ಪೌರತ್ವ ಕಾಯ್ದೆ ಮುಸ್ಲಿಂ ವಿರೋಧಿಯಲ್ಲ

ಬಿಜೆಪಿ ಕಾರ್ಯಾಗಾರಧರ್ಮದ ಆಧಾರ ಮೇಲೆ ದೇಶ ವಿಭಜಿಸದಿದ್ದರೆ ಸಮಸ್ಯೆ ಬರುತ್ತಿರಲಿಲ್ಲ: ಭಟ್‌

Team Udayavani, Dec 28, 2019, 11:25 AM IST

28-December-3

ಚಿತ್ರದುರ್ಗ: ಪೌರತ್ವ ಕಾಯ್ದೆ ಮುಸ್ಲಿಂ ವಿರೋಧಿಯಲ್ಲ. ಇದು ಪೌರತ್ವ ಕೊಡಲು ಇರುವ ಕಾಯ್ದೆಯೇ ಹೊರತು ತೆಗೆದು ಹಾಕುವ ಕಾಯ್ದೆಯಲ್ಲ ಎಂದು ಬಿಜೆಪಿ ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ವಿಶ್ವನಾಥ್‌ ಭಟ್‌ ಸ್ಪಷ್ಟಪಡಿಸಿದರು.

ನಗರದ ಜಗಳೂರು ಮಹಾಲಿಂಗಪ್ಪ ಸಭಾಂಗಣದಲ್ಲಿ ಶುಕ್ರವಾರ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆ ಬಿಜೆಪಿ ಪ್ರಮುಖರು, ಕಾರ್ಯಕರ್ತರಿಗೆ ಆಯೋಜಿಸಿದ್ದ ಪೌರತ್ವ ಕಾಯಿದೆ-2019 ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಬಹಳ ಹಿಂದೆಯೇ ಗಾಂಧೀಜಿ ಕೂಡಾ ಅಕ್ಕಪಕ್ಕದ ರಾಷ್ಟ್ರಗಳ ಧಾರ್ಮಿಕ ಅಲ್ಪ ಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಬಗ್ಗೆ ಮಾತನಾಡಿದ್ದಾರೆ. ನೆಹರೂ ಕೂಡಾ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಕೂಡಾ ಪೌರತ್ವ ನೀಡುವ ಬಗ್ಗೆ ಮಾತನಾಡಿದ್ದಾರೆ.

ಆದರೆ ಆಗ ರಾಜ್ಯಸಭೆಯಲ್ಲಿ ಬಹುಮತ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು. ಧರ್ಮದ ಆಧಾರದ ಮೇಲೆ ಪಾಕಿಸ್ತಾನ ಮತ್ತು ಭಾರತ ವಿಭಜಿಸದಿದ್ದರೆ ಇಂದು ಪೌರತ್ವದ ಸಮಸ್ಯೆಯೇ ಬರುತ್ತಿರಲಿಲ್ಲ. ದೇಶವನ್ನು ಧರ್ಮದ ಆಧಾರದ ಮೇಲೆ ಇಬ್ಭಾಗ ಮಾಡುವುದರಲ್ಲಿ ಮುಸ್ಲಿಂ ಲೀಗ್‌ ಎಷ್ಟು ಕಾರಣವೋ ಕಾಂಗ್ರೆಸ್‌ ಕೂಡಾ ಅಷ್ಟೆ ಜವಾಬ್ದಾರಿ ಹೊಂದಿದೆ. ಪ್ರತ್ಯೇಕ ಮುಸ್ಲಿಂ ರಾಷ್ಟ್ರ ಮಾಡಿಕೊಂಡು ಹೋದವರು ಆ ದೇಶದ ರಾಷ್ಟ್ರೀಯ ಧರ್ಮ ಇಸ್ಲಾಂ ಎಂದು ಕರೆದುಕೊಂಡರು. ಆದರೆ, ನಾವು ಹಾಗೆ ಮಾಡದೇ ಜಾತ್ಯತೀತ ರಾಷ್ಟ್ರ ಎಂದು ಕರೆದುಕೊಂಡಿದ್ದೇದ್ದೇವೆ ಎಂದು ತಿಳಿಸಿದರು.

1971ರಲ್ಲಿ ಇಂದಿರಾ ಗಾಂಧಿ  ಅವರು ಈ ಕಾಯ್ದೆ ಅನುಷ್ಠಾನ ಮಾಡಿದ್ದರು. ಮುಸ್ಲಿಮರು, ಹಿಂದುಗಳು ಎನ್ನದೇ ಎಲ್ಲರಿಗೂ ಪೌರತ್ವ ನೀಡಿದ್ದಾರೆ. ರಾಜೀವ್‌ ಗಾಂಧಿ  ಅಧಿಕಾರಕ್ಕೆ ಬಂದಾಗ ಉಗಾಂಡದಿಂದ ಬಂದವರಿಗೆ ಪೌರತ್ವ ನೀಡಿದ್ದಾರೆ. ಆದರೆ ಪಾಕಿಸ್ತಾನದಿಂದ ಬಂದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಅಚ್ಚರಿ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರ ರಾತ್ರಿ ಬೆಳಗಾಗುವುದರಲಿ ಕಾಯ್ದೆ ಜಾರಿಗೊಳಿಲ್ಲ, 2014ರ ಚುನಾವಣಾ ಪ್ರಣಾಳಿಕೆಯಲ್ಲೇ ಘೋಷಿಸಲಾಗಿತ್ತು. ಪೌರತ್ವ ಕಾಯ್ದೆ ಅನುಷ್ಠಾನಕ್ಕೂ ಮುನ್ನ ಗೃಹ ಸಚಿವ ಅಮಿತ್‌ ಶಾ ಅವರು ಸುಮಾರು 140 ಎನ್‌ಜಿಒಗಳು. ದೇಶದ ಎಲ್ಲ ಮುಖ್ಯಮಂತ್ರಿಗಳ ಜೊತೆ, ಎಲ್ಲ ರಾಜಕೀಯ ಪಕ್ಷಗಳ ಜೊತೆ 191 ಗಂಟೆಗಳ ಕಾಲ ಚರ್ಚಿಸಿ ಅದರ ಪ್ರಮುಖ ಅಂಶಗಳನ್ನು ಕ್ರೂಢಿಕರಿಸಿ ಕಾಯ್ದೆಯಾಗಿಸಿದ್ದಾರೆ ಎಂದರು.

1947ರಲ್ಲಿ ನೆರೆಯ ಪಾಕಿಸ್ತಾನದಲ್ಲಿ ಶೇ.80ರಷ್ಟಿದ್ದ ಮುಸ್ಲಿಮರು ಈಗ ಶೇ.97ಕ್ಕೆ ಬಂದಿದ್ದಾರೆ. ಅದೇ ರೀತಿ ಶೇ.13ರಷ್ಟಿದ್ದ ಹಿಂದೂಗಳು, ಈಗ ಶೇ.1.6ಕ್ಕೆ ಕುಸಿದಿದ್ದಾರೆ. ಆ ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಗಣನೀಯ ಏರಿಕೆ ಕಂಡರೆ, ಹಿಂದುಗಳ ಸಂಖ್ಯೆ ಕ್ಷೀಣಿಸಿದೆ. ಅಲ್ಲಿನ ಹಿಂದುಗಳ ಮೇಲೆ ಅತ್ಯಾಚಾರ, ಕೊಲೆ, ಬಲತ್ಕಾರಗಳೇ ಪ್ರಮುಖ ಕಾರಣ.

ಬಾಂಗ್ಲಾದೇಶದಲ್ಲಿ 1951ರಲ್ಲಿ ಶೇ.22ರಷ್ಟಿದ್ದ ಹಿಂದೂಗಳು ಈಗ ಶೇ.7ಕ್ಕೆ ತಲುಪಿದ್ದಾರೆ ಎಂದರು. ಪೌರತ್ವ ಕಾಯ್ದೆ ಅನುಷ್ಠಾನದಿಂದ ರಾಜ್ಯದ ನಾನಾ ಭಾಗಗಳಲ್ಲಿ ಅನೇಕ ಅನಾಹುತಗಳು ಸಂಭವಿಸುತ್ತಿವೆ. ಇದರಿಂದ ಸುಮಾರು 10 ಲಕ್ಷ ಕೋಟಿ ನಷ್ಟ
ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಈ ಹಣದಿಂದ ಸುಮಾರು 70 ಲಕ್ಷ ಮನೆಗಳನ್ನು ನಿರ್ಮಿಸಬಹುದಿತ್ತು. 6 ಕೋಟಿ ಜನರಿಗೆ ಉಚಿತ ಗ್ಯಾಸ್‌ ಸಂಪರ್ಕ ಕಲ್ಪಿಸಬಹುದಾಗಿತ್ತು ಎಂದರು.

ಬಿಜೆಪಿ ವಿಭಾಗೀಯ ಪ್ರಭಾರಿ ಜಿ.ಎಂ.ಸುರೇಶ್‌ ಮಾತನಾಡಿ, ಕಳೆದ 6 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನೇಕ ಶಾಸನಗಳನ್ನು ರೂಪಿಸಿದೆ. ಆದರೆ ವಿರೋಧ ಪಕ್ಷಗಳಿಗೆ ಎಲ್ಲಿಯೂ ಆಡಳಿತ ಪಕ್ಷದ ವಿರುದ್ಧ ತಿರುಗಿ ಬೀಳುವ ಪ್ರಮೇಯವೇ ಬರಲಿಲ್ಲ. ಆದರೆ ಪೌರತ್ವ ಕಾಯ್ದೆಯಿಂದ ವಿರೋಧ ಪಕ್ಷಗಳು ಒಂದು ವರ್ಗವನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ. ಕಾಯ್ದೆಯಿಂದ ಭಾರತದ ಮುಸ್ಲಿಮರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಈ ಬಗ್ಗೆ ಮನೆ ಮನೆಗೆ ಬಿಜೆಪಿ ಕಾರ್ಯಕರ್ತರು ತೆರಳಿ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌, ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ| ಲಿಂಗಪ್ಪ, ಮಾಜಿ ಶಾಸಕರಾದ ಬಿ.ಪಿ.ಹರೀಶ್‌, ರಾಮಪ್ಪ, ಬವಸರಾಜ ನಾಯ್ಕ, ಮಾಜಿ ಎಂಎಲ್‌ಸಿ ಶಿವಯೋಗಿಸ್ವಾಮಿ ಮತ್ತಿತರಿದ್ದರು.

ಬಿಜೆಪಿ ಸರ್ಕಾರ ರಾತ್ರಿ ಬೆಳಗಾಗುವುದರಲ್ಲಿ ಕಾಯ್ದೆ
ಜಾರಿಗೊಳಿಲ್ಲ, 2014ರ ಚುನಾವಣಾ ಪ್ರಣಾಳಿಕೆಯಲ್ಲೇ ಘೋಷಿಸಲಾಗಿತ್ತು. ಪೌರತ್ವ ಕಾಯ್ದೆ ಅನುಷ್ಠಾನಕ್ಕೂ ಮುನ್ನ ಗೃಹ ಸಚಿವ ಅಮಿತ್‌ ಶಾ ಅವರು ಸುಮಾರು 140 ಎನ್‌ ಜಿಒಗಳು. ದೇಶದ ಎಲ್ಲ ಮುಖ್ಯಮಂತ್ರಿಗಳ ಜೊತೆ, ಎಲ್ಲ ರಾಜಕೀಯ ಪಕ್ಷಗಳ ಜೊತೆ
191 ಗಂಟೆಗಳ ಕಾಲ ಚರ್ಚಿಸಿ ಅದರ ಪ್ರಮುಖ ಅಂಶಗಳನ್ನು ಕ್ರೊಡೀಕರಿಸಿ ಕಾಯ್ದೆಯಾಗಿಸಿದ್ದಾರೆ.
ವಿಶ್ವನಾಥ್‌ ಭಟ್‌,
ರಾಜ್ಯ ಸಂಚಾಲಕರು,
ಬಿಜೆಪಿ ಆರ್ಥಿಕ ಪ್ರಕೋಷ್ಠ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.