ತಂಬಾಕನ್ನು ಸಂಪೂರ್ಣ ನಿಷೇಧಿಸಿ
ತಂಬಾಕು ಸೇವನೆ ತಡೆಗೆ ಸ್ವಯಂ ನಿರ್ಬಂಧವೇ ಹೆಚ್ಚು ಪರಿಣಾಮಕಾರಿ: ನ್ಯಾ| ಎಸ್.ವೈ.ವಟವಟಿ
Team Udayavani, Jun 1, 2019, 4:10 PM IST
ಚಿತ್ರದುರ್ಗ: ಕಾನೂನು ಅರಿವು ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧಿಧೀಶರಾದ ಎಸ್.ವೈ. ವಟವಟಿ ಉದ್ಘಾಟಿಸಿದರು
ಚಿತ್ರದುರ್ಗ: ಇಂದಿನ ಯುವ ಸಮುದಾಯ ತಂಬಾಕು ಸೇವನೆ ಹೆಚ್ಚು ಮಾಡುತ್ತಿದ್ದು, ಸಂಪೂರ್ಣವಾಗಿ ತಂಬಾಕು ನಿಷೇಧಿಸಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಎಸ್.ವೈ. ವಟವಟಿ ಹೇಳಿದರು.
ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜ್ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಈಶ್ವರಿ ವಿವಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಎಸ್.ಜಿ. ಪ್ಯಾರಾ ಮೆಡಿಕಲ್ ಕಾಲೇಜ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ತಂಬಾಕು ಸೇವನೆ, ಧೂಮಪಾನ ಮುಕ್ತ ಸಮಾಜದ ಸೃಷ್ಟಿಗೆ ಕಾನೂನುಗಳಿಗಿಂತ ಸ್ವಯಂ ನಿರ್ಬಂಧವೇ ಹೆಚ್ಚು ಪರಿಣಾಮಕಾರಿ. ಆಗ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು. ಹೆಣ್ಣು ಮಕ್ಕಳು 18 ವರ್ಷದ ನಂತರ ಮದುವೆ ಆಗಬೇಕು. ಗಂಡು ಮಕ್ಕಳು 21 ವರ್ಷದ ನಂತರ ಮದುವೆ ಆಗಬೇಕೆಂದು ಕಾನೂನು ಮಾಡಲಾಗಿದೆ. ಗುಂಡು ಮಕ್ಕಳು ದುಶ್ಚಟಗಳಿಗೆ ಬೇಗ ಬಲಿಯಾಗುವುದರಿಂದ 21 ವರ್ಷ ನಿಗದಿ ಮಾಡಲಾಗಿದೆ. ಆದರೆ ಹೆಣ್ಣು ಮಕ್ಕಳು ಯಾವುದೇ ದುಶ್ಚಟಗಳಿಗೆ ಬಲಿಯಾಗದಿರುವುದರಿಂದ 18 ವರ್ಷ ನಿಗದಿ ಮಾಡಲಾಗಿದೆ ಎಂದು ಹೇಳಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧಿಧೀಶರಾದ ಟಿ. ಶಿವಣ್ಣ ಮಾತನಾಡಿ, ತುಂಬಾಕು, ಗುಟ್ಕಾ, ಬೀಡಿ, ಸಿಗರೇಟು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾ ಬೀರಲಿದೆ. ಅಲ್ಲದೆ ಮುಂದೆ ಕ್ಯಾನ್ಸರ್ ರೋಗಕ್ಕೆ ತುತ್ತಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯಾವುದೇ ನಾಗರಿಕರು ಜೀವಿಸುವ ಪರಿಸರ ಹಾನಿಯಾಗದಂತೆ, ಮಲಿನಗೊಳ್ಳದಂತೆ ಕಾಯ್ದು ಕೊಳ್ಳಬೇಕು. ಆದರೆ, ಧೂಮಪಾನ ಮಾಡುವ ಜನರಿಂದ ಇತರರು ಜೀವಿಸುವ ಮೂಲಭೂತ ಹಕ್ಕಿಗೆ, ಅವರ ಪರಿಸರಕ್ಕೆ ತೊಂದರೆ ಯಾಗುತ್ತದೆ. ಅಂತಹ ಸಂದರ್ಭದಲ್ಲಿ ಧೂಮಪಾನ ಮಾಡಿದವರ ವಿರುದ್ಧ ದೂರನ್ನು ಕೊಡಬಹುದು. ಅದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಅವರು ತಿಳಿಸಿದರು.
ಈಶ್ವರಿ ವಿವಿ ಶಿವರಶ್ಮಿ ಅಕ್ಕ ಮಾತನಾಡಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿ, ತಮ್ಮ ಮನೆಗಳಲ್ಲಿ ಹಾಗೂ ನೆರೆಹೊರೆಯಲ್ಲಿ ಯಾರೇ ಧೂಮಪಾನ ಮಾಡುತ್ತಿದ್ದಲ್ಲಿ ಅವರಿಗೆ ಇದರ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಎಂದು ಮನವಿ ಮಾಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ, ತಂಬಾಕು ಸೇವನೆ ಹಾಗೂ ಮಾರಕ ಕಾಯಿಲೆಗಳು ಕುರಿತು ಉಪನ್ಯಾಸ ನೀಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಎ.ಅನಿಲ್ ಕುಮಾರ್, ಎಸ್.ಜಿ. ಪ್ಯಾರಾ ಮೆಡಿಕಲ್ ಕಾಲೇಜ್ ಕಾರ್ಯದರ್ಶಿ ಸಂತೋಷ್ ಗುಂಡಿಮಠ, ಪ್ರಾಂಶುಪಾಲ ಚಂದ್ರಶೇಖರ್ ವಸ್ತ್ರದ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಅಧ್ಯಕ್ಷ ಡಾ| ಎಚ್.ಕೆ.ಎಸ್. ಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ