ಹಿಂಗಾರು ಬಿತ್ತನೆಗೆ ಭರ್ಜರಿ ತಯಾರಿ

ಉತ್ತರೆ ಮಳೆಯಿಂದ ಜಮೀನುಗಳಲ್ಲಿ ಸಾಕಷ್ಟು ತೇವಾಂಶಕೃಷಿ ಇಲಾಖೆಯಿಂದ ಕಡಲೆ ಬೀಜ ದಾಸ್ತಾನು

Team Udayavani, Sep 30, 2019, 2:48 PM IST

3-Sepctember-10

ತಿಪ್ಪೇಸ್ವಾಮಿ ನಾಕೀಕೆರೆ
ಚಿತ್ರದುರ್ಗ:
ಜಿಲ್ಲೆಯಲ್ಲಿ ಮುಂಗಾರು ಕೈಒಟ್ಟು, ಹಿಂಗಾರು ಕೈ ಹಿಡಿದಿದೆ. ಪರಿಣಾಮ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಲು ಸಾಧ್ಯವಾಗದ ರೈತರು ಹಿಂಗಾರಿ ಬೆಳೆಗಳ ಬಿತ್ತನೆಗೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

ಕೃಷಿ ಇಲಾಖೆ ಕೂಡಾ ಈಗಾಗಲೇ 15 ಸಾವಿರ ಕ್ವಿಂಟಲ್‌ ಕಡಲೆ ಬೀಜ ದಾಸ್ತಾನು ಮಾಡಿದೆ. ಒಟ್ಟು 30 ಸಾವಿರ ಕ್ವಿಂಟಲ್‌ ಬೀಜದ ಅವಶ್ಯಕತೆಯಿದ್ದು, ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ದಾಸ್ತಾನಿಗೆ ತರಿಸಲು ಸಿದ್ಧತೆಯಲ್ಲಿದೆ. ಜಿಲ್ಲೆಯಲ್ಲಿ ಹಿಂಗಾರು ಬೆಳೆಯಾಗಿ ರೈತರು ಕಡಲೆ ಬೆಳೆಯುತ್ತಾರೆ. ಇದರ ಜತೆಗೆ ಅಕ್ಕಡಿ ಅಥವಾ ಕಡೆಸುತ್ತಿಗೆ ಕುಸುಬೆಯನ್ನೂ ಹಾಕಲಾಗುತ್ತೆ. ವಿಶೇಷವಾಗಿ ಹಸ್ತಾ ಮಳೆಗೆ ಕಡಲೆ ಬಿತ್ತನೆ ಆರಂಭವಾಗುತ್ತದೆ. ಉತ್ತರೆ ಮಳೆಯಿಂದ ಜಮೀನುಗಳಲ್ಲಿ ಸಾಕಷ್ಟು ತೇವಾಂಶ ಇದೆ. 75 ದಿನಕ್ಕೆ ಕಟಾವಿಗೆ ಬರುವ ಕಡಲೆಯನ್ನು ಎರೆ ಭೂಮಿಯಲ್ಲಿ ಬೆಳೆಯುತ್ತಾರೆ.

ಚಿತ್ರದುರ್ಗ ಕಸಬಾ, ತುರುವನೂರು, ಬೆಳಗಟ್ಟ, ಭರಮಸಾಗರ, ಚಳ್ಳಕೆರೆ, ಹಿರಿಯೂರಿನ ಕೆಲ ಭಾಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕಿನ ಕೆಲ ಭಾಗಗಳಲ್ಲಿರುವ ಎರೆ ಭೂಮಿಯಲ್ಲಿ ಕೆಲ ರೈತರಷ್ಟೇ ಸಾಂಪ್ರದಾಯಿಕವಾಗಿ ಕಡಲೆ ಬೆಳೆಯುವ ರೂಢಿ ಇಟ್ಟುಕೊಂಡಿದ್ದಾರೆ. ಕೃಷಿ ಇಲಾಖೆ ಅಂದಾಜಿನ ಪ್ರಕಾರ ಸುಮಾರು 50 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆಯಾಗುತ್ತದೆ. ಆದರೆ, ಈ ವರ್ಷ ಇದರ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಮುಂಗಾರು ಹಂಗಾಮಿನಲ್ಲಿ 3.55 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಇತ್ತು. ಆದರೆ, 2.35 ಲಕ್ಷ ಹೆಕ್ಟೇರ್‌ ಮಾತ್ರ ಬಿತ್ತನೆಯಾಗಿ ಶೇ. 65ರಷ್ಟು ಗುರಿ ಸಾಧಿ ಸಲಾಗಿದೆ. ಸಮರ್ಪಕ ಮಳೆ ಬಾರದ ಕಾರಣ ಇನ್ನೂ ಶೇ.35ರಷ್ಟು ಬಿತ್ತನೆ ಪ್ರದೇಶ ಖಾಲಿ ಉಳಿದಿದೆ. ಈಗ ಹದವಾಗಿ ಮಳೆ ಬಂದಿರುವುದರಿಂದ ಕಡಲೆಯನ್ನಾದರೂ ಬೆಳೆಯೋಣ ಎಂಬ ತುಡಿತ ರೈತರಲ್ಲಿದೆ.

ಒಂದೇ ದರ: ಕಡಲೆ ಬೀಜಕ್ಕೆ ರೈತರೀಗ ಮುಗಿಬಿದ್ದಿದ್ದಾರೆ. ಇದೇ ಕಾರಣಕ್ಕೆ ಸರ್ಕಾರ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಬೀಜ ವಿತರಣೆ ಮಾಡುವ ಕಾರ್ಯಕ್ರಮ ಜಾರಿಗೆ ತಂದಿದೆ. ಸಾಮಾನ್ಯವಾಗಿ ರೈತ ಸಂಪರ್ಕ ಕೇಂದ್ರಗಳಲ್ಲಿ ಸಿಗುವ ಕಡಲೆ ಬೀಜದ ದರಕ್ಕೂ, ಮಾರುಕಟ್ಟೆಯಲ್ಲಿ ಸಿಗುವ ಕಡಲೆ ಬೀಜದ ದರಕ್ಕೂ ಕನಿಷ್ಠ ಒಂದು ಸಾವಿರವಾದರೂ ವ್ಯತ್ಯಾಸ ಇರುತ್ತದೆ. ಆದರೆ, ಸದ್ಯ ಇರುವ ಬೆಲೆಯನ್ನು ಗಮನಿಸಿದರೆ ಮಾರುಕಟ್ಟೆ ಹಾಗೂ ರೈತ ಸಂಪರ್ಕ ಕೇಂದ್ರದಲ್ಲಿ ಹೆಚ್ಚು ಕಡಿಮೆ ಒಂದೇ ಬೆಲೆ ಇದೆ.

ಕೃಷಿ ಇಲಾಖೆ ಪ್ರತಿ ಕೆಜೆ ಕಡಲೆ ಬೀಜಕ್ಕೆ 45 ರೂ. ಅಂದರೆ ಕ್ವಿಂಟಲ್‌ಗೆ 4500 ರೂ. ನಿಗ ದಿ ಮಾಡಿದೆ. ಮಾರುಕಟ್ಟೆಯಲ್ಲಿ 4600, 4650 ರೂ.ಗೆ ಕಡಲೆ ಬೀಜ ದೊರೆಯುತ್ತಿದೆ. ಕೇವಲ 100-150 ರೂ. ವ್ಯತ್ಯಾಸವಿರುವುದರಿಂದ ರೈತರು ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಮಾರುಕಟ್ಟೆ ದರಕ್ಕಿಂತ ಕಡಿಮೆ ಮಾಡಬೇಕು ಎಂಬ ಕೂಗು ಕೇಳಿಬಂದಿದೆ.

ಬಿತ್ತನೆಗೆ ನೀಡುವ ಪ್ರಮಾಣದಲ್ಲಿ ವ್ಯತ್ಯಾಸ: ಕೃಷಿ ಇಲಾಖೆ ಪ್ರತಿ ಎಕರೆಗೆ 20 ರಿಂದ 25 ಕೆಜಿ ಕಡಲೆ ಬೀಜ ಬಿತ್ತನೆ ಮಾಡಬಹುದು ಎಂದು ಅಂದಾಜಿಸಿ 5 ಎಕರೆವರೆಗೆ ಭೂಮಿ ಇರುವ ರೈತರಿಗೆ 1 ಕ್ವಿಂಟಲ್‌ ಬೀಜ ವಿತರಣೆ ಮಾಡಲು ತೀರ್ಮಾನಿಸಿದೆ. ಪ್ರತಿ ಎಕೆರೆಗೆ
ಕನಿಷ್ಠ 30ರಿಂದ 35 ಕೆಜಿ ಬಿತ್ತನೆ ಮಾಡಬೇಕಾಗುತ್ತದೆ. ಆದ್ದರಿಂದ ಇಲಾಖೆ ನೀಡುವ ಬೀಜ ಸಾಕಾಗುವುದಿಲ್ಲ. ಇದರ ಪ್ರಮಾಣ ಹೆಚ್ಚಿಸಬೇಕು ಎನ್ನುತ್ತಿದ್ದಾರೆ ರೈತರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.