನಾಲ್ಕು ವರ್ಷಗಳಿಂದ ತಾಪಂ ಅಧ್ಯಕ್ಷೆಯಾಗಿ ಅ ಧಿಕಾರ ನಡೆಸುತ್ತಿದ್ದಾರೆ. ತಾಂಡಾದಲ್ಲಿ ಮಹಿಳೆಯರು ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿಲ್ಲ.
.ವಿಜಯಕುಮಾರ ರಾಠೊಡ,
ಚಾಪಲಾ ನಾಯಕ ತಾಂಡಾ

ಚಿಕ್ಕನಿಂಗದಳ್ಳಿ ತಾಂಡಾ ಮತ್ತು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸಣ್ಣ ನೀರಾವರಿ ಕೆರೆ ಬತ್ತಿ ಹೋಗಿದೆ. ಗ್ರಾಮದ ಜನರು ಕೆಲವು ತೋಟಗಳಿಗೆ ಹೋಗಿ ತಲೆ ಮೇಲೆ ಹೊತ್ತು ನೀರು ತರುವ ಪರಿಸ್ಥಿತಿ ಇದೆ. ತಾಪಂ ಅಧ್ಯಕ್ಷೆಗೆ ತಿಳಿಸಿದರೆ ಅವರು ಗಮನ ಹರಿಸಿಲ್ಲ.
.ಅಶೋಕ, ಶಾದೀಪುರ ಗ್ರಾಪಂ ಸದಸ್ಯ

ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.