ಬ್ರಹ್ಮಶ್ರೀ ನಾರಾಯಣ ಗುರು ಸೇವೆ ಸ್ಫೂರ್ತಿದಾಯಕ
ಮಹಾನ್ ವ್ಯಕ್ತಿಗಳಿಗಿದೆ ಸಮಾಜ ಸುಧಾರಿಸುವ ಶಕ್ತಿ
Team Udayavani, Sep 14, 2019, 6:20 PM IST
ಚಿತ್ರದುರ್ಗ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವಿನೋತ್ಪ್ರಿಯಾ ಪುಷ್ಪಾರ್ಚನೆ ಮಾಡಿದರು.
ಚಿತ್ರದುರ್ಗ: ಬ್ರಹ್ಮಶ್ರೀ ನಾರಾಯಣ ಗುರು ಅವರ ಸ್ವಾರ್ಥ ರಹಿತ ಸಮಾಜ ಸೇವೆ ಎಲ್ಲರಿಗೂ ಸ್ಪೂರ್ತಿದಾಯಕ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಾರಾಯಣ ಗುರುಗಳು ಸೇರಿದಂತೆ ಸಮಾಜ ಸುಧಾರಕರ ಮೌಲ್ಯಗಳನ್ನು ಯುವಪೀಳಿಗೆ ಅಳವಡಿಸಿಕೊಂಡು, ಉತ್ತಮ ಸಮಾಜ ನಿರ್ಮಿಸಬೇಕು. ಸಮಾಜ ಸುಧಾಕರ ಮೌಲ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಸರ್ಕಾರ ಇಂತಹ ಜಯಂತಿಗಳನ್ನು ಆಚರಿಸುತ್ತಿದೆ ಎಂದರು.
ಎಸ್ಆರ್ಎಸ್ ಪಿಯು ಕಾಲೇಜಿನ ಪ್ರಾಚಾರ್ಯ ಇ.ಗಂಗಾಧರ ಉಪನ್ಯಾಸ ನೀಡಿ, ಸಮಾಜ ಸುಧಾರಿಸುವ ಶಕ್ತಿ ಇರುವುದು ಮಹಾನ್ ವ್ಯಕ್ತಿಗಳಿಗೆ. ಅಂತಹ ಮಹಾನ್ ವ್ಯಕ್ತಿಗಳ ಸಾಲಿನಲ್ಲಿ ನಾರಾಯಣ ಗುರೂಜಿ ಪ್ರಥಮರು. ಜಾತಿಯಲ್ಲಿ ಮೇಲು ಕೀಳು ಭಾವನೆಯನ್ನು ತೊಲಗಿಸುವಲ್ಲಿ ಅವರು ಮಾಡಿದ ಹೋರಾಟ ಅವಿಸ್ಮರಣೀಯ ಎಂದರು.
ಕೇರಳದಲ್ಲಿ ಹಿಂದೆ ಕೆಳವರ್ಗದವರ ಮೇಲಿನ ಶೋಷಣೆ, ಜಾತಿ ವ್ಯವಸ್ಥೆ ಹೆಚ್ಚಾಗಿ ಕಂಡು ಬರುತ್ತಿತ್ತು. ಅಲ್ಲಿನ ಈಡಿಗ, ದಲಿತ ಸಮಾಜದಂತಹ ಹಿಂದುಳಿದ ಸಮಾಜದವರಿಗೆ ದಾಸ್ಯ ಪದ್ಧತಿ, ಹೆಚ್ಚು ತೆರಿಗೆ ವಿಧಿಸುವುದು, ಶಿಕ್ಷಣದಿಂದ ದೂರವಿಟ್ಟು ಶೋಷಿಸುತ್ತಿದ್ದರು. ಈ ವೇಳೆ ಶಿಕ್ಷಣದಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲವಾಗಿ, ಉದ್ಯೋಗ ಮಾಡಿ ಸಶಸ್ತ್ರರಾಗಿ ಎಂಬುದಾಗಿ ನಾರಾಯಣ ಗುರು ಕೇರಳದ ಜನತೆಗೆ ಕರೆ ನೀಡಿದರು ಎಂದು ತಿಳಿಸಿದರು.
ಶಿಕ್ಷಣದ ಕುರಿತಾಗಿಯೂ ಒತ್ತು ನೀಡಿದ್ದರು. ರಾಜ್ಯಾದ್ಯಂತ 22 ಶಾಲೆಗಳನ್ನು ನಿರ್ಮಿಸಿದ್ದಾರೆ. ದೇವಸ್ಥಾನಗಳಲ್ಲಾಗುವ ಧೋರಣೆ ಕಂಡು ಶೋಷಿತರಿಗಾಗಿಯೇ ಸುಮಾರು 64 ದೇವಸ್ಥಾನಗಳನ್ನು ನಿರ್ಮಿಸಿ, ಮುಕ್ತ ಅವಕಾಶ ಕಲ್ಪಿಸಿದ್ದಾರೆ. ಜನಜಾಗೃತಿ ಆಂದೋಲನಕ್ಕೆ ಅಡಿಪಾಯ ಹಾಕಿದ ನಾರಾಯಣರು ಸಮಾಜಕ್ಕೇ ಗುರುವಾದರು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನಕುಮಾರ್, ನಗರಸಭೆ ಪೌರಾಯುಕ್ತ ಚಂದ್ರಪ್ಪ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಜಿಪಂ ಉಪ ಕಾರ್ಯದರ್ಶಿ ಮಹಮ್ಮದ್ ಮುಬಿನ್ ಹಾಗೂ ಈಡಿಗ ಸಮಾಜದ ಮುಖಂಡ ಜೀವನ್ ಸೇರಿದಂತೆ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ